AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಐವರು ಸಹೋದ್ಯೋಗಿಗಳನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್ ಅಧಿಕಾರಿ; ಸಿಬ್ಬಂದಿಯಿಂದ ವ್ಯಾಪಕ ಆಕ್ರೋಶ

ಪೊಲೀಸರು ಲಾಕಪ್​ನಲ್ಲಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಾವಿರಾರು ಮಂದಿ ಆಕ್ಷೇಪಿಸಿದ್ದಾರೆ.

Viral Video: ಐವರು ಸಹೋದ್ಯೋಗಿಗಳನ್ನೇ ಲಾಕಪ್​ಗೆ ತಳ್ಳಿದ ಪೊಲೀಸ್ ಅಧಿಕಾರಿ; ಸಿಬ್ಬಂದಿಯಿಂದ ವ್ಯಾಪಕ ಆಕ್ರೋಶ
ಪೊಲೀಸ್ ಅಧಿಕಾರಿಗಳನ್ನು ಲಾಕಪ್​ಗೆ ಹಾಕಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 11, 2022 | 7:10 AM

Share

ಪಾಟ್ನಾ: ಐವರು ಅಧೀನ ಪೊಲೀಸ್ ಸಿಬ್ಬಂದಿಯನ್ನು ಲಾಕಪ್​ಗೆ ಹಾಕಿದ ಅಧಿಕಾರಿಯ ಕಾರ್ಯವೈಖರಿ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಹಾರದ ನವಾಡ ಪಟ್ಟಣದಲ್ಲಿ (Bihar’s Nawada town) ಈ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಯು ಅವರನ್ನು ಲಾಕಪ್​ಗೆ ದೂಡಿ, ಬೀಗ ಜಡಿದಿದ್ದಾರೆ. ಪೊಲೀಸರು ಲಾಕಪ್​ನಲ್ಲಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಾವಿರಾರು ಮಂದಿ ಆಕ್ಷೇಪಿಸಿದ್ದಾರೆ. ‘ಇದು ವಿಷಾದಕರ ಬೆಳವಣಿಗೆ’ ಎಂದು ಹೇಳಿರುವ ಬಿಹಾರದ ಪೊಲೀಸ್ ಸಿಬ್ಬಂದಿಯ ಸಂಘ ‘ಬಿಹಾರ ಪೊಲೀಸ್ ಒಕ್ಕೂಟ’ವು ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕು. ಎಸ್​ಪಿ ಗೌರವ್ ಮಂಗ್ಲಾ ಅವರ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಯಬೇಕಿದೆ ಎಂದು ಆಗ್ರಹಿಸಿದೆ.

ಸಬ್​-ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದನ್ನು ಸೆಕ್ಯುರಿಟಿ ಕ್ಯಾಮೆರಾಗಳು ತೋರಿಸಿವೆ. ಸುಮಾರು ಎರಡು ಗಂಟೆಯ ನಂತರ ಇವರೆಲ್ಲರೂ ಲಾಕಪ್​ನಿಂದ ಹೊರಗೆ ಬಂದಿದ್ದಾರೆ. ‘ನಡೆಯಬಾರದ್ದು ನಡೆದಿದೆ ಎನ್ನುವ ರೀತಿಯಲ್ಲಿ ಮಾಧ್ಯಮಗಳು ವರದಿ ಮಾಡುತ್ತಿವೆ. ವಾಸ್ತವದಲ್ಲಿ ಅಂಥದ್ದೇನೂ ನಡೆದಿಲ್ಲ’ ಎಂದು ಎಸ್​ಪಿ ಮಂಗ್ಲಾ ಹೇಳಿದ್ದಾರೆ. ಸ್ಟೇಷನ್ ಜವಾಬ್ದಾರಿ ಹೊತ್ತಿರುವ ಇನ್​ಸ್ಪೆಕ್ಟರ್ ವಿಜಯ್ ಕುಮಾರ್ ಸಿಂಗ್ ಸಹ ಎಸ್​ಪಿ ಹೇಳಿಕೆಯನ್ನು ಪುಷ್ಟೀಕರಿಸಿದ್ದಾರೆ.

ಕೆಲವು ಪ್ರಕರಣಗಳನ್ನು ಪರಿಶೀಲಿಸಲೆಂದು ಸೆಪ್ಟೆಂಬರ್ 8ರಂದು ಎಸ್​ಪಿ ಸ್ಥಳಕ್ಕೆ ಬಂದರು. ಈ ವೇಳೆ ಕೆಲ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡ ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದರು. ಆದರೆ ಇವರ ಕರ್ತವ್ಯಲೋಪ ಅಥವಾ ತಪ್ಪು ಏನು ಎಂದು ಮೂಲಗಳು ಹೇಳಿಲ್ಲ. ಈ ಬಗ್ಗೆ ಎಸ್​ಪಿ ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ‘ಪೊಲೀಸರನ್ನು ಲಾಕಪ್​ಗೆ ಹಾಕಿರುವ ಯಾವುದೇ ವಿಡಿಯೊ ಬಹಿರಂಗಗೊಂಡಿಲ್ಲ’ ಎಂದು ಎಸ್​ಪಿ ಹೇಳಿದ್ದರು. ಆದರೆ ಅವರು ಹೇಳಿಕೆ ನೀಡಿದ ಮಾರನೇ ದಿನವೇ ವಾಟ್ಸಾಪ್​ ಗ್ರೂಪ್​ಗಳಲ್ಲಿ ಸಿಸಿಟಿವಿ ಫೂಟೇಜ್​ನ ವಿಡಿಯೊ ತುಣುಕು ಹರಿದಾಡಲು ಆರಂಭಿಸಿತು.

ಬಿಹಾರ ಪೊಲೀಸ್ ಒಕ್ಕೂಟದ ಅಧ್ಯಕ್ಷ ಮೃತ್ಯುಂಜಯ ಕುಮಾರ್ ಸಿಂಗ್ ಈ ಸಂಬಂಧ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ‘ಎಸ್​ಪಿ ನಮ್ಮ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಅಧೀನ ಸಿಬ್ಬಂದಿಯನ್ನು ಲಾಕಪ್​ಗೆ ಹಾಕಿರುವ ಬಗ್ಗೆ ತನಿಖೆ ನಡೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ. ‘ಸಿಸಿಟಿವಿ ಫೂಟೇಜ್​ಗಳನ್ನು ಎಸ್​ಪಿ ತಿರುಚಬಹುದು. ಈ ಕೃತ್ಯವು ಪೊಲೀಸರ ಸ್ಥೈರ್ಯವನ್ನು ಕುಗ್ಗಿಸಿದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಿಹಾರದ ಮುಖ್ಯ ಕಾರ್ಯದರ್ಶಿ ಮಾರ್ಗದರ್ಶಿ ಸೂಚನೆಗಳನ್ನು ಹೊರಡಿಸಿದ್ದು, ‘ಅಧೀನ ಸಿಬ್ಬಂದಿಯ ಬಗ್ಗೆ ವಿಪರೀತ ಕ್ರಮಗಳಿಗೆ ಮುಂದಾಗಬೇಡಿ’ ಎಂದು ಹೇಳಿದ್ದಾರೆ.

Published On - 7:10 am, Sun, 11 September 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?