Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಲೋಕಸಭೆ ಚುನಾವಣೆಗೂ ಮುನ್ನ ಬಿಹಾರ ರಾಜ್ಯ ಸರ್ಕಾರ (Bihar State government) ಜಾತಿ ಆಧಾರಿತ ಜನಗಣತಿಯ ವರದಿ ಬಿಡುಗಡೆ (caste-based survey report) ಮಾಡಿದೆ. ಬಿಹಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿವೇಕ್ ಕುಮಾರ್ ಸಿಂಗ್ ಇಂದು (ಸೆ.2) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52
ನಿತೀಶ್​​ ಕುಮಾರ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 02, 2023 | 2:36 PM

ಬಿಹಾರ, ಅ.2: 2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಹಾರದ ರಾಜ್ಯ ಸರ್ಕಾರ (Bihar State government) ಜಾತಿ ಆಧಾರಿತ ಜನಗಣತಿಯ ವರದಿ ಬಿಡುಗಡೆ (caste-based survey report) ಮಾಡಿದೆ. ಈ ಬಗ್ಗೆ ಬಿಹಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿವೇಕ್ ಕುಮಾರ್ ಸಿಂಗ್ ಇಂದು (ಸೆ.2) ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಿಹಾರದಲ್ಲಿ  ಹಿಂದುಳಿದ ವರ್ಗ 27.13% ಮತ್ತು ಅತ್ಯಂತ ಹಿಂದುಳಿದ ವರ್ಗ 36.01%, , ಸಾಮಾನ್ಯ ವರ್ಗ 15.52%. ಬಿಹಾರದ ಒಟ್ಟು ಜನಸಂಖ್ಯೆ 13 ಕೋಟಿಗಿಂತ ಹೆಚ್ಚಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ ಜಾತಿ ಸಮೀಕ್ಷೆ ಕೆಲವು ವರ್ಷಗಳ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿತ್ತು, ರಾಜಕೀಯ ಲಾಭಕ್ಕಾಗಿ ನಿತೀಶ್​​ ಕುಮಾರ್​ ನೇತೃತ್ವದ ಸರ್ಕಾರ ಈ ಸಮೀಕ್ಷೆಯನ್ನು ಮಾಡುತ್ತಿದ್ದಾರೆ ಎಂಬ ವಾದಗಳು ಬಂದಿದೆ.

ಲೋಕಸಭೆ ಚುನಾವಣೆಯನ್ನು ಮುಂದಿಟ್ಟಿಕೊಂಡು ಸರ್ಕಾರ ಈ ಸಮೀಕ್ಷೆಯನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಬಿಹಾರ 13 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಜ್ಯ. ಈ ಪೈಕಿ ಹಿಂದೂ ಸಮುದಾಯದ ಜನಸಂಖ್ಯೆ 81.9%ದಷ್ಟು, ಮುಸ್ಲಿಂ ಜನಸಂಖ್ಯೆ 17.7%ದಷ್ಟು, ಕ್ರಿಶ್ಚಿಯನ್ 0.05%ದಷ್ಟು, ಸಿಖ್- 0.01%ದಷ್ಟು, ಬೌದ್ಧ 0.08%ದಷ್ಟು, ಜೈನ 0.0096%ದಷ್ಟು ಮತ್ತು ಇತರ ಧರ್ಮಗಳ ಜನಸಂಖ್ಯೆ 0.12%ದಷ್ಟು ಇದೆ ಎಂದು ಈ ಸಮೀಕ್ಷೆ ವಿವರಿಸಿದೆ.

ರಾಜ್ಯದ ಅರ್ಧದಷ್ಟು ಜನಸಂಖ್ಯೆಯು ಹಿಂದುಗಳಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಯಾದವರ ಸಂಖ್ಯೆ ಶೇ.14ರಷ್ಟಿದೆ. ಹಿಂದುಳಿದ ವರ್ಗದ ಜನಸಂಖ್ಯೆ 27 ಪ್ರತಿಶತ. ಅತ್ಯಂತ ಹಿಂದುಳಿದ ವರ್ಗದ ಜನಸಂಖ್ಯೆಯು ಶೇಕಡಾ 36 ರಷ್ಟಿದೆ. ಬ್ರಾಹ್ಮಣರ ಜನಸಂಖ್ಯೆಯು ಶೇಕಡಾ 3.3 ರಷ್ಟಿದೆ. ಕುರ್ಮಿ ​​ಜನಸಂಖ್ಯೆ 2.87 ಪ್ರತಿಶತದಷ್ಟಿದೆ ಎಂದು ವರದಿ ಹೇಳಿದೆ.

ಈ ಹಿಂದೆ ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟಿನ ಆದೇಶವನ್ನು ಪ್ರಶ್ನಿಸಿ, ಬಿಹಾರ ಸರ್ಕಾರ ಸುಪ್ರೀಂನಲ್ಲಿ ಪ್ರಶ್ನಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತದೆ ಎಂದು ಪ್ರಶ್ನೆ ಮಾಡಿತ್ತು. ಈ ಬಗ್ಗೆ ಕೇಂದ್ರಕ್ಕೂ ನೋಟಿಸ್​​ ಜಾರಿ ಮಾಡಿತ್ತು. ಸುಪ್ರೀಂನ ಈ ನಿಲ್ಲುವು ನಿತೀಶ್ ಸರ್ಕಾರಕ್ಕೆ ಆನೆಬಲ ಸಿಕ್ಕಂತಾಗಿತ್ತು. ಇನ್ನು ಈ ಜಾತಿ ಸಮೀಕ್ಷೆ ಬಡವರ ಸಮಗ್ರ ಸಾಮಾಜಿಕ, ಆರ್ಥಿಕ ದತ್ತಾಂಶವನ್ನು ಸಂಗ್ರಹಿಸಬಹುದು ಎಂಬ ಉದ್ದೇಶದಿಂದ ಬಿಹಾರ ಸರ್ಕಾರವು ಜಾತಿ ಗಣತಿ ಶುರು ಮಾಡಿದೆ, ಜಾತಿ ಹಾಗೂ ಸಮುದಾಯಗಳಿಗೆ ಅನುಗುಣವಾಗಿ ನೀತಿಗಳನ್ನು ರೂಪಿಸಲು ಅನುಕೂಲವಾಗುತ್ತದೆ. ಆದರೆ, ವಿಶೇಷವಾಗಿ ಒಬಿಸಿಗಳು ಮತ್ತು ಇತರ ಜಾತಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಿಲ್ಲ. ಈ ಕಾರಣದಿಂದಾಗಿ, ಅವರಿಗೆ ನಿರ್ದಿಷ್ಟ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸುವುದು ಕಷ್ಟಕರವಾಗಿದೆ. ಜಾತಿ ಸಮೀಕ್ಷೆಯು ವಿವಿಧ ಜಾತಿಗಳ ಸಮಾನ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಬಿಹಾರ ಸರ್ಕಾರದ ವಾದವಾಗಿದೆ.

ಇದನ್ನೂ ಓದಿ: ಬಿಹಾರದಲ್ಲಿ ಜಾತಿ ಸಮೀಕ್ಷೆ ನಡೆಸಿದರೆ ಏನಾಗುತ್ತೆ ? ಸುಪ್ರೀಂಕೋರ್ಟ್​ ಪ್ರಶ್ನೆ

ಬಿಹಾರದ ಜಾತಿ ಗಣತಿ ವರದಿ ಇಲ್ಲಿದೆ ನೋಡಿ

1.ಸಾಮಾನ್ಯ – 15.52%

2.EBC – 36.1%

3.OBC – 27.12%

4.ಪರಿಶಿಷ್ಟ ಜಾತಿ – 19.65%

5.ಪರಿಶಿಷ್ಟ ಪಂಗಡ – 1.68%

ಬಿಹಾರದಲ್ಲಿ ಯಾವ ಜಾತಿಯ ಜನಸಂಖ್ಯೆ ಎಷ್ಟು?

ಕೊಯಿರಿ- 4.2

ಕುರ್ಮಿ- 2.8

ಕಾಯಸ್ಥ- .60

ಮೋಚಿ, ರವಿದಾಸ್- 5.2

ಬ್ರಾಹ್ಮಣ- 3.65

ಭೂಮಿಹಾರ್- 2.86

ಮುಸಾಹರ್ – 3.08

ರಜಪೂತ- 3.45

ವ್ಯಾಪಾರಿ – 2.31

ನಾವಿಕ- 2.60

ಯಾದವ್- 14.26

ಬಿಹಾರದಲ್ಲಿ ಹಿಂದುಳಿದ ವರ್ಗದ ಜನಸಂಖ್ಯೆ ಎಷ್ಟು?

ಹಿಂದುಳಿದ ವರ್ಗ: 3,54,63,936

ಅತ್ಯಂತ ಹಿಂದುಳಿದ ವರ್ಗ: 4,70,80,514

ಪರಿಶಿಷ್ಟ ಜಾತಿ: 2,56,89,820

ಪರಿಶಿಷ್ಟ ಪಂಗಡ: 21,99,361

ಮೀಸಲಾತಿ ಹೊರತಾದ: 2,02,91,679

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:02 pm, Mon, 2 October 23

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ