AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Political Crisis: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್

ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ವಿಪಕ್ಷಗಳ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

Bihar Political Crisis: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್
ನಿತೀಶ್ ಕುಮಾರ್- ತೇಜಸ್ವಿ ಯಾದವ್
TV9 Web
| Edited By: |

Updated on:Aug 09, 2022 | 2:26 PM

Share

ಪಾಟ್ನಾ: ಒಂದೆಡೆ ಮಹಾರಾಷ್ಟ್ರದಲ್ಲಿ (Maharashtra Politics) ಕಾಂಗ್ರೆಸ್ ಜೊತೆಗಿನ ಶಿವಸೇನೆಯ ಮೈತ್ರಿಯನ್ನು ಒಡೆದು ಹೊಸ ಸರ್ಕಾರ ರಚಿಸಿರುವ ಬಿಜೆಪಿಗೆ ಬಿಹಾರದಲ್ಲಿ (Bihar) ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ- ಶಿವಸೇನೆ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಬಿಹಾರದಲ್ಲಿ ಜೆಡಿಯು- ಬಿಜೆಪಿ ಮೈತ್ರಿ ಸರ್ಕಾರ ಪತನವಾಗುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ವಿಪಕ್ಷಗಳ ಜೊತೆ ಸೇರಿ ಮಹಾಘಟಬಂಧನ್ ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ತೇಜಸ್ವಿ ಯಾದವ್ (Tejaswi Yadav) ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್ (Nitish Kumar) ಇಂದು ಸಂಜೆ 4 ಗಂಟೆಗೆ ಸಮಯಾವಕಾಶ ಕೇಳಿರುವುದರಿಂದ ಈ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಅಲ್ಲದೆ, ಅವರು ತೇಜಸ್ವಿ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ
Image
Breaking News: ಶ್ರೀಕಾಂತ್ ತ್ಯಾಗಿಯನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು
Image
Maharashtra Cabinet: ಮಹಾರಾಷ್ಟ್ರದ ನೂತನ ಸಚಿವರಾಗಿ ಬಿಜೆಪಿ, ಶಿವಸೇನೆಯ 18 ಶಾಸಕರಿಂದ ಪ್ರಮಾಣವಚನ ಸ್ವೀಕಾರ
Image
Nitish Kumar: ಶಮನವಾಗದ ಭಿನ್ನಮತ; ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ, ಇಂದು ನಿತೀಶ್​ಕುಮಾರ್ ಮಹತ್ವದ ಸಭೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರಿಸಬೇಕೆ? ಎಂದು ಚರ್ಚಿಸಿದ್ದಾರೆ. ಈ ಸಭೆಯ ನಂತರ ಮಾತನಾಡಿರುವ ಜೆಡಿಯು ಹಿರಿಯ ನಾಯಕರೊಬ್ಬರು “ಸ್ಫೋಟಕ ಸುದ್ದಿಯನ್ನು ನಿರೀಕ್ಷಿಸಿ” ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರು ಜೆಡಿಯು ಒಡೆಯಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ ಎಂಬ ನಿತೀಶ್ ಕುಮಾರ್ ಅವರ ಕಳವಳವೇ ಈ ನಿರ್ಧಾರಕ್ಕೆ ಬಲವಾದ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: Nitish Kumar: ಶಮನವಾಗದ ಭಿನ್ನಮತ; ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ, ಇಂದು ನಿತೀಶ್​ಕುಮಾರ್ ಮಹತ್ವದ ಸಭೆ

ಒಂದುವೇಳೆ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡರೆ ಅವರಿಗೆ ನಮ್ಮ ಬೆಂಬಲವಿದೆ ಎಂದು ಬಿಹಾರದ ಏಕೈಕ ದೊಡ್ಡ ಪಕ್ಷವಾಗಿರುವ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ ತೇಜಸ್ವಿ ಯಾದವ್ ಹೇಳಿದ್ದರು. ಬಿಹಾರದಲ್ಲಿ ಮಹಾರಾಷ್ಟ್ರ ಮಾದರಿಯನ್ನು ಪುನರಾವರ್ತಿಸಲು ಅಮಿತ್ ಶಾ ಬಯಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Tue, 9 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ