AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಕೊರೊನಾ ಲಸಿಕೆ ಉಚಿತ : ಚುನಾವಣಾ ಭರವಸೆ ಉಳಿಸಿಕೊಂಡ ನಿತೀಶ್ ಸರ್ಕಾರ

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಚುನಾವಣಾ ಪೂರ್ವ ಭರವಸೆ ಈಡೇರಿಸಲು ಮುಂದಾಗಿದ್ದು, ಉಚಿತವಾಗಿ ಲಸಿಕೆ ನೀಡಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬಿಹಾರದಲ್ಲಿ ಕೊರೊನಾ ಲಸಿಕೆ ಉಚಿತ : ಚುನಾವಣಾ ಭರವಸೆ ಉಳಿಸಿಕೊಂಡ ನಿತೀಶ್ ಸರ್ಕಾರ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Mar 01, 2021 | 3:46 PM

Share

ಪಾಟ್ನಾ: ಬಿಹಾರದ ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಉಚಿತವಾಗಿ ಕೊವಿಡ್ ಲಸಿಕೆ ನೀಡಿದ್ದು, ಲಸಿಕೆಯ ವೆಚ್ಚವನ್ನು ಬಿಹಾರ ಸರ್ಕಾರ ಭರಿಸಲಿದೆ. ಆ ಮೂಲಕ ಪ್ರತಿಯೊಂದು ಆಸ್ಪತ್ರೆಗೂ ಲಸಿಕೆ ಸಾಮರ್ಥ್ಯ ಒದಗಿಸಬೇಕು ಎಂಬ ನಿರ್ಧಾರವನ್ನು ಇಲ್ಲಿನ ಸರ್ಕಾರ ಮಾಡಿದೆ.

ಬಿಹಾರ ಸರ್ಕಾರ ವಿಧಾನ ಸಭಾ ಚುನಾವಣೆ ವೇಳೆ ಉಚಿತವಾಗಿ ಎಲ್ಲರಿಗೂ ಲಸಿಕೆ ನೀಡುವ ಭರವಸೆ ನೀಡಿತ್ತು. ಅದರಂತೆ ಈಗ ಅಸ್ತಿತ್ವದಲ್ಲಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಚುನಾವಣಾ ಪೂರ್ವ ಭರವಸೆ ಈಡೇರಿಸಲು ಮುಂದಾಗಿದ್ದು, ಉಚಿತವಾಗಿ ಲಸಿಕೆ ನೀಡಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಿದೆ. 60 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಮಧುಮೇಹ ಸೇರಿದಂತೆ ಕೋವಿಡೇತರ 20 ಕಾಯಿಲೆಯನ್ನು ಎದುರಿಸುತ್ತಿರುವ 45ರಿಂದ 59 ವರ್ಷದೊಳಗಿನವರಿಗೂ ಲಸಿಕೆ ನೀಡಲಿದ್ದಾರೆ. ದೇಶದ 10000 ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗಿದ್ದು, 25000 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗಿದೆ.

ಎರಡನೆ ಹಂತದ ಲಸಿಕೆ ನೀಡುವಿಕೆ ಪ್ರಕ್ರಿಯೆಗಾಗಿ ಕೊವಿನ್ 2.0 ಆ್ಯಪ್​​ ಅಪ್​ಗ್ರೇಡ್ ಮಾಡಿದ್ದು,​ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1 ಕೊವಿಡ್ ಲಸಿಕೆಗೆ 250 ರೂಪಾಯಿ ಹಣ ಪಾವತಿಸಿ ಲಸಿಕೆ ಪಡೆಯಬೇಕಾಗಿದೆ. ಇನ್ನು ಲಸಿಕೆ ಪಡೆಯಲು ಕೊವಿನ್ ಌಪ್​ ಮತ್ತು ಆರೋಗ್ಯಸೇತು ಮೂಲಕ ನೋಂದಾಯಿಸಿಕೊಳ್ಳಬಹುದಾಗಿದ್ದು, ಲಸಿಕಾ ಕೇಂದ್ರಕ್ಕೆ ತೆರಳಿ ನೋಂದಾಯಿಸಿಕೊಳ್ಳಲು ಕೂಡ ಅವಕಾಶ ಇದೆ.

ಕೊವಿನ್ ಆ್ಯಪ್​​ನಲ್ಲಿ ಆಸ್ಪತ್ರೆ ಸಾಮರ್ಥ್ಯದ ಬಗ್ಗೆ ತಿಳಿಸಲಾಗಿದ್ದು, ಸೇವಾ ಕೇಂದ್ರಗಳಲ್ಲಿ ಲಸಿಕೆಗಾಗಿ ರಿಜಿಸ್ಟ್ರೇಷನ್​ಗೆ ಅವಕಾಶ ಕೂಡ ನೀಡಲಾಗಿದೆ. ಯಾವ ಕಂಪನಿಯೂ ಕೂಡ ಲಸಿಕೆ ಬೇಕು ಎಂದು ಆಯ್ಕೆ ಮಾಡಿಕೊಳ್ಳುವಂತಿಲ್ಲ ಹಾಗೂ ಒಂದು ಮೊಬೈಲ್​ನಿಂದ ನಾಲ್ವರ ರಿಜಿಸ್ಟ್ರೇಷನ್​ಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಸೂಚಿಸಿದ್ದು, ಕೇಂದ್ರ ಸಚಿವರು ಕೂಡ ಹಣ ನೀಡಿ ಲಸಿಕೆ ಪಡೆಯಬೇಕು ಎಂದು ಸರ್ಕಾರ ತಿಳಿಸಲಾಗಿದೆ.

ಇದನ್ನೂ ಓದಿ: Covid-19 Vaccine Cowin Registration: ಕೊರೊನಾ ಲಸಿಕೆ ಪಡೆಯಲು ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಹೇಗೆ?

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ