AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಗೂ ಮುನ್ನವೇ ಪಾಳುಬಿದ್ದ ಆಸ್ಪತ್ರೆ, ಈಗ ಕಳ್ಳರ ಅಡಗುತಾಣ

ಹತ್ತು ವರ್ಷಗಳ ಹಿಂದೆ ಬರೋಬ್ಬರಿ 5 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಲಾಗಿದ್ದ ಆಸ್ಪತ್ರೆ ಉದ್ಘಾಟನೆಗೂ ಮುನ್ನವೇ ಪಾಳುಬಿದ್ದಿದೆ. ಬಿಹಾರದ ಮುಜಾಫರ್​ಪುರ್ ಜಿಲ್ಲೆಯಲ್ಲಿರುವ ಈ ಆಸ್ಪತ್ರೆ ಈಗ ಕಳ್ಳರ ಅಡಗುತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯವರೆಗೆ ಒಂದೇ ಒಂದು ರೋಗಿ ಕೂಡ ಈ ಆಸ್ಪತ್ರೆಯ ಮೆಟ್ಟಿಲು ಹತ್ತಿಲ್ಲ. ಆರು ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ 30 ಹಾಸಿಗೆಗಳಿರುವ ಈ ಆಸ್ಪತ್ರೆ ನೋಡಿದರೆ ಯಾವ ಕಡೆಯಿಂದಲೂ ಅದು ಹೊಸ ಆಸ್ಪತ್ರೆಯ ರೀತಿ ಕಾಣುವುದೇ ಇಲ್ಲ, ಭೂತ ಬಂಗಲೆಯಂತೆ ಭಾಸವಾಗುತ್ತೆ.

ಉದ್ಘಾಟನೆಗೂ ಮುನ್ನವೇ ಪಾಳುಬಿದ್ದ ಆಸ್ಪತ್ರೆ, ಈಗ ಕಳ್ಳರ ಅಡಗುತಾಣ
ಆಸ್ಪತ್ರೆ
ನಯನಾ ರಾಜೀವ್
|

Updated on: Sep 06, 2024 | 2:47 PM

Share

ಹತ್ತು ವರ್ಷಗಳ ಹಿಂದೆ ಬರೋಬ್ಬರಿ 5 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಲಾಗಿದ್ದ ಆಸ್ಪತ್ರೆ ಉದ್ಘಾಟನೆಗೂ ಮುನ್ನವೇ ಪಾಳುಬಿದ್ದಿದೆ. ಬಿಹಾರದ ಮುಜಾಫರ್​ಪುರ್ ಜಿಲ್ಲೆಯಲ್ಲಿರುವ ಈ ಆಸ್ಪತ್ರೆ ಈಗ ಕಳ್ಳರ ಅಡಗುತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯವರೆಗೆ ಒಂದೇ ಒಂದು ರೋಗಿ ಕೂಡ ಈ ಆಸ್ಪತ್ರೆಯ ಮೆಟ್ಟಿಲು ಹತ್ತಿಲ್ಲ. ಆರು ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ 30 ಹಾಸಿಗೆಗಳಿರುವ ಈ ಆಸ್ಪತ್ರೆ ನೋಡಿದರೆ ಯಾವ ಕಡೆಯಿಂದಲೂ ಅದು ಹೊಸ ಆಸ್ಪತ್ರೆಯ ರೀತಿ ಕಾಣುವುದೇ ಇಲ್ಲ, ಭೂತ ಬಂಗಲೆಯಂತೆ ಭಾಸವಾಗುತ್ತೆ.

ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಯು 10 ವರ್ಷಗಳ ಹಿಂದೆ ಈ ಆಸ್ಪತ್ರೆಯನ್ನು ನಿರ್ಮಿಸಿತ್ತು. ಈ ಬಗ್ಗೆ ಬಿಹಾರ ಸರ್ಕಾರಕ್ಕೆ ಮಾಹಿತಿ ಇಲ್ಲ, ಐದು ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿರುವ ಆಸ್ಪತ್ರೆ ಈಗ ಶಿಥಿಲಾವಸ್ಥೆಯಲ್ಲಿದೆ ಎಂದು ಹೇಳುತ್ತಿದ್ದಾರೆ.

ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಆರೋಗ್ಯ ಇಲಾಖೆಯಾಗಲಿ ಸರ್ಕಾರವಾಗಲೀ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ಆಸ್ಪತ್ರೆ ಬಗ್ಗೆ ನಮ್ಮ ಬಳಿ ಮಾಹಿತಿಯೇ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಓದಿ: ಅನಾರೋಗ್ಯ ಪೀಡಿತ ಪತಿಯೊಂದಿಗೆ ಆಸ್ಪತ್ರೆಯಿಂದ ಬರುವಾಗ ಆಂಬ್ಯುಲೆನ್ಸ್​ನಲ್ಲಿ ಮಹಿಳೆಗೆ ಕಿರುಕುಳ

ವೈದ್ಯರ ವಸತಿ, ನರ್ಸಿಂಗ್ ಸಿಬ್ಬಂದಿ ವಸತಿ ಮತ್ತು ಲ್ಯಾಬ್‌ಗಳಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದ್ದು, ಅದು ಈಗ ಪಾಳುಬಿದ್ದಿದೆ. ಆಸ್ಪತ್ರೆಯ ಕಿಟಕಿಗಳು, ಬಾಗಿಲು ಚೌಕಟ್ಟುಗಳು, ಬಾಗಿಲುಗಳು, ಗ್ರಿಲ್‌ಗಳು, ಗೇಟ್‌ಗಳು, ಬೀರುಗಳು ಮತ್ತು ವಿದ್ಯುತ್ ವೈರಿಂಗ್ ಮತ್ತು ಇತರ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಯಾರ ಆದೇಶದಲ್ಲಿ ಈ ಆಸ್ಪತ್ರೆ ನಿರ್ಮಿಸಲಾಗಿದೆ, ಯಾರು ನಿರ್ಮಿಸಿದ್ದಾರೆ ಎಂಬುದಕ್ಕೆ ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಆಸ್ಪತ್ರೆ ನಿರ್ಮಾಣ ಮತ್ತು ವಸ್ತುವಿನ ಬಗ್ಗೆ ರಾಜ್ಯ ಕೇಂದ್ರ ಕಚೇರಿಗೆ ಮಾಹಿತಿ ನೀಡದ ಕಾರಣ, ಅದರ ನಿರ್ಮಾಣದ ನಂತರ ಆರೋಗ್ಯ ಇಲಾಖೆ ಆಸ್ಪತ್ರೆಯನ್ನು ಸ್ವಾಧೀನಪಡಿಸಿಕೊಂಡಿಲ್ಲ.

ಸಾರಯ್ಯ ಪಂಚಾಯಿತಿಯ ಅಧ್ಯಕ್ಷ ಅಮೋದ್ ಶರ್ಮಾ ಮಾತನಾಡಿ, ಈ ಗ್ರಾಮದಲ್ಲಿ ಇಷ್ಟು ದೊಡ್ಡ ಆಸ್ಪತ್ರೆ ನಿರ್ಮಾಣವಾಗಿರುವುದಕ್ಕೆ ಗ್ರಾಮಸ್ಥರೆಲ್ಲ ಸಂತಸ ವ್ಯಕ್ತಪಡಿಸಿದ್ದರು. ಯಾವೊಬ್ಬ ಆರೋಗ್ಯ ಕಾರ್ಯಕರ್ತರಾಗಲಿ, ಜಿಲ್ಲಾಡಳಿತವಾಗಲಿ ಆಸ್ಪತ್ರೆಯ ಸ್ಥಿತಿ ನೋಡಲು ಬಂದಿಲ್ಲ. ನಾವು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ, ಆದರೆ ಸ್ಥಳೀಯ ಸಂಸದರು ಮತ್ತು ಶಾಸಕರು ಈ ವಿಷಯದಲ್ಲಿ ಆಸಕ್ತಿ ಹೊಂದಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್