AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮಾಲೀಕ ಮೂತ್ರ ವಿಸರ್ಜಿಸಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಕೂಲಿಗಾಗಿ ಒತ್ತಾಯಿಸಿದ್ದಕ್ಕಾಗಿ ತಂದೆ-ಮಗನಿಬ್ಬರು ಆತನ ಮುಖದ ಮೇಲೆ ಉಗುಳಿದ್ದಷ್ಟೇ ಅಲ್ಲದೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ
ನಯನಾ ರಾಜೀವ್
|

Updated on: Oct 10, 2024 | 10:46 AM

Share

ಕೂಲಿ ಕೇಳಲು ಹೋಗಿದ್ದ ವ್ಯಕ್ತಿಯ ಮೇಲೆ ಮಾಲೀಕ ಮೂತ್ರ ವಿಸರ್ಜಿಸಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಕೂಲಿಗಾಗಿ ಒತ್ತಾಯಿಸಿದ್ದಕ್ಕಾಗಿ ತಂದೆ-ಮಗನಿಬ್ಬರು ಆತನ ಮುಖದ ಮೇಲೆ ಉಗುಳಿದ್ದಷ್ಟೇ ಅಲ್ಲದೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ವ್ಯಕ್ತಿಯ ದೂರಿನ ಪ್ರಕಾರ, ಅಕ್ಟೋಬರ್ 4 ರಂದು ರಿಂಕು ಮಾಂಝಿ ಎಂಬ ವ್ಯಕ್ತಿ ಆರೋಪಿ ರಮೇಶ್ ಪಟೇಲ್ ಅವರ ಕೋಳಿ ಫಾರಂಗೆ ಹೋದಾಗ ಈ ಘಟನೆ ಸಂಭವಿಸಿದೆ. ತನ್ನ ವೇತನದ ಬೇಡಿಕೆಯಿಂದ ಕೋಪಗೊಂಡ ರಿಂಕು ಅವರನ್ನು ರಮೇಶ್ ಪಟೇಲ್, ಅವರ ಸಹೋದರ ಅರುಣ್ ಪಟೇಲ್ ಮತ್ತು ಅವರ ಮಗ ಗೌರವ್ ಕುಮಾರ್ ಥಳಿಸಿದ್ದಾರೆ.

ರಮೇಶ್ ಪಟೇಲ್ ಮತ್ತು ಅವರ ಮಗ ಗೌರವ್ ಕುಮಾರ್ ಸಹ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಮತ್ತು ಅವರ ಮುಖದ ಮೇಲೆ ಉಗುಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ವೀಡಿಯೊವನ್ನು ರಿಂಕು ಮಾಂಝಿ ಅವರು ಅಕ್ಟೋಬರ್ 8 ರಂದು ಸಲ್ಲಿಸಿದ ದೂರಿನಲ್ಲಿ ಆರೋಪಿಯ ವಿರುದ್ಧ ಸಾಕ್ಷ್ಯವಾಗಿ ಪೊಲೀಸರಿಗೆ ಕೊಟ್ಟಿದ್ದಾರೆ.

ಮತ್ತಷ್ಟು ಓದಿ: ಕಿಡಿಗೇಡಿಗಳ ಕ್ರೌರ್ಯಕ್ಕೆ ಮನೆ ಧ್ವಂಸ: ಬೀದಿಗೆ ಬಿದ್ದ ಮಹಿಳೆ​, ಆರೋಪಿಗಳು ಪರಾರಿ

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಮುಜಾಫರ್‌ಪುರದಲ್ಲಿ ಮತ್ತೊಂದು ಪ್ರಕರಣದಲ್ಲಿ, ಮೋಟಾರ್‌ಸೈಕಲ್ ಕದ್ದಿದ್ದಕ್ಕಾಗಿ ಇಬ್ಬರು ಪುರುಷರನ್ನು ಕೆಲವರು ಥಳಿಸಿ ಮೂತ್ರ ವಿಸರ್ಜನೆ ಮಾಡಿದ್ದರು. ಇಬ್ಬರು ಊರಿನ ಜಾತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!