AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ನಕಲಿ ಮದ್ಯ ಸೇವನೆ, ಬಿಹಾರದಲ್ಲಿ 22 ಮಂದಿ ಸಾವು

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 22 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರಾಜ್ಯದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಸಾವುಗಳು ಸಂಭವಿಸಿವೆ,

Bihar: ನಕಲಿ ಮದ್ಯ ಸೇವನೆ, ಬಿಹಾರದಲ್ಲಿ 22 ಮಂದಿ ಸಾವು
ಮದ್ಯImage Credit source: Healthline
ನಯನಾ ರಾಜೀವ್
|

Updated on: Apr 16, 2023 | 8:19 AM

Share

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 22 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರಾಜ್ಯದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ ಸಾವುಗಳು ಸಂಭವಿಸಿವೆ, ಇನ್ನೂ ಅನೇಕ ಮಂದಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 2016ರಲ್ಲಿ ಮುಖ್ಯಮಮತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು.

ಇದು ಗಮನಾರ್ಹ ಸಂಖ್ಯೆಯ ಮಹಿಳಾ ಮತದಾರರನ್ನು ಗೆದ್ದುಕೊಂಡಿತ್ತು. ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಕಾಳಸಂತೆಯಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿ ಸಾವುಗಳು ಸಂಭವಿಸುತ್ತಲೇ ಇವೆ. ಬಿಹಾರದಲ್ಲಿ ಮತ್ತೊಮ್ಮೆ ವಿಷಪೂರಿತ ಮದ್ಯ ಪ್ರಕರಣ ಬಿಹಾರದಲ್ಲಿ ಮುನ್ನೆಲೆಗೆ ಬಂದಿದೆ. ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯದ ಹಾವಳಿ ಮತ್ತೊಮ್ಮೆ ಕಂಡು ಬಂದಿದೆ. ವಾಸ್ತವವಾಗಿ, ಪೂರ್ವ ಚಂಪಾರಣ್‌ನಲ್ಲಿ 22 ಮಂದಿ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಸುದ್ದಿ ಇದೆ. ಇದೇ ವೇಳೆ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮದ್ಯ ಖರೀದಿ ಹಾಗೂ ಸೇವನೆ ವಯಸ್ಸಿನ ಮಿತಿಯನ್ನು 21 ರಿಂದ 18ಕ್ಕೆ ಇಳಿಸಲು ಚಿಂತನೆ

ವಿಷಪೂರಿತ ಮದ್ಯ ಸೇವಿಸಿ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬೆಟ್ಟಯ್ಯ ಡಿಐಜಿ ಜಯಂತ್ಕಾಂತ್ ಅವರು 6 ಜನರ ಸಾವನ್ನು ಖಚಿತಪಡಿಸಿದ್ದಾರೆ. ಆದರೆ, ಸ್ಥಳೀಯ ಜನರ ಪ್ರಕಾರ, ಮೋತಿಹಾರಿಯ ತುರ್ಕೌಲಿಯಾ, ಹರ್ಸಿದ್ಧಿ ಮತ್ತು ಪಹರ್‌ಪುರ ಮತ್ತು ಮೋತಿಹಾರಿಯ ಇತರ ಪ್ರದೇಶಗಳಲ್ಲಿ ಇದುವರೆಗೆ 22 ಜನರು ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಬಂದಿರುವ ಮಾಹಿತಿ ಪ್ರಕಾರ ಮದ್ಯ ಸೇವಿಸಿದ ನಂತರ ಜನರು ದೌರ್ಬಲ್ಯ ಮತ್ತು ದೃಷ್ಟಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. 5 ಜನರನ್ನು ಮೋತಿಹಾರಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ