AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಗೂ ಮುನ್ನವೇ ಪಾಳುಬಿದ್ದ ಆಸ್ಪತ್ರೆ, ಈಗ ಕಳ್ಳರ ಅಡಗುತಾಣ

ಹತ್ತು ವರ್ಷಗಳ ಹಿಂದೆ ಬರೋಬ್ಬರಿ 5 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಲಾಗಿದ್ದ ಆಸ್ಪತ್ರೆ ಉದ್ಘಾಟನೆಗೂ ಮುನ್ನವೇ ಪಾಳುಬಿದ್ದಿದೆ. ಬಿಹಾರದ ಮುಜಾಫರ್​ಪುರ್ ಜಿಲ್ಲೆಯಲ್ಲಿರುವ ಈ ಆಸ್ಪತ್ರೆ ಈಗ ಕಳ್ಳರ ಅಡಗುತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯವರೆಗೆ ಒಂದೇ ಒಂದು ರೋಗಿ ಕೂಡ ಈ ಆಸ್ಪತ್ರೆಯ ಮೆಟ್ಟಿಲು ಹತ್ತಿಲ್ಲ. ಆರು ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ 30 ಹಾಸಿಗೆಗಳಿರುವ ಈ ಆಸ್ಪತ್ರೆ ನೋಡಿದರೆ ಯಾವ ಕಡೆಯಿಂದಲೂ ಅದು ಹೊಸ ಆಸ್ಪತ್ರೆಯ ರೀತಿ ಕಾಣುವುದೇ ಇಲ್ಲ, ಭೂತ ಬಂಗಲೆಯಂತೆ ಭಾಸವಾಗುತ್ತೆ.

ಉದ್ಘಾಟನೆಗೂ ಮುನ್ನವೇ ಪಾಳುಬಿದ್ದ ಆಸ್ಪತ್ರೆ, ಈಗ ಕಳ್ಳರ ಅಡಗುತಾಣ
ಆಸ್ಪತ್ರೆ
ನಯನಾ ರಾಜೀವ್
|

Updated on: Sep 06, 2024 | 2:47 PM

Share

ಹತ್ತು ವರ್ಷಗಳ ಹಿಂದೆ ಬರೋಬ್ಬರಿ 5 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಲಾಗಿದ್ದ ಆಸ್ಪತ್ರೆ ಉದ್ಘಾಟನೆಗೂ ಮುನ್ನವೇ ಪಾಳುಬಿದ್ದಿದೆ. ಬಿಹಾರದ ಮುಜಾಫರ್​ಪುರ್ ಜಿಲ್ಲೆಯಲ್ಲಿರುವ ಈ ಆಸ್ಪತ್ರೆ ಈಗ ಕಳ್ಳರ ಅಡಗುತಾಣವಾಗಿ ಮಾರ್ಪಟ್ಟಿದೆ. ಇಲ್ಲಿಯವರೆಗೆ ಒಂದೇ ಒಂದು ರೋಗಿ ಕೂಡ ಈ ಆಸ್ಪತ್ರೆಯ ಮೆಟ್ಟಿಲು ಹತ್ತಿಲ್ಲ. ಆರು ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ 30 ಹಾಸಿಗೆಗಳಿರುವ ಈ ಆಸ್ಪತ್ರೆ ನೋಡಿದರೆ ಯಾವ ಕಡೆಯಿಂದಲೂ ಅದು ಹೊಸ ಆಸ್ಪತ್ರೆಯ ರೀತಿ ಕಾಣುವುದೇ ಇಲ್ಲ, ಭೂತ ಬಂಗಲೆಯಂತೆ ಭಾಸವಾಗುತ್ತೆ.

ರಾಜ್ಯ ಸರಕಾರ ಹಾಗೂ ಆರೋಗ್ಯ ಇಲಾಖೆ ಯು 10 ವರ್ಷಗಳ ಹಿಂದೆ ಈ ಆಸ್ಪತ್ರೆಯನ್ನು ನಿರ್ಮಿಸಿತ್ತು. ಈ ಬಗ್ಗೆ ಬಿಹಾರ ಸರ್ಕಾರಕ್ಕೆ ಮಾಹಿತಿ ಇಲ್ಲ, ಐದು ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿರುವ ಆಸ್ಪತ್ರೆ ಈಗ ಶಿಥಿಲಾವಸ್ಥೆಯಲ್ಲಿದೆ ಎಂದು ಹೇಳುತ್ತಿದ್ದಾರೆ.

ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದೆ. ಆರೋಗ್ಯ ಇಲಾಖೆಯಾಗಲಿ ಸರ್ಕಾರವಾಗಲೀ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಈ ಆಸ್ಪತ್ರೆ ಬಗ್ಗೆ ನಮ್ಮ ಬಳಿ ಮಾಹಿತಿಯೇ ಇಲ್ಲ ಎನ್ನುತ್ತಿದ್ದಾರೆ.

ಮತ್ತಷ್ಟು ಓದಿ: ಅನಾರೋಗ್ಯ ಪೀಡಿತ ಪತಿಯೊಂದಿಗೆ ಆಸ್ಪತ್ರೆಯಿಂದ ಬರುವಾಗ ಆಂಬ್ಯುಲೆನ್ಸ್​ನಲ್ಲಿ ಮಹಿಳೆಗೆ ಕಿರುಕುಳ

ವೈದ್ಯರ ವಸತಿ, ನರ್ಸಿಂಗ್ ಸಿಬ್ಬಂದಿ ವಸತಿ ಮತ್ತು ಲ್ಯಾಬ್‌ಗಳಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದ್ದು, ಅದು ಈಗ ಪಾಳುಬಿದ್ದಿದೆ. ಆಸ್ಪತ್ರೆಯ ಕಿಟಕಿಗಳು, ಬಾಗಿಲು ಚೌಕಟ್ಟುಗಳು, ಬಾಗಿಲುಗಳು, ಗ್ರಿಲ್‌ಗಳು, ಗೇಟ್‌ಗಳು, ಬೀರುಗಳು ಮತ್ತು ವಿದ್ಯುತ್ ವೈರಿಂಗ್ ಮತ್ತು ಇತರ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಯಾರ ಆದೇಶದಲ್ಲಿ ಈ ಆಸ್ಪತ್ರೆ ನಿರ್ಮಿಸಲಾಗಿದೆ, ಯಾರು ನಿರ್ಮಿಸಿದ್ದಾರೆ ಎಂಬುದಕ್ಕೆ ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಆಸ್ಪತ್ರೆ ನಿರ್ಮಾಣ ಮತ್ತು ವಸ್ತುವಿನ ಬಗ್ಗೆ ರಾಜ್ಯ ಕೇಂದ್ರ ಕಚೇರಿಗೆ ಮಾಹಿತಿ ನೀಡದ ಕಾರಣ, ಅದರ ನಿರ್ಮಾಣದ ನಂತರ ಆರೋಗ್ಯ ಇಲಾಖೆ ಆಸ್ಪತ್ರೆಯನ್ನು ಸ್ವಾಧೀನಪಡಿಸಿಕೊಂಡಿಲ್ಲ.

ಸಾರಯ್ಯ ಪಂಚಾಯಿತಿಯ ಅಧ್ಯಕ್ಷ ಅಮೋದ್ ಶರ್ಮಾ ಮಾತನಾಡಿ, ಈ ಗ್ರಾಮದಲ್ಲಿ ಇಷ್ಟು ದೊಡ್ಡ ಆಸ್ಪತ್ರೆ ನಿರ್ಮಾಣವಾಗಿರುವುದಕ್ಕೆ ಗ್ರಾಮಸ್ಥರೆಲ್ಲ ಸಂತಸ ವ್ಯಕ್ತಪಡಿಸಿದ್ದರು. ಯಾವೊಬ್ಬ ಆರೋಗ್ಯ ಕಾರ್ಯಕರ್ತರಾಗಲಿ, ಜಿಲ್ಲಾಡಳಿತವಾಗಲಿ ಆಸ್ಪತ್ರೆಯ ಸ್ಥಿತಿ ನೋಡಲು ಬಂದಿಲ್ಲ. ನಾವು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ, ಆದರೆ ಸ್ಥಳೀಯ ಸಂಸದರು ಮತ್ತು ಶಾಸಕರು ಈ ವಿಷಯದಲ್ಲಿ ಆಸಕ್ತಿ ಹೊಂದಿಲ್ಲ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್