AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
TV9 Web
| Edited By: |

Updated on: Oct 08, 2022 | 4:34 PM

Share

ಪಾಟ್ನಾ: ಬಿಹಾರ (Bihar) ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ 9 ಜನರನ್ನು ಕೊಂದಿರುವ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. “ಹುಲಿಯು ಮಾನವ ವಾಸಸ್ಥಳದಲ್ಲಿ ನುಗ್ಗಲು ಪ್ರಯತ್ನಿಸುತ್ತಿರುವುದು ದೃಢಪಟ್ಟ ನಂತರ ಎಲ್ಲ ನಿಯಮಗಳನ್ನೂ ಅನುಸರಿಸಿ ಆ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಹುಲಿ (Tiger) ಕೇವಲ ಕಳೆದ 3 ದಿನಗಳಲ್ಲಿ ನಾಲ್ವರನ್ನು ಕೊಂದಿದೆ” ಎಂದು ಡಿಎಫ್​ಓ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಟಿಆರ್‌ನ ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಈ ಆದೇಶ ನೀಡಲಾಗಿದೆ. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬುಧವಾರ ಸಿಂಗಾಹಿ ಮುಸ್ತೋಳಿ ಗ್ರಾಮದಲ್ಲಿ 12 ವರ್ಷದ ಬಾಲಕಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಳು ಎಂದು ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ. ನೇಶಮಣಿ ಕೆ. ಹೇಳಿದ್ದರು. ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಂದೇ ಹುಲಿಯಿಂದ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ. ಈ ಆದೇಶವನ್ನು ಬಿಹಾರದ ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮ್ ಚೀಫ್ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ಹೊರಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?