AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
TV9 Web
| Edited By: |

Updated on: Oct 08, 2022 | 4:34 PM

Share

ಪಾಟ್ನಾ: ಬಿಹಾರ (Bihar) ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ 9 ಜನರನ್ನು ಕೊಂದಿರುವ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. “ಹುಲಿಯು ಮಾನವ ವಾಸಸ್ಥಳದಲ್ಲಿ ನುಗ್ಗಲು ಪ್ರಯತ್ನಿಸುತ್ತಿರುವುದು ದೃಢಪಟ್ಟ ನಂತರ ಎಲ್ಲ ನಿಯಮಗಳನ್ನೂ ಅನುಸರಿಸಿ ಆ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಹುಲಿ (Tiger) ಕೇವಲ ಕಳೆದ 3 ದಿನಗಳಲ್ಲಿ ನಾಲ್ವರನ್ನು ಕೊಂದಿದೆ” ಎಂದು ಡಿಎಫ್​ಓ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಟಿಆರ್‌ನ ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಈ ಆದೇಶ ನೀಡಲಾಗಿದೆ. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬುಧವಾರ ಸಿಂಗಾಹಿ ಮುಸ್ತೋಳಿ ಗ್ರಾಮದಲ್ಲಿ 12 ವರ್ಷದ ಬಾಲಕಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಳು ಎಂದು ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ. ನೇಶಮಣಿ ಕೆ. ಹೇಳಿದ್ದರು. ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಂದೇ ಹುಲಿಯಿಂದ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ. ಈ ಆದೇಶವನ್ನು ಬಿಹಾರದ ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮ್ ಚೀಫ್ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ಹೊರಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು