AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಕರೆ ಬೆಲೆ ಏರಿಕೆಗೆ ಬಿಹಾರ ಸಚಿವರ ವಿಚಿತ್ರ ಸಮರ್ಥನೆ: ಜನರಿಗೆ ಮಧುಮೇಹವಿದೆ, ಬೆಲೆ ಏರಿದರೆ ನಷ್ಟವಿಲ್ಲ

ಬಿಹಾರದಲ್ಲಿ ಸಕ್ಕರೆ ಬೆಲೆ ಗಗನಕ್ಕೇರಿದ್ದು, ಪ್ರತಿ ಕೆ.ಜಿ.ಗೆ 65 ರೂ. ತಲುಪಿದೆ. ಜೆಡಿಯು ಸಚಿವ ಶ್ರವಣ್ ಕುಮಾರ್ ಅವರು "ಜನರಿಗೆ ಮಧುಮೇಹ ಹೆಚ್ಚಿದೆ, ಸಕ್ಕರೆ ತಿನ್ನುವುದಿಲ್ಲ. ಹಾಗಾಗಿ ಬೆಲೆ ಏರಿಕೆ ದೊಡ್ಡ ವಿಷಯವಲ್ಲ" ಎಂದು ವಿಚಿತ್ರ ಸಮರ್ಥನೆ ನೀಡಿದ್ದಾರೆ. ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಬ್ಬದ ಸೀಸನ್‌ನಲ್ಲಿ ಸಚಿವರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಸಕ್ಕರೆ ಬೆಲೆ ಏರಿಕೆಗೆ ಬಿಹಾರ ಸಚಿವರ ವಿಚಿತ್ರ ಸಮರ್ಥನೆ: ಜನರಿಗೆ ಮಧುಮೇಹವಿದೆ, ಬೆಲೆ ಏರಿದರೆ ನಷ್ಟವಿಲ್ಲ
ಸಕ್ಕರೆ
ನಯನಾ ರಾಜೀವ್
|

Updated on: Aug 21, 2026 | 3:26 PM

Share

ಪಾಟ್ನಾ, ಆಗಸ್ಟ್​ 21: ಬಿಹಾರದಲ್ಲಿ ಸಕ್ಕರೆ(Sugar) ಬೆಲೆ ತೀವ್ರವಾಗಿ ಏರಿಕೆಯಾಗಿರುವುದನ್ನು ಆಡಳಿತಾರೂಢ ಜೆಡಿಯು (JDU) ಪಕ್ಷದ ಹಿರಿಯ ಸಚಿವ ಶ್ರವಣ್ ಕುಮಾರ್ ಅವರು ವಿಚಿತ್ರ ತರ್ಕದೊಂದಿಗೆ ಸಮರ್ಥಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನರು ಸಕ್ಕರೆ ತಿನ್ನುವುದನ್ನೇ ಕಡಿಮೆ ಮಾಡುತ್ತಿದ್ದಾರೆ, ಹೀಗಾಗಿ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಈಗಿನ ದಿನಗಳಲ್ಲಿ ಸಿಹಿತಿಂಡಿಗಳನ್ನು ಯಾರು ತಿನ್ನುತ್ತಾರೆ? ಎಲ್ಲರಿಗೂ ಡಯಾಬಿಟಿಸ್ ಬರುತ್ತಿದೆ. ಜನರು ಸಕ್ಕರೆ ಸೇವನೆಯನ್ನೇ ಕಡಿಮೆ ಮಾಡಿದ್ದಾರೆ, ಆದ್ದರಿಂದ ಬೆಲೆ ಹೆಚ್ಚಾದರೂ ಯಾರೂ ಚಿಂತಿಸಬೇಕಾಗಿಲ್ಲ” ಎಂದು ಹೇಳಿ ನಗೆಪಾಟಲಿಗೀಡಾಗಿದ್ದಾರೆ.  ಬಿಹಾರದ ಚಿಲ್ಲರೆ ಮಾರುಕಟ್ಟೆಯಲ್ಲಿ ಈ ಹಿಂದೆ ಪ್ರತಿ ಕಿಲೋಗ್ರಾಂಗೆ 48ರೂ. ರಿಂದ 50 ರಷ್ಟಿದ್ದ ಸಕ್ಕರೆ ಬೆಲೆಯು ಪ್ರಸ್ತುತ 58 ರೂ. ರಿಂದ 65ರೂ.ಗೆ ಏರಿಕೆಯಾಗಿದೆ.

ಸರ್ಕಾರದ ವಿರುದ್ಧ ಕಿಡಿ: ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸ್ವತಂತ್ರ ಸಂಸದ ಪಪ್ಪು ಯಾದವ್, “ಹಸುವಿನ ಸಗಣಿಯ ಮೇಲೆ ಎಷ್ಟೇ ತುಪ್ಪ ಸುರಿದರೂ ಅದು ಸಗಣಿಯಂತೆಯೇ ಇರುತ್ತದೆ. ಗ್ಯಾಸ್ ಮತ್ತು ಟೊಮೆಟೊ ಬೆಲೆ ಏರಿದಾಗ ಧ್ವನಿ ಎತ್ತುತ್ತಿದ್ದ ನಾಯಕರು, ಈಗ ಸಕ್ಕರೆ ಬೆಲೆ ಏರಿಕೆಗೆ ಮಧುಮೇಹದ ಕಾರಣ ನೀಡುತ್ತಿದ್ದಾರೆ; ಇದೊಂದು ಅತಿದೊಡ್ಡ ಮಧುಮೇಹ ಸರ್ಕಾರ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಸಕ್ಕರೆ ತಿಂದರೆ ಆಸಿಡಿಟಿ ಹೆಚ್ಚಾಗುತ್ತದೆಯೇ? ಎದೆ ಉರಿ ಬಗ್ಗೆ ವೈದ್ಯರು ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಹಬ್ಬದ ಋತುವಿನಲ್ಲಿ ಸಕ್ಕರೆ ಬೆಲೆ ಗಗನಕ್ಕೇರಿರುವಾಗ, ಜನಸಾಮಾನ್ಯರ ಹೊರೆ ತಗ್ಗಿಸುವ ಬದಲು ಸಚಿವರು ನೀಡಿರುವ ಈ ಅಸಂಬದ್ಧ ಹೇಳಿಕೆಯು ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ರಕ್ಷಾಬಂಧನ ಮತ್ತು ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಸಿಹಿತಿಂಡಿ, ಬೇಕರಿ ತಿನಿಸುಗಳು ಹಾಗೂ ದಿನಸಿ ವೆಚ್ಚ ಮತ್ತಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ.

ಬಿಹಾರದಲ್ಲಿ 9 ಸಕ್ಕರೆ ಕಾರ್ಖಾನೆಗಳಿದ್ದರೂ ಕಬ್ಬು ಬೆಳೆಗಾರರಿಗೆ ಸಿಗಬೇಕಾದ ಬೆಂಬಲ ಬೆಲೆ ಹಾಗೂ ಸಕ್ಕರೆ ಉತ್ಪಾದನೆಯ ವೆಚ್ಚದ ಏರಿಕೆಯೇ ಈ ಬೆಲೆ ಹೆಚ್ಚಳಕ್ಕೆ ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ