AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prisoner Swallows Mobile: ಜೈಲು ಅಧಿಕಾರಿಗಳ ಕೈಗೆ ಸಿಕ್ಕಿ ಬೀಳುವ ಭಯದಿಂದ ಮೊಬೈಲ್​ ನುಂಗಿದ ಕೈದಿ

ಜಿಲ್ಲಾ ಕಾರಾಗೃಹದ ಕೈದಿಯೊಬ್ಬ ಜೈಲು ಅಧಿಕಾರಿಗಳ ಕೈಗೆ ಸಿಕ್ಕಿಬೀಳುವ ಭಯದಿಂದ ತಪಾಸಣೆ ವೇಳೆ ಮೊಬೈಲ್​ ಫೋನ್ ನುಂಗಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ.

Prisoner Swallows Mobile: ಜೈಲು ಅಧಿಕಾರಿಗಳ ಕೈಗೆ ಸಿಕ್ಕಿ ಬೀಳುವ ಭಯದಿಂದ ಮೊಬೈಲ್​ ನುಂಗಿದ ಕೈದಿ
ಜೈಲು, ಕೈದಿ
ನಯನಾ ರಾಜೀವ್
|

Updated on: Feb 20, 2023 | 1:11 PM

Share

ಜಿಲ್ಲಾ ಕಾರಾಗೃಹದ ಕೈದಿಯೊಬ್ಬ ಜೈಲು ಅಧಿಕಾರಿಗಳ ಕೈಗೆ ಸಿಕ್ಕಿಬೀಳುವ ಭಯದಿಂದ ತಪಾಸಣೆ ವೇಳೆ ಮೊಬೈಲ್​ ಫೋನ್ ನುಂಗಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ. ಖೈಶರ್ ಅಲಿ ಎಂಬಾತ ಶನಿವಾರ ತಪಾಸಣೆ ವೇಳೆ ಫೋನ್ ನುಂಗಿದ್ದಾನೆ. ಆದರೆ, ಭಾನುವಾರ ಅಲಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ. ಕೈದಿ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ತಕ್ಷಣವೇ ಅವರನ್ನು ಗೋಪಾಲ್ಗಂಜ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಕೈದಿಯ ಎಕ್ಸ್-ರೇಯಲ್ಲಿ ಹೊಟ್ಟೆಯಲ್ಲಿ ಮೊಬೈಲ್​ಗಳ ಬಿಡಿ ಭಾಗಗಳು ಪತ್ತೆಯಾಗಿವೆ ಎಂದು ಜೈಲು ಅಧೀಕ್ಷಕ ಮನೋಜ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ವೈದ್ಯ ಸಲಾಮ್ ಸಿದ್ದಿಕಿ ಮಾತನಾಡಿ, ‘ಹೊಟ್ಟೆ ನೋವಿನಿಂದ ಖೈದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆತನ ಹೊಟ್ಟೆಯ ಎಕ್ಸ್ ರೇ ತೆಗೆಯಲಾಗಿದೆ ಅದರಲ್ಲಿ ಮೊಬೈಲ್​ನ ಭಾಗಗಳು ಕಾಣಿಸಿವೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಿಂದ ವೈದ್ಯಕೀಯ ಮಂಡಳಿಯನ್ನು ರಚಿಸಲಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಖೈದಿಯನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಜೈಲರ್ ನಿರ್ಲಕ್ಷ್ಯದಿಂದ ವಿಚಾರಣಾಧೀನ ಕೈದಿ ಪರಾರಿ: ಶಿರಸಿ ಪೊಲೀಸರಿಂದ ಕೈದಿಗಾಗಿ ಶೋಧ

ಅಲಿ ಅವರನ್ನು ಜನವರಿ 17, 2020 ರಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ ಆಕ್ಟ್ (ಎನ್‌ಡಿಪಿಎಸ್ ಆಕ್ಟ್) ಅಡಿಯಲ್ಲಿ ಗೋಪಾಲ್‌ಗಂಜ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದಾನೆ. ಬಿಹಾರ ಜೈಲುಗಳ ಒಳಗೆ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿರುವುದು ಭದ್ರತಾ ಅಧಿಕಾರಿಗಳಿಗೆ ತಿಳಿದುಬಂದಿತ್ತು.

ಮಾರ್ಚ್ 2021 ರಲ್ಲಿ ರಾಜ್ಯದಾದ್ಯಂತ ಜೈಲುಗಳಲ್ಲಿ ನಡೆಸಿದ ದಾಳಿಯಲ್ಲಿ ಸುಮಾರು 35 ಸೆಲ್‌ಫೋನ್‌ಗಳು, ಏಳು ಸಿಮ್ ಕಾರ್ಡ್‌ಗಳು ಮತ್ತು 17 ಸೆಲ್‌ಫೋನ್ ಚಾರ್ಜರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕತಿಹಾರ್, ಬಕ್ಸರ್, ಗೋಪಾಲ್‌ಗಂಜ್, ನಳಂದಾ, ಹಾಜಿಪುರ, ಆರಾ, ಜೆಹಾನಾಬಾದ್ ಮತ್ತು ರಾಜ್ಯದ ಕೆಲವು ಜೈಲುಗಳಲ್ಲಿ ದಾಳಿ ನಡೆಸಲಾಗಿದೆ. ಬಿಹಾರ ಜೈಲುಗಳಲ್ಲಿ ಕೈದಿಗಳ ಮೊಬೈಲ್ ಫೋನ್ ಬಳಕೆ ಭದ್ರತಾ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ