AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವರ ಇಬ್ಬರು ಸೋದರಳಿಯರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

ಕೇಂದ್ರ ಸಚಿವ ನಿತ್ಯಾನಂದ ರೈ ಅವರ ಇಬ್ಬರು ಸೋದರಳಿಯರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಅವರ ಮತ್ತೊಬ್ಬ ಸಹೋದರ ಮತ್ತು ತಾಯಿ ಗಾಯಗೊಂಡಿದ್ದಾರೆ. ಪರಸ್ಪರ ವಾಗ್ವಾದದಿಂದಾಗಿ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆಯಿತು. ನೀರಿಗಾಗಿ ನಡೆದ ಜಗಳದಲ್ಲಿ ವಿಶ್ವಜಿತ್ ಮತ್ತು ಜೈಜಿತ್ ಎಂಬ ಇಬ್ಬರು ಸಹೋದರರ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಚಿವರ ಇಬ್ಬರು ಸೋದರಳಿಯರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು
ಕೇಂದ್ರ ಸಚಿವ ನಿತ್ಯಾನಂದ್ ರೈ
ನಯನಾ ರಾಜೀವ್
|

Updated on: Mar 20, 2025 | 2:11 PM

Share

ಬಿಹಾರ, ಮಾರ್ಚ್​ 20: ಕೇಂದ್ರ ಸಚಿವ ನಿತ್ಯಾನಂದ ರೈ(Nityanand Rai) ಅವರ ಇಬ್ಬರು ಸೋದರಳಿಯರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಅವರ ಮತ್ತೊಬ್ಬ ಸಹೋದರ ಮತ್ತು ತಾಯಿ ಗಾಯಗೊಂಡಿದ್ದಾರೆ. ಪರಸ್ಪರ ವಾಗ್ವಾದದಿಂದಾಗಿ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆಯಿತು. ನೀರಿಗಾಗಿ ನಡೆದ ಜಗಳದಲ್ಲಿ ವಿಶ್ವಜಿತ್ ಮತ್ತು ಜೈಜಿತ್ ಎಂಬ ಇಬ್ಬರು ಸಹೋದರರ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ, ವಿಶ್ವಜಿತ್ ಗುಂಡೇಟಿನಿಂದ ಸಾವನ್ನಪ್ಪಿದರೆ, ಜೈಜೀತ್ ಮತ್ತು ತಾಯಿ ಹಿನಾ ದೇವಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಭಾಗಲ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿಶ್ವಜಿತ್ ಮತ್ತು ಜಯಜಿತ್ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಸೋದರಳಿಯರು. ಅವರ ತಾಯಿ ಹೀನಾ ದೇವಿಯ ಕೈಗೆ ಗುಂಡು ತಗುಲಿತ್ತು.

ಮಾಹಿತಿಯ ಪ್ರಕಾರ, ಮೃತ ವಿಶ್ವಜೀತ್ ಯಾದವ್ ಮತ್ತು ಜೈಜೀತ್ ಯಾದವ್ ಇಬ್ಬರೂ ನವಗಚಿಯಾದ ಜಗತ್ಪುರ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು. ವಿಶ್ವಜೀತ್ ಹಿರಿಯನಾಗಿದ್ದನು ಮತ್ತು ಜೈಜೀತ್ ಕಿರಿಯನಾಗಿದ್ದನು. ಇಬ್ಬರೂ ಕೃಷಿಯ ಮೂಲಕ ಜೀವನ ಸಾಗಿಸುತ್ತಿದ್ದರು. ನಲ್ಲಿ ನೀರಿನ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿದೆ.

ಇದನ್ನೂ ಓದಿ
Image
ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ, ಪಾಕಿಸ್ತಾನದ 7 ಉಗ್ರರ ಹತ್ಯೆ
Image
ಸ್ವೀಡನ್: ಶಾಲೆಯ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ, 10 ಮಂದಿ ಸಾವು
Image
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
Image
ಬೆಳಗಾವಿ: ಲವ್ ವಿಚಾರಕ್ಕೆ ಭೀಕರ ಗುಂಡಿನ ದಾಳಿ, ಸ್ವಲ್ಪದರಲ್ಲೇ ಯುವಕ ಪಾರು

ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬಳಿಕ ಆ ಜಗಳ ತಾರಕಕ್ಕೇರಿತ್ತು, ಜೈಜೀತ್ ವಿಶ್ವಜೀತ್ ಮೇಲೆ ಗುಂಡು ಹಾರಿಸಿದ್ದಾರೆ, ಗಾಯಗೊಂಡ ವಿಶ್ವಜೀತ್ ಕೂಡ ಗುಂಡು ಹಾರಿಸುವ ಮೂಲಕ ಪ್ರತಿದಾಳಿ ನಡೆಸಿದ್ದರು. ಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವಿಶ್ವಜೀತ್ ಸಾವನ್ನಪ್ಪಿದರೆ, ಜೈಜೀತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೀನಾ ದೇವಿ ಮತ್ತು ಜೈಜೀತ್ ಅವರನ್ನು ಬಿಜೆಪಿ ಎಂಎಲ್‌ಸಿ ಡಾ.ಎನ್‌.ಕೆ. ಯಾದವ್ ಅವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ವಿಶ್ವಜೀತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಜಗಳ ನಡೆಯುತ್ತಿರುವಾಗ, ಅವರ ತಾಯಿ ಮಧ್ಯಪ್ರವೇಶಿಸಿದರು ಮತ್ತು ಅವರ ಕೈಗೂ ಗುಂಡು ತಗುಲಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದರು. ಘಟನಾ ಸ್ಥಳದಿಂದ ಒಂದು ಶೆಲ್ ಮತ್ತು ಒಂದು ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!