AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಮಾದರಿಯಲ್ಲೇ ಭಾರತದಲ್ಲೂ ಸಿದ್ಧವಾಗುತ್ತಿದೆ ಗಾಜಿನ ಸೇತುವೆ: ಎಲ್ಲಿ ಗೊತ್ತಾ?

ಪ್ರಕೃತಿ ಸಫಾರಿ ಯೋಜನೆ ಅಡಿಯಲ್ಲಿ ಗಾಜಿನ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರ ಜೊತೆಗೆ ಜಿಪ್​ ಲೈನ್​, ಜಿಪ್ ಬೈಕ್​ ಕಾರ್ಯಗಳು ಕೂಡ ನಡೆಯುತ್ತಿವೆ.

ಚೀನಾ ಮಾದರಿಯಲ್ಲೇ ಭಾರತದಲ್ಲೂ ಸಿದ್ಧವಾಗುತ್ತಿದೆ ಗಾಜಿನ ಸೇತುವೆ: ಎಲ್ಲಿ ಗೊತ್ತಾ?
ಗಾಜಿನ ಸೇತುವೆ ಪರಿಶೀಲಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 5:50 PM

Share

ನವದೆಹಲಿ: ಚೀನಾದ ಗಾಜಿನ ಸೇತುವೆ ಬಗ್ಗೆ ಅನೇಕರು ಕೇಳಿರುತ್ತಾರೆ. ಈಗ ಅದೇ ಮಾದರಿಯಲ್ಲಿ ಭಾರತದಲ್ಲೂ ಗ್ಲಾಸ್​ ಬ್ರಿಡ್ಜ್​ ಸಿದ್ಧಗೊಳ್ಳುತ್ತಿದೆ. ಪ್ರವಾಸಿಗರ ಹಾಟ್​ಸ್ಪಾಟ್​ ಎನಿಸಿಕೊಂಡಿರುವ ಬಿಹಾರದ ರಾಜ್‌ಗೀರ್​ನಲ್ಲಿ ಈ ಗಾಜಿನ್​ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಇಂದು ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಗಾಜಿನ ಸೇತುವೆ ನಿರ್ಮಾಣ ಕಾರ್ಯದ ಪರಿಶೀಲನೆ ನಡೆಸಿದರು. ಮುಂದಿನ ಮಾರ್ಚ್​ ವೇಳೆಗೆ ಈ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊರೊನಾ ವೈರಸ್​ನಿಂದಾಗಿ ಪ್ರವಾಸೋದ್ಯಮ ನೆಲಕಚ್ಚಿದೆ. ಆದರೆ, ಮುಂದಿನ ಮಾರ್ಚ್​ ವೇಳೆಗೆ ಎಲ್ಲವೂ ಬಹುತೇಕ ಸಮಸ್ಥಿತಿಗೆ ಬರುವ ನಿರೀಕ್ಷೆ ಇದೆ. ಹೀಗಾಗಿ, ಮಾರ್ಚ್​ನಲ್ಲಿ ಇದರ ಕಾಮಗಾರಿ ಪೂರ್ಣಗೊಂಡರೆ ಏಪ್ರಿಲ್, ಮೇನಲ್ಲಿ ಹೆಚ್ಚು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಲು ಸಹಕಾರಿಯಾಗಲಿದೆ ಎನ್ನುವ ಉದ್ದೇಶದಿಂದ ನಿತೀಶ್​ ಕುಮಾರ್​ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.

ಪ್ರಕೃತಿ ಸಫಾರಿ ಯೋಜನೆ ಅಡಿಯಲ್ಲಿ ಗಾಜಿನ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರ ಜೊತೆಗೆ ಜಿಪ್​ ಲೈನ್​, ಜಿಪ್ ಬೈಕ್​ ಕಾರ್ಯಗಳು ಕೂಡ ನಡೆಯುತ್ತಿವೆ. ಇವುಗಳ ಪರಿಶೀಲನೆಯನ್ನು ಕೂಡ ನಿತೀಶ್​ ಕುಮಾರ್ ಮಾಡಿದರು.

ಬಿಹಾರ ಸಿಎಂ ಆದ ನಂತರ ನಿತಿಶ್​ ಕುಮಾರ್​ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ದೇಶನ ನೀಡಿದ್ದರು. ಇದು ಅವರ ಕನಸಿನ ಯೋಜನೆ ಕೂಡ ಹೌದು. ಹೀಗಾಗಿ, ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಬೇಕು ಎನ್ನುವ ಕನಸನ್ನು ಕಾಣುತ್ತಿದ್ದಾರೆ.

ಪ್ರಕೃತಿ ಸಫಾರಿ ಜೊತೆಗೆ ಇಲ್ಲಿ ಝೂ ಸಫಾರಿ ಕೂಡ ಇರಲಿದೆ. ಪ್ರಾಣಿಗಳ ಮಧ್ಯೆ ವಾಹನದಲ್ಲಿ ಸಂಚಾರ ನಡೆಸಲು ಅನುವು ಮಾಡಿಕೊಡಲು ಅಗಲವಾದ ರಸ್ತೆಗಳನ್ನು ಕೂಡ ನಿರ್ಮಾಣ ಮಾಡಲಾಗಿದೆ. ಇನ್ನು ಅನಾರೋಗ್ಯ ಪ್ರಾಣಿಗಳನ್ನು ಕೂಡಿಡಲು ವಿಶೇಷ ಪಂಜರಗಳನ್ನು ಕೂಡ ನಿರ್ಮಾಣ ಮಾಡಲಾಗಿದೆ.

ಚೀನಾದಲ್ಲಿದೆ ಗಾಜಿನೆ ಸೇತುವೆ

ಚೀನಾದ ಜಾಂಗ್ಜಿಯಾಜಿದಲ್ಲಿ ಗಾಜಿನ ಸೇತುವೆ ಇದೆ. 2016ರ ಆಗಸ್ಟ್​ ತಿಂಗಳಲ್ಲಿ ಈ ಸೇತುವೆ ಲೋಕಾರ್ಪಣೆಗೊಂಡಿತ್ತು. ಸುಮಾರು ಅರ್ಧ ಕಿ.ಮೀ ಇರುವ ಈ ಸೇತುವೆ ಮೇಲೆ ಒಂದೇ ಬಾರಿಗೆ 800 ಜನರು ಓಡಾಡಬಹುದು. ಈ ಸೇತುವೆ ಮೇಲೆ ಓಡಾಡುವಾಗ ಆಳದ ಕಂದಕಗಳು ಪಾರದರ್ಶಕ ಗ್ಲಾಸ್​ನಿಂದ ಕಾಣಿಸುತ್ತವೆ. ಹೀಗಾಗಿ, ಅನೇಕರು ಇದರ ಮೇಲೆ ಓಡಾಟ ನಡೆಸಲು ಭಯ ಬಿದ್ದ ಉದಾಹರಣೆ ಇದೆ.

 

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್