AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಜಾಫರ್‌ಪುರ ಶೆಲ್ಟರ್ ಹೋಮ್ ಪ್ರಕರಣದಲ್ಲಿ 49 ಸಂತ್ರಸ್ತರಿಗೆ ಬಿಹಾರ ಸರ್ಕಾರ ಪರಿಹಾರ ನೀಡಿದೆ: ಎನ್‌ಎಚ್‌ಆರ್‌ಸಿ

ಎನ್‌ಎಚ್‌ಆರ್‌ಸಿ ವೆಬ್‌ಸೈಟ್‌ನ ಪ್ರಕಾರ 2018 ರ ನವೆಂಬರ್ 29 ರ ವಿಷಯದ ದೂರಿನ ಆಧಾರದ ಮೇಲೆ ಆಯೋಗವು ಪ್ರಕರಣವನ್ನು ದಾಖಲಿಸಿದೆ. ಆಯೋಗದ ಜೊತೆಗೆ, ಟ್ರಯಲ್ ಕೋರ್ಟ್ ಸಾಕೇತ್, ನವದೆಹಲಿ ಕೂಡ ಅರ್ಹತೆಯ ಮೇಲೆ ಸಂತ್ರಸ್ತರಿಗೆ ಪರಿಹಾರವನ್ನು ಶಿಫಾರಸು ಮಾಡಿದೆ.

ಮುಜಾಫರ್‌ಪುರ ಶೆಲ್ಟರ್ ಹೋಮ್ ಪ್ರಕರಣದಲ್ಲಿ 49 ಸಂತ್ರಸ್ತರಿಗೆ ಬಿಹಾರ ಸರ್ಕಾರ ಪರಿಹಾರ ನೀಡಿದೆ: ಎನ್‌ಎಚ್‌ಆರ್‌ಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 30, 2022 | 4:51 PM

Share

ಪಟನಾ: ಬಿಹಾರ ಸರ್ಕಾರವು ಮುಜಾಫರ್‌ಪುರ (Muzaffarpur) ಶೆಲ್ಟರ್ ಹೋಮ್ ಪ್ರಕರಣದಲ್ಲಿ (Shelter home case) 49 ಸಂತ್ರಸ್ತರಿಗೆ 3 ಲಕ್ಷದಿಂದ 9 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಿದೆ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ತನ್ನ ಕ್ರಮ ತೆಗೆದುಕೊಂಡ ವರದಿಯಲ್ಲಿ ತಿಳಿಸಿದೆ. ಮುಜಾಫರ್‌ಪುರದ ಪತ್ರಕರ್ತ ಮತ್ತು ಆಶ್ರಯ ಮನೆ ಮಾಲೀಕ ಬ್ರಜೇಶ್ ಠಾಕೂರ್ ಮತ್ತು ಇತರರು ಶೆಲ್ಟರ್ ಹೋಮ್ ಹುಡುಗಿಯರ ಮೇಲೆ ಲೈಂಗಿಕ ಕಿರುಕುಳವೆಸಗಿದ 2018 ರ ಪ್ರಕರಣವು ರಾಷ್ಟ್ರವ್ಯಾಪಿ ಗಮನ ಸೆಳೆಯಿತು. ಸುಮಾರು 110 ಖಾಸಗಿ ಮತ್ತು ಸರ್ಕಾರಿ ಆಶ್ರಯ ಮನೆಗಳ ಸ್ಥಿತಿಗತಿ ಕುರಿತು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ನೀಡಿದ ವರದಿಯ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. 2020 ರಲ್ಲಿ ದೆಹಲಿ ನ್ಯಾಯಾಲಯವು ಬ್ರಜೇಶ್ ಠಾಕೂರ್ ಸೇರಿದಂತೆ 19 ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದ ಮುಜಾಫರ್‌ಪುರ ಮಹಿಳಾ ಪೊಲೀಸ್ ಠಾಣೆ ಪ್ರಕರಣದ (33/2018) ಕ್ರಮ ಕೈಗೊಂಡ ವರದಿಯನ್ನು ಕಳುಹಿಸಲಾಗಿದೆ ಎಂದು ಬಿಹಾರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಎನ್‌ಎಚ್‌ಆರ್‌ಸಿ ವೆಬ್‌ಸೈಟ್‌ನ ಪ್ರಕಾರ 2018 ರ ನವೆಂಬರ್ 29 ರ ವಿಷಯದ ದೂರಿನ ಆಧಾರದ ಮೇಲೆ ಆಯೋಗವು ಪ್ರಕರಣವನ್ನು ದಾಖಲಿಸಿದೆ. ಆಯೋಗದ ಜೊತೆಗೆ, ಟ್ರಯಲ್ ಕೋರ್ಟ್ ಸಾಕೇತ್, ನವದೆಹಲಿ ಕೂಡ ಅರ್ಹತೆಯ ಮೇಲೆ ಸಂತ್ರಸ್ತರಿಗೆ ಪರಿಹಾರವನ್ನು ಶಿಫಾರಸು ಮಾಡಿದೆ.

ನ್ಯಾಯಾಲಯದ ಆದೇಶದಂತೆ ಮುಜಾಫರ್‌ಪುರ ಬಾಲಿಕಾ ಗೃಹ ನಡೆಸುತ್ತಿದ್ದ ಎನ್‌ಜಿಒ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಮತ್ತು ಅದರ ಆವರಣವನ್ನು ನೆಲಸಮ ಮಾಡಲಾಗಿದೆ ಎಂದು ಆಯೋಗಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ:ಬಿಹಾರದ ಗಯಾದಲ್ಲಿ ಭಾರತೀಯ ಸೇನಾ ತರಬೇತಿ ವಿಮಾನ ಪತನ; ಪೈಲಟ್​ಗಳು ಸೇಫ್

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್