AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಇಂದು ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

Big News: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ
ನಿತೀಶ್ ಕುಮಾರ್
TV9 Web
| Updated By: ಸುಷ್ಮಾ ಚಕ್ರೆ|

Updated on:Aug 10, 2022 | 2:32 PM

Share

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ನಿತೀಶ್ ಕುಮಾರ್ (Nitish Kumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ನಿತೀಶ್ ಕುಮಾರ್ 9 ಪಕ್ಷಗಳ ಮಹಾಘಟಬಂಧನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. RJD, ಕಾಂಗ್ರೆಸ್, JD(U), ಮತ್ತು CPI, CPIML ಮತ್ತು ಇತರರು ಸೇರಿದಂತೆ ಎಡ ಪಕ್ಷಗಳು ನಿತೀಶ್ ಕುಮಾರ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ್ದವು. ನಿನ್ನೆ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಿತೀಶ್ ಕುಮಾರ್ ಬಳಿಕ ರಾಜ್ಯಪಾಲರಿಗೆ 164 ಶಾಸಕರ ಪಟ್ಟಿಯನ್ನು ಸಲ್ಲಿಸಿದ್ದರು. ಅದಾದ ಬಳಿಕ ಇಂದು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರು ನಿತೀಶ್ ಕುಮಾರ್ ಅವರನ್ನು ಆಹ್ವಾನಿಸಿದ್ದರು.

ಇಂದು ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ, ಆಗಸ್ಟ್​ 15ರ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ. ಬಿಜೆಪಿಯೊಂದಿಗೆ ನಿತೀಶ್ ಕುಮಾರ್ ಹೊಂದಿದ್ದ ಸಚಿವ ಸಂಪುಟ ಹಂಚಿಕೆಯ ಸೂತ್ರವನ್ನೇ ಆರ್‌ಜೆಡಿ ಮತ್ತು ಜೆಡಿಯು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ. ಹಣಕಾಸು, ರಸ್ತೆ ನಿರ್ಮಾಣ, ಪಟ್ಟಣ ಯೋಜನೆ, ಕೃಷಿ ಮತ್ತು ಭೂ ಕಂದಾಯ ಖಾತೆಗಳನ್ನು ನೀಡುವಂತೆ ಆರ್‌ಜೆಡಿ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bihar Political Crisis: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಅಂತ್ಯ; ಹೊಸ ಮಿತ್ರಪಕ್ಷದೊಂದಿಗೆ ಹೊಂದಾಣಿಕೆಯ ಮುನ್ಸೂಚನೆ

7 ಪಕ್ಷಗಳ ಮಹಾಘಟಬಂಧನ್ (ಮಹಾಮೈತ್ರಿಕೂಟ) ಹಾಗೂ ಒಬ್ಬ ಪಕ್ಷೇತರರು ನಮಗೆ ಬೆಂಬಲ ನೀಡಲಿದ್ದಾರೆ ಎಂದು ನಿತೀಶ್ ಕುಮಾರ್ ನಿನ್ನೆ ರಾಜ್ಯಪಾಲರೊಂದಿಗಿನ ಎರಡನೇ ಸಭೆಯ ನಂತರ ಹೇಳಿದ್ದರು. ಮೊದಲನೆಯ ಸಭೆಯಲ್ಲಿ ಅವರು ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂಲಕ ಜೆಡಿಯು ಮತ್ತು ಬಿಜೆಪಿ ಮೈತ್ರಿಗೆ ತಿಲಾಂಜಲಿ ಇಟ್ಟಿದ್ದರು. ಅದಾದ ಒಂದು ಗಂಟೆಯ ನಂತರ ಅವರು ತೇಜಸ್ವಿ ಯಾದವ್ ಮತ್ತು ಇತರ ವಿರೋಧ ಪಕ್ಷದ ನಾಯಕರೊಂದಿಗೆ ರಾಜ್ಯಪಾಲರ ಬಳಿಗೆ ತೆರಳಿ, ತಮ್ಮ ಒಟ್ಟು ಬಲದ ಆಧಾರದ ಮೇಲೆ ಮುಂದಿನ ಸರ್ಕಾರವನ್ನು ರಚಿಸಲು ಅವಕಾಶ ನೀಡಬೇಕು ಎಂದು ಕೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Wed, 10 August 22

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ