AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಕೊರೊನಾ ಲಸಿಕೆ ಉಚಿತ : ಚುನಾವಣಾ ಭರವಸೆ ಉಳಿಸಿಕೊಂಡ ನಿತೀಶ್ ಸರ್ಕಾರ

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಚುನಾವಣಾ ಪೂರ್ವ ಭರವಸೆ ಈಡೇರಿಸಲು ಮುಂದಾಗಿದ್ದು, ಉಚಿತವಾಗಿ ಲಸಿಕೆ ನೀಡಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಬಿಹಾರದಲ್ಲಿ ಕೊರೊನಾ ಲಸಿಕೆ ಉಚಿತ : ಚುನಾವಣಾ ಭರವಸೆ ಉಳಿಸಿಕೊಂಡ ನಿತೀಶ್ ಸರ್ಕಾರ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Mar 01, 2021 | 3:46 PM

Share

ಪಾಟ್ನಾ: ಬಿಹಾರದ ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲ ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಉಚಿತವಾಗಿ ಕೊವಿಡ್ ಲಸಿಕೆ ನೀಡಿದ್ದು, ಲಸಿಕೆಯ ವೆಚ್ಚವನ್ನು ಬಿಹಾರ ಸರ್ಕಾರ ಭರಿಸಲಿದೆ. ಆ ಮೂಲಕ ಪ್ರತಿಯೊಂದು ಆಸ್ಪತ್ರೆಗೂ ಲಸಿಕೆ ಸಾಮರ್ಥ್ಯ ಒದಗಿಸಬೇಕು ಎಂಬ ನಿರ್ಧಾರವನ್ನು ಇಲ್ಲಿನ ಸರ್ಕಾರ ಮಾಡಿದೆ.

ಬಿಹಾರ ಸರ್ಕಾರ ವಿಧಾನ ಸಭಾ ಚುನಾವಣೆ ವೇಳೆ ಉಚಿತವಾಗಿ ಎಲ್ಲರಿಗೂ ಲಸಿಕೆ ನೀಡುವ ಭರವಸೆ ನೀಡಿತ್ತು. ಅದರಂತೆ ಈಗ ಅಸ್ತಿತ್ವದಲ್ಲಿರುವ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ಚುನಾವಣಾ ಪೂರ್ವ ಭರವಸೆ ಈಡೇರಿಸಲು ಮುಂದಾಗಿದ್ದು, ಉಚಿತವಾಗಿ ಲಸಿಕೆ ನೀಡಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಇಂದಿನಿಂದ ದೇಶಾದ್ಯಂತ ಎರಡನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಿದೆ. 60 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಮಧುಮೇಹ ಸೇರಿದಂತೆ ಕೋವಿಡೇತರ 20 ಕಾಯಿಲೆಯನ್ನು ಎದುರಿಸುತ್ತಿರುವ 45ರಿಂದ 59 ವರ್ಷದೊಳಗಿನವರಿಗೂ ಲಸಿಕೆ ನೀಡಲಿದ್ದಾರೆ. ದೇಶದ 10000 ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗಿದ್ದು, 25000 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗಿದೆ.

ಎರಡನೆ ಹಂತದ ಲಸಿಕೆ ನೀಡುವಿಕೆ ಪ್ರಕ್ರಿಯೆಗಾಗಿ ಕೊವಿನ್ 2.0 ಆ್ಯಪ್​​ ಅಪ್​ಗ್ರೇಡ್ ಮಾಡಿದ್ದು,​ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1 ಕೊವಿಡ್ ಲಸಿಕೆಗೆ 250 ರೂಪಾಯಿ ಹಣ ಪಾವತಿಸಿ ಲಸಿಕೆ ಪಡೆಯಬೇಕಾಗಿದೆ. ಇನ್ನು ಲಸಿಕೆ ಪಡೆಯಲು ಕೊವಿನ್ ಌಪ್​ ಮತ್ತು ಆರೋಗ್ಯಸೇತು ಮೂಲಕ ನೋಂದಾಯಿಸಿಕೊಳ್ಳಬಹುದಾಗಿದ್ದು, ಲಸಿಕಾ ಕೇಂದ್ರಕ್ಕೆ ತೆರಳಿ ನೋಂದಾಯಿಸಿಕೊಳ್ಳಲು ಕೂಡ ಅವಕಾಶ ಇದೆ.

ಕೊವಿನ್ ಆ್ಯಪ್​​ನಲ್ಲಿ ಆಸ್ಪತ್ರೆ ಸಾಮರ್ಥ್ಯದ ಬಗ್ಗೆ ತಿಳಿಸಲಾಗಿದ್ದು, ಸೇವಾ ಕೇಂದ್ರಗಳಲ್ಲಿ ಲಸಿಕೆಗಾಗಿ ರಿಜಿಸ್ಟ್ರೇಷನ್​ಗೆ ಅವಕಾಶ ಕೂಡ ನೀಡಲಾಗಿದೆ. ಯಾವ ಕಂಪನಿಯೂ ಕೂಡ ಲಸಿಕೆ ಬೇಕು ಎಂದು ಆಯ್ಕೆ ಮಾಡಿಕೊಳ್ಳುವಂತಿಲ್ಲ ಹಾಗೂ ಒಂದು ಮೊಬೈಲ್​ನಿಂದ ನಾಲ್ವರ ರಿಜಿಸ್ಟ್ರೇಷನ್​ಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಸೂಚಿಸಿದ್ದು, ಕೇಂದ್ರ ಸಚಿವರು ಕೂಡ ಹಣ ನೀಡಿ ಲಸಿಕೆ ಪಡೆಯಬೇಕು ಎಂದು ಸರ್ಕಾರ ತಿಳಿಸಲಾಗಿದೆ.

ಇದನ್ನೂ ಓದಿ: Covid-19 Vaccine Cowin Registration: ಕೊರೊನಾ ಲಸಿಕೆ ಪಡೆಯಲು ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಹೇಗೆ?

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್