AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮಧ್ಯರಾತ್ರಿ ರೈತರ ಮನೆಯೊಳಗೆ ನುಗ್ಗಿ ಲಾಠಿ ಪ್ರಹಾರ ಮಾಡಿದ ಬಿಹಾರ ಪೊಲೀಸರು

ಕಂಪನಿಯು ಹಳೆಯ ದರದಲ್ಲಿ ಬಲವಂತವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಇದು ಕಳೆದ ಎರಡು ತಿಂಗಳಿನಿಂದ ಭಾರೀ ಪ್ರತಿಭಟನೆಗಳನ್ನು ಹುಟ್ಟುಹಾಕಿತು. ಇದಾದ ನಂತರ ರಾತ್ರಿಯಲ್ಲಿ ಮಲಗಿದ್ದ ರೈತರ ಮನೆಗಳಿಗೆ ಪೊಲೀಸರು ನುಗ್ಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

Watch ಮಧ್ಯರಾತ್ರಿ ರೈತರ ಮನೆಯೊಳಗೆ ನುಗ್ಗಿ ಲಾಠಿ ಪ್ರಹಾರ ಮಾಡಿದ ಬಿಹಾರ ಪೊಲೀಸರು
ಬಿಹಾರ ಪೊಲೀಸರ ದಬ್ಬಾಳಿಕೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 11, 2023 | 2:10 PM

Share

ಬಿಹಾರದ (Bihar)ಬಕ್ಸರ್  (Buxar) ಜಿಲ್ಲೆಯ ಪೊಲೀಸರು ಮಧ್ಯರಾತ್ರಿ ರೈತರ ಮನೆಗಳಿಗೆ ನುಗ್ಗಿ ನಿದ್ದೆಯಲ್ಲಿರುವವರನ್ನು ಕ್ರೂರವಾಗಿ ಥಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರ ಈ ಕೃತ್ಯದ ವಿಡಿಯೊವನ್ನು ಕುಟುಂಬದ ಸದಸ್ಯರು ಹಂಚಿಕೊಂಡಿದ್ದಾರೆ. ಪುರುಷರು ಮತ್ತು ಮಹಿಳೆಯರು ಸಹಾಯಕ್ಕಾಗಿ ಕಿರುಚಾಡುವುದು ವಿಡಿಯೊದಲ್ಲಿದೆ. ಸಹಾಯಕ್ಕಾಗಿ ಕೂಗುವ ಜನರ ಮೇಲೆ ಪೊಲೀಸರು ಕೋಲುಗಳಿಂದ ಹಲ್ಲೆ ನಡೆಸುತ್ತಿದ್ದಾರೆ. ರೈತರು ಹಂಚಿಕೊಂಡ ವಿಡಿಯೊಗಳಲ್ಲಿ ಪೊಲೀಸರು ತಮ್ಮ ದಾಳಿಯನ್ನು ಪ್ರಾರಂಭಿಸುವ ಮುನ್ನ ಮನೆಗಳ ಹೊರಗೆ ಜಮಾಯಿಸುವುದನ್ನು ತೋರಿಸುತ್ತವೆ. 2010-11ರ ಮೊದಲು ಎಸ್‌ಜೆವಿಎನ್‌ನಿಂದ ವಿದ್ಯುತ್ ಸ್ಥಾವರಕ್ಕಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದಕ್ಕೆ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ರಾಜ್ಯದ ರೈತರು ಸ್ವಲ್ಪ ಸಮಯದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಚಾಲ್ತಿಯಲ್ಲಿರುವ ಮೊತ್ತಕ್ಕೆ ಅನುಗುಣವಾಗಿ ರೈತರಿಗೆ ಆ ಸಮಯದಲ್ಲಿ ಪರಿಹಾರ ನೀಡಲಾಯಿತು. ಆದರೆ, ಕಳೆದ ವರ್ಷ ಕಂಪನಿಯು ಹೆಚ್ಚಿನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾರಂಭಿಸಿದಾಗ, ಪ್ರಸ್ತುತ ದರದಂತೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದರು.

ಕಂಪನಿಯು ಹಳೆಯ ದರದಲ್ಲಿ ಬಲವಂತವಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಇದು ಕಳೆದ ಎರಡು ತಿಂಗಳಿನಿಂದ ಭಾರೀ ಪ್ರತಿಭಟನೆಗಳನ್ನು ಹುಟ್ಟುಹಾಕಿತು. ಇದಾದ ನಂತರ ರಾತ್ರಿಯಲ್ಲಿ ಮಲಗಿದ್ದ ರೈತರ ಮನೆಗಳಿಗೆ ಪೊಲೀಸರು ನುಗ್ಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಮುಫಾಸಿಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅಮಿತ್ ಕುಮಾರ್ ನೇತೃತ್ವದಲ್ಲಿ ರೈತರ ಮೇಲೆ ಹಲ್ಲೆ ನಡೆದಿದೆ. ಈ ದಾಳಿ ಸಮರ್ಥಿಸಿಕೊಂಡ ಕುಮಾರ್, ಎಸ್‌ಜೆವಿಎನ್‌ನಿಂದ ಎಫ್‌ಐಆರ್‌ನಲ್ಲಿ ಹೆಸರಿಸಲಾದ ರೈತರನ್ನು ಬಂಧಿಸಲು ಪ್ರದೇಶವನ್ನು ತಲುಪಿದಾಗ ಅವರ ಮೇಲೆ ಮೊದಲು ದಾಳಿ ಮಾಡಲಾಯಿತು ಎಂದು ಹೇಳಿದರು. ಪೊಲೀಸರು ಪ್ರತಿದಾಳಿ ನಡೆಸಿದರು ಎಂದಿದ್ದಾರೆ ಕುಮಾರ್.

ಚೌಸಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಮೊದಲು, ಜಿಲ್ಲೆಯ ರೈತರಿಗೆ ಸಂಸ್ಥೆಯಿಂದ ಜಿಲ್ಲೆಯಲ್ಲಿ ತ್ವರಿತ ಅಭಿವೃದ್ಧಿ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಗಳ ಭರವಸೆ ನೀಡಲಾಯಿತು. ಈ ಪ್ರದೇಶದಲ್ಲಿ ಶಾಲೆಗಳು, ಹೋಟೆಲ್‌ಗಳು ಮತ್ತು ಜೀವನೋಪಾಯದ ಸಂಪನ್ಮೂಲಗಳನ್ನು ನಿರ್ಮಿಸಲಾಗುವುದು, ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು ಎಂದು ರೈತರಿಗೆ ಭರವಸೆ ನೀಡಲಾಗಿತ್ತು.

ಆದರೆ ರೈತರು ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಂತೆಯೇ ದಬ್ಬಾಳಿಕೆ ಆರಂಭವಾಗಿದೆ ಎಂದು ಆರೋಪಿಸಿದರು. ವರದಿಗಳ ಪ್ರಕಾರ, ಇತರ ರಾಜ್ಯಗಳಿಂದ ಜನರನ್ನು ನೇಮಿಸಿಕೊಳ್ಳಲಾಗಿದೆ, ರಾಜಕಾರಣಿಗಳಿಗೆ ಸಿಎಸ್ಆರ್ ಹಣವನ್ನು ಖರ್ಚು ಮಾಡಲಾಗಿದೆ ಮತ್ತು ಗೌರವಾರ್ಥವಾಗಿ ಅಧಿಕಾರಿಗಳಿಗೆ ಲಕ್ಷಾಂತರ ಮೌಲ್ಯದ ಉಡುಗೊರೆಗಳನ್ನು ಕಳುಹಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್