AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​

ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​
ತೇಜಸ್ವಿ ಯಾದವ್​
Lakshmi Hegde
|

Updated on:Dec 06, 2020 | 3:05 PM

Share

ಪಾಟ್ನಾ: ‘ಪ್ರತಿಭಟನೆ ಮಾಡುತ್ತಿರುವ ರೈತರಿಗೆ ನಾವು ಬೆಂಬಲ ಕೊಟ್ಟೇ ಕೊಡುತ್ತೇವೆ. ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ನಿಮಗೆ ಧೈರ್ಯ ಇದ್ದರೆ ನನ್ನನ್ನು ಅರೆಸ್ಟ್ ಮಾಡಿ’ ಹೀಗಂತ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್​ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ವ್ಯಕ್ತಪಡಿಸಿ, ಆರ್​ಜೆಡಿಯ ತೇಜಸ್ವಿ ಯಾದವ್​ ಮತ್ತು ಮಹಾಘಟ್​ಬಂಧನ್​ನ 18ಕ್ಕೂ ಹೆಚ್ಚು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ನಡೆಸಲು ಇವರು ಅನುಮತಿ ಪಡೆದಿಲ್ಲ, ಕೋವಿಡ್-19 ನಿಯಂತ್ರಣಕ್ಕೆ ಜಾರಿ ಮಾಡಿರುವ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿರುವ ಪೊಲೀಸರು ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮ್ಮ ವಿರುದ್ಧ ಕೇಸ್ ದಾಖಲಿಸಿದ ಬಿಹಾರ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ತೇಜಸ್ವಿ ಯಾದವ್​, ಓರ್ವ ಹೇಡಿ ಮುಖ್ಯಮಂತ್ರಿ ನೇತೃತ್ವದಲ್ಲಿ ಬಿಹಾರ ಸರ್ಕಾರ ನಡೆಯುತ್ತಿದೆ. ರೈತರ ಪರ ನಿಂತ ನಮ್ಮ ವಿರುದ್ಧವೇ ಕೇಸ್​ ಹಾಕಿದ್ದಾರೆ. ನಿಮಗೆ ನಿಜಕ್ಕೂ ಧೈರ್ಯ ಇದ್ದರೆ ನಮ್ಮನ್ನು ಬಂಧಿಸಿ. ಇಲ್ಲವೇ ನಾನೇ ಶರಣಾಗುತ್ತೇನೆ. ರೈತರಿಗಾಗಿ ನೇಣಿಗೇರಲೂ ನಾನು ಸಿದ್ಧ ಎಂದಿದ್ದಾರೆ.

ಅಷ್ಟೇ ಅಲ್ಲ, ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ. ಹಾಗೇ, ಬಿಜೆಪಿ ಕಚೇರಿಯಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಭೆ ನಡೆಸಿದ ಫೋಟೋವನ್ನು ಬಿಡುಗಡೆ ಮಾಡಿ, ನಮಗೆ ಮಾತ್ರ ಯಾಕೆ ಕೊರೊನಾ ನಿಯಮಗಳು ಅನ್ವಯ ಆಗುತ್ತವೆ ಎಂದು ಪ್ರಶ್ನಿಸಿದೆ.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

Published On - 1:13 pm, Sun, 6 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!