AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಮನೆ ಕಟ್ಟಲು ಪ್ರಿಯಕರನ ಜತೆ ಸೇರಿ ಸ್ವಂತ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಮಹಿಳೆ

ಸ್ವಂತ ಮನೆ ಕಟ್ಟಲು ಮಹಿಳೆಯು ತನ್ನ ಪ್ರಿಯಕರನ ಜತೆ ಸೇರಿ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಛಾಪ್ರಾದಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಬೇಕೆಂದು ಮಹಿಳೆ ಪ್ರಿಯಕರನ ಜತೆ ಸೇರಿ ಈ ಕೃತ್ಯವೆಸಗಿದ್ದಾಳೆ. ಮಗನನ್ನು ಅಪಹರಿಸಿ ಮನೆಗೆ ಕರೆ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಳು. ತನ್ನ ಮಗನ ಅಪಹರಣದಲ್ಲಿ ತಾನು ಭಾಗಿಯಾಗಿರುವುದಾಗಿ ಬಬಿತಾ ದೇವಿ ಒಪ್ಪಿಕೊಂಡ ನಂತರ ಮಹಿಳೆ ಬಬಿತಾ ದೇವಿ ಮತ್ತು ಆಕೆಯ ಪ್ರಿಯಕರ ನಿತೀಶ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಬಿಹಾರ: ಮನೆ ಕಟ್ಟಲು  ಪ್ರಿಯಕರನ ಜತೆ ಸೇರಿ ಸ್ವಂತ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಮಹಿಳೆ
ಅಪಹರಣImage Credit source: Shutterstock
Follow us
ನಯನಾ ರಾಜೀವ್
|

Updated on: Mar 03, 2025 | 8:35 AM

ಪಾಟ್ನಾ, ಮಾರ್ಚ್​ 03: ಸ್ವಂತ ಮನೆ ಕಟ್ಟಲು ಮಹಿಳೆಯು ತನ್ನ ಪ್ರಿಯಕರನ ಜತೆ ಸೇರಿ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಛಾಪ್ರಾದಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಬೇಕೆಂದು ಮಹಿಳೆ ಪ್ರಿಯಕರನ ಜತೆ ಸೇರಿ ಈ ಕೃತ್ಯವೆಸಗಿದ್ದಾಳೆ. ಮಗನನ್ನು ಅಪಹರಿಸಿ ಮನೆಗೆ ಕರೆ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಳು.

ತನ್ನ ಮಗನ ಅಪಹರಣದಲ್ಲಿ ತಾನು ಭಾಗಿಯಾಗಿರುವುದಾಗಿ ಬಬಿತಾ ದೇವಿ ಒಪ್ಪಿಕೊಂಡ ನಂತರ ಮಹಿಳೆ ಬಬಿತಾ ದೇವಿ ಮತ್ತು ಆಕೆಯ ಪ್ರಿಯಕರ ನಿತೀಶ್ ಕುಮಾರ್ ಅವರನ್ನು ಬಂಧಿಸಲಾಗಿದೆ.

13 ವರ್ಷದ ಬಾಲಕನ ಚಿಕ್ಕಪ್ಪ ಆದಿತ್ಯ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪ್ರಕರಣ ದಾಖಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸರನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕುಮಾರ್ ಆಶಿಶ್ ಹೇಳಿದ್ದಾರೆ. ತನ್ನ ಕುಟುಂಬವು 25 ಲಕ್ಷ ರೂ. ಹಣವನ್ನು ಪಾವತಿಸದಿದ್ದರೆ, ಅಪಹರಣಕಾರರು ಬಾಲಕನನ್ನು ಕೊಲ್ಲುವುದಾಗಿ ಆ ವ್ಯಕ್ತಿ ಹೇಳಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು

ಪೊಲೀಸರು ಈ ಬಗ್ಗೆ ತನಿಖೆ ನಡೆಸಿ, ಆದಿತ್ಯ ಕುಮಾರ್ ಅವರ ತಾಯಿ ಬಬಿತಾ ದೇವಿ ಎಲ್ಲಿದ್ದಾರೆ ಎಂಬ ಅನುಮಾನ ಮೂಡಿತು. ಬಬಿತಾ ಅವರನ್ನು ಪೊಲೀಸರು ಹಿಡಿದು ವಿಚಾರಣೆಗಾಗಿ ಠಾಣೆಗೆ ಕರೆತಂದಾಗ, ಅಪಹರಣದಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡರು.

ತನ್ನ ಪ್ರಿಯಕರ ನಿತೀಶ್ ಕುಮಾರ್ ಇರುವಿಕೆಯ ಬಗ್ಗೆ ಬಬಿತಾ ಸುಳ್ಳು ಹೇಳಿದ್ದು, ಪ್ರತ್ಯೇಕ ಮನೆ ಕಟ್ಟಲು ಹಣ ಪಡೆಯಲು ತನ್ನ ಮಗನನ್ನು ಅಪಹರಿಸಲು ಸಂಚು ರೂಪಿಸಿದ್ದಾಗಿ ಹೇಳಿದ್ದಾಳೆ ಎಂದು ಎಸ್‌ಎಸ್‌ಪಿ ಆಶಿಶ್ ತಿಳಿಸಿದ್ದಾರೆ. ಬಬಿತಾ ತಪ್ಪೊಪ್ಪಿಗೆ ಹೇಳಿಕೆ ನೀಡಿದ ನಂತರ, ಪೊಲೀಸ್ ತಂಡವು ನಿತೀಶ್ ಕುಮಾರ್ ಅವರ ಮನೆಗೆ ಹೋಗಿ ಅವರನ್ನು ಬಂಧಿಸಿತು. ಪೊಲೀಸರು ಪಾಟ್ನಾದಲ್ಲಿ ಆದಿತ್ಯ ಕುಮಾನನ್ನು ಪತ್ತೆ ಮಾಡಿ ಮನೆಗೆ ಒಪ್ಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ