AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Liquor Tragedy: ವಿಷಕಾರಿ ಮದ್ಯ ಸೇವಿಸಿ 6 ಮಂದಿ ಸಾವು

ಬಿಹಾರದ ಛಪ್ರಾದಲ್ಲಿ ವಿಷಕಾರಿ ಮದ್ಯ ಸೇವಿಸಿ 6 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ.

Bihar Liquor Tragedy: ವಿಷಕಾರಿ ಮದ್ಯ ಸೇವಿಸಿ 6 ಮಂದಿ ಸಾವು
Bihar Liquor Tragedy 6 people died after drinking poisonous liquorImage Credit source: ANI
TV9 Web
| Edited By: |

Updated on:Dec 14, 2022 | 12:51 PM

Share

ಪಾಟ್ನಾ:ಬಿಹಾರ(Bihar) ಛಾಪ್ರಾ ಜಿಲ್ಲೆಯಲ್ಲಿ ಬುಧವಾರ ವಿಷಕಾರಿ ಮದ್ಯ (Liquor Tragedy) ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ ಒಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದು, ಇನ್ನು ಕೆಲವರು ಖಾಸಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿನ್ನಪ್ಪಿರುವವರ ಸಂಬಂಧಿಕರು ಅವರ ವಿಷಕಾರಿ ಮದ್ಯ ಸೇವಿಸಿಯೇ ಸಂಭವಿಸಿದೆ ಎಂದು ಹೇಳುತ್ತಿದ್ದಾರೆ, ಆದರೆ ಈ ಬಗ್ಗೆ ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.

ಈ ಸಾವಿಗೆ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವೇ ಕಾರಣ ಎಂದು ಸ್ಥಳೀಯ ಬಿಜೆಪಿ ಶಾಸಕ ಜನಕ್ ಸಿಂಗ್ ಆರೋಪಿಸಿದ್ದಾರೆ. ಬಿಜೆಪಿ ಶಾಸಕನ ಗ್ರಾಮದಲ್ಲಿ ಕನಿಷ್ಠ ಮೂರು ಸಾವುಗಳು ಸಂಭವಿಸಿವೆ.

ರಾಜ್ಯದಲ್ಲಿ ವಿಷಕಾರಿ ಮದ್ಯದಿಂದಾಗಿ ಸಾವಿರಾರು ಜನರು ಸಾಯುತ್ತಿದ್ದಾರೆ, ಆದರೆ ಮುಖ್ಯಮಂತ್ರಿಗಳು ಅದರ ಬಗ್ಗೆ ಏನೂ ಮಾಡುತ್ತಿಲ್ಲ, ಇದಕ್ಕೆ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ದೂಷಿಸಬೇಕು ಏಕೆಂದರೆ ಅಂತಹ ಘಟನೆಗಳು ನಡೆದರೆ ಅಧಿಕಾರಿಗಳನ್ನು ತನಿಖೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇದೀಗ ಅವರ ಊರಿನಲ್ಲೇ ಸಂಭವಿಸಿದೆ ಎಂದು ಅವರು ನಿತೀಶ್ ಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

ಇದನ್ನು ಓದಿ:ಗುಜರಾತ್​​ನಲ್ಲಿ ಕಳ್ಳಭಟ್ಟಿ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ; 45 ಜನ ಆಸ್ಪತ್ರೆಗೆ ದಾಖಲು

“ಯಾರ ಕಣ್ಗಾವಲಿನಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ? ಅಂತಹ ಎಷ್ಟು ಅಧಿಕಾರಿಗಳನ್ನು ತನಿಖೆ ಮಾಡಲಾಗಿದೆ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ, ವಿಷಕಾರಿ ಮದ್ಯವು ನನ್ನ ಗ್ರಾಮಕ್ಕೆ ಹೇಗೆ ಬಂತು? ನೀವು ಪೊಲೀಸ್ ಠಾಣೆಗಳ ಮೂಲಕ ಹಣ ಮಾಡುತ್ತಿದ್ದೀರಿ, ನಿಮಗೆ  ಅಧಿಕಾರದಲ್ಲಿರಲು ಹಕ್ಕಿಲ್ಲ. ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 am, Wed, 14 December 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್