AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ಹೋಗುವ ಸಾಧ್ಯತೆ ಇದೆ. ಅವರ ಪುತ್ರ ನಿಶಾಂತ್ ಕುಮಾರ್ ಮುಖ್ಯಮಂತ್ರಿಯಾಗುವ ಪ್ರಬಲ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದ ಬಿಹಾರದಲ್ಲಿ ಬಿಜೆಪಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ. 2026ರ ರಾಜ್ಯಸಭಾ ಚುನಾವಣೆಗಳ ಮಧ್ಯೆ ಈ ರಾಜಕೀಯ ಬದಲಾವಣೆಯು ರಾಜ್ಯದ ಭವಿಷ್ಯವನ್ನು ನಿರ್ಧರಿಸಲಿದೆ.

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ
ನಿತೀಶ್ ಕುಮಾರ್ Image Credit source: The Hans India
ನಯನಾ ರಾಜೀವ್
|

Updated on: Mar 04, 2026 | 3:36 PM

Share

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ.

ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು ಇನ್ನೂ ಸಿದ್ಧವಾಗಿಲ್ಲ.

ನಿತೀಶ್ ಕುಮಾರ್ ಅನುಪಸ್ಥಿತಿಯಲ್ಲಿ ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನದೇ ಆದ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 2026 ರ ರಾಜ್ಯಸಭಾ ಚುನಾವಣೆಗಳ ಮಧ್ಯೆ ಈ ಪ್ರಮುಖ ಆಡಳಿತಾತ್ಮಕ ಮತ್ತು ರಾಜಕೀಯ ಬದಲಾವಣೆಯ ಲಕ್ಷಣಗಳು ಹೊರಹೊಮ್ಮುತ್ತಿವೆ.

ಮತ್ತಷ್ಟು ಓದಿ: Nitish Kumar Resigns: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

ನಿತೀಶ್ ಕುಮಾರ್ ರಾಜ್ಯಸಭಾ ಅಭ್ಯರ್ಥಿಯಾಗಲಿದ್ದಾರೆ ಎಂಬ ವರದಿಗಳ ನಡುವೆ, ಬಿಹಾರದ ಉಸ್ತುವಾರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ನಿತೀಶ್ ಕುಮಾರ್ ಕೇಂದ್ರದಲ್ಲಿ ಪ್ರಮುಖ ಪಾತ್ರ ವಹಿಸಿದರೆ, ಬಿಜೆಪಿ ಬಿಹಾರದ ಮುಖ್ಯಮಂತ್ರಿ ತಮ್ಮ ಪಕ್ಷದವರನ್ನೇ ನೇಮಿಸಬಹುದು ಎಂದು ರಾಜಕೀಯ ತಜ್ಞರು ನಂಬಿದ್ದಾರೆ.

ಜೆಡಿಯು ನಾಯಕರು ನಿಶಾಂತ್ ರಾಜಕೀಯ ಪ್ರವೇಶಕ್ಕೆ ಅನುಕೂಲ ಮಾಡಿಕೊಡುತ್ತಿದ್ದರೆ, ಅವರು ಕೇಂದ್ರ ಸರ್ಕಾರದ ಮೇಲೆ ಅಲ್ಲ, ಬಿಹಾರ ರಾಜಕೀಯದ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಬಿಹಾರದಲ್ಲಿ ಬಿಜೆಪಿ ಖಂಡಿತವಾಗಿಯೂ ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಬಹುದು.

ಬಿಹಾರ ರಾಜ್ಯದಲ್ಲಿನ ಪ್ರಕ್ಷುಬ್ಧ ಸ್ಥಿತಿಗೆ ಪರಿಹಾರ ಎಂಬಂತೆ ಸಂಕಷ್ಟ ಸಂದರ್ಭದಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ನಿತೀಶ್ ಕುಮಾರ್ ಪ್ರಸ್ತುತ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ 6 ಬಾರಿ ಅವರು ಈ ಹುದ್ದೆ ನಿರ್ವಹಿಸಿದ್ದಾರೆ. ಈಗ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us