AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​

ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​
ತೇಜಸ್ವಿ ಯಾದವ್​
Lakshmi Hegde
|

Updated on:Dec 06, 2020 | 3:05 PM

Share

ಪಾಟ್ನಾ: ‘ಪ್ರತಿಭಟನೆ ಮಾಡುತ್ತಿರುವ ರೈತರಿಗೆ ನಾವು ಬೆಂಬಲ ಕೊಟ್ಟೇ ಕೊಡುತ್ತೇವೆ. ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ನಿಮಗೆ ಧೈರ್ಯ ಇದ್ದರೆ ನನ್ನನ್ನು ಅರೆಸ್ಟ್ ಮಾಡಿ’ ಹೀಗಂತ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್​ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ವ್ಯಕ್ತಪಡಿಸಿ, ಆರ್​ಜೆಡಿಯ ತೇಜಸ್ವಿ ಯಾದವ್​ ಮತ್ತು ಮಹಾಘಟ್​ಬಂಧನ್​ನ 18ಕ್ಕೂ ಹೆಚ್ಚು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ನಡೆಸಲು ಇವರು ಅನುಮತಿ ಪಡೆದಿಲ್ಲ, ಕೋವಿಡ್-19 ನಿಯಂತ್ರಣಕ್ಕೆ ಜಾರಿ ಮಾಡಿರುವ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿರುವ ಪೊಲೀಸರು ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮ್ಮ ವಿರುದ್ಧ ಕೇಸ್ ದಾಖಲಿಸಿದ ಬಿಹಾರ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ತೇಜಸ್ವಿ ಯಾದವ್​, ಓರ್ವ ಹೇಡಿ ಮುಖ್ಯಮಂತ್ರಿ ನೇತೃತ್ವದಲ್ಲಿ ಬಿಹಾರ ಸರ್ಕಾರ ನಡೆಯುತ್ತಿದೆ. ರೈತರ ಪರ ನಿಂತ ನಮ್ಮ ವಿರುದ್ಧವೇ ಕೇಸ್​ ಹಾಕಿದ್ದಾರೆ. ನಿಮಗೆ ನಿಜಕ್ಕೂ ಧೈರ್ಯ ಇದ್ದರೆ ನಮ್ಮನ್ನು ಬಂಧಿಸಿ. ಇಲ್ಲವೇ ನಾನೇ ಶರಣಾಗುತ್ತೇನೆ. ರೈತರಿಗಾಗಿ ನೇಣಿಗೇರಲೂ ನಾನು ಸಿದ್ಧ ಎಂದಿದ್ದಾರೆ.

ಅಷ್ಟೇ ಅಲ್ಲ, ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ. ಹಾಗೇ, ಬಿಜೆಪಿ ಕಚೇರಿಯಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಭೆ ನಡೆಸಿದ ಫೋಟೋವನ್ನು ಬಿಡುಗಡೆ ಮಾಡಿ, ನಮಗೆ ಮಾತ್ರ ಯಾಕೆ ಕೊರೊನಾ ನಿಯಮಗಳು ಅನ್ವಯ ಆಗುತ್ತವೆ ಎಂದು ಪ್ರಶ್ನಿಸಿದೆ.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

Published On - 1:13 pm, Sun, 6 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ