AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​

ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ.

ಧೈರ್ಯವಿದ್ದರೆ ಅರೆಸ್ಟ್ ಮಾಡಿ, ರೈತರಿಗಾಗಿ ನೇಣಿಗೇರಲೂ ಸಿದ್ಧ: ತೇಜಸ್ವಿ ಯಾದವ್​
ತೇಜಸ್ವಿ ಯಾದವ್​
Lakshmi Hegde
|

Updated on:Dec 06, 2020 | 3:05 PM

Share

ಪಾಟ್ನಾ: ‘ಪ್ರತಿಭಟನೆ ಮಾಡುತ್ತಿರುವ ರೈತರಿಗೆ ನಾವು ಬೆಂಬಲ ಕೊಟ್ಟೇ ಕೊಡುತ್ತೇವೆ. ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ. ನಿಮಗೆ ಧೈರ್ಯ ಇದ್ದರೆ ನನ್ನನ್ನು ಅರೆಸ್ಟ್ ಮಾಡಿ’ ಹೀಗಂತ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್​ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಸಾವಿರಾರು ರೈತರು 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ವ್ಯಕ್ತಪಡಿಸಿ, ಆರ್​ಜೆಡಿಯ ತೇಜಸ್ವಿ ಯಾದವ್​ ಮತ್ತು ಮಹಾಘಟ್​ಬಂಧನ್​ನ 18ಕ್ಕೂ ಹೆಚ್ಚು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ನಡೆಸಲು ಇವರು ಅನುಮತಿ ಪಡೆದಿಲ್ಲ, ಕೋವಿಡ್-19 ನಿಯಂತ್ರಣಕ್ಕೆ ಜಾರಿ ಮಾಡಿರುವ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿರುವ ಪೊಲೀಸರು ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ತಮ್ಮ ವಿರುದ್ಧ ಕೇಸ್ ದಾಖಲಿಸಿದ ಬಿಹಾರ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ತೇಜಸ್ವಿ ಯಾದವ್​, ಓರ್ವ ಹೇಡಿ ಮುಖ್ಯಮಂತ್ರಿ ನೇತೃತ್ವದಲ್ಲಿ ಬಿಹಾರ ಸರ್ಕಾರ ನಡೆಯುತ್ತಿದೆ. ರೈತರ ಪರ ನಿಂತ ನಮ್ಮ ವಿರುದ್ಧವೇ ಕೇಸ್​ ಹಾಕಿದ್ದಾರೆ. ನಿಮಗೆ ನಿಜಕ್ಕೂ ಧೈರ್ಯ ಇದ್ದರೆ ನಮ್ಮನ್ನು ಬಂಧಿಸಿ. ಇಲ್ಲವೇ ನಾನೇ ಶರಣಾಗುತ್ತೇನೆ. ರೈತರಿಗಾಗಿ ನೇಣಿಗೇರಲೂ ನಾನು ಸಿದ್ಧ ಎಂದಿದ್ದಾರೆ.

ಅಷ್ಟೇ ಅಲ್ಲ, ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಲು ಬಿಹಾರ ಸರ್ಕಾರ ಸುಳ್ಳು ನೆಪವನ್ನು ಮುಂದಿಟ್ಟಿದೆ. ಈ ಮೂಲಕ ತನ್ನ ಮತ್ತೊಂದು ಮುಖದ ದರ್ಶನ ಮಾಡಿಸಿದೆ. ಇಂಥ ಸಾವಿರ ಎಫ್​ಐಆರ್ ದಾಖಲಿಸಿದರೂ ನಾವು ಮತ್ತು ರೈತರು ಹೆದರುವುದಿಲ್ಲ ಎಂದು ಆರ್​ಜೆಡಿ ಹೇಳಿದೆ. ಹಾಗೇ, ಬಿಜೆಪಿ ಕಚೇರಿಯಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಸಭೆ ನಡೆಸಿದ ಫೋಟೋವನ್ನು ಬಿಡುಗಡೆ ಮಾಡಿ, ನಮಗೆ ಮಾತ್ರ ಯಾಕೆ ಕೊರೊನಾ ನಿಯಮಗಳು ಅನ್ವಯ ಆಗುತ್ತವೆ ಎಂದು ಪ್ರಶ್ನಿಸಿದೆ.

ಬಿಹಾರದಲ್ಲಿ ಹೊಸ ರಾಜಕೀಯ ಸಂಚಲನ: ಎನ್​ಡಿಎ ಬಿಟ್ಟುಹೋಗಿದ್ದ ಉಪೇಂದ್ರ ಕುಶ್ವಾಹಾ ಜೊತೆ ನಿತೀಶ್​ ಚರ್ಚೆ

ಆನ್​ಲೈನ್​ ​ಕ್ಲಾಸ್​ ಅಂತಾ ಅಪ್ಪನ ಮೊಬೈಲ್​ ಪಡೆದ ಮಗಳಿಗೆ ಕಂಡಿದ್ದು ಪಾಠ ಅಲ್ಲ.. ಪಲ್ಲಂಗದ ಆಟ

Published On - 1:13 pm, Sun, 6 December 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?