AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI Raids: ಉದ್ಯೋಗಕ್ಕಾಗಿ ಭೂಮಿ ಹಗರಣ; ನಿತೀಶ್ ವಿಶ್ವಾಸಮತ ಯಾಚನೆ ದಿನವೇ ಸಿಬಿಐ ದಾಳಿ

ನಿತೀಶ್ ಕುಮಾರ್ ನೇತೃತ್ವದ ಮಹಾ ಘಟಬಂಧನ ಸರ್ಕಾರವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ದಿನವೇ ಈ ದಾಳಿ ನಡೆದಿದೆ.

CBI Raids: ಉದ್ಯೋಗಕ್ಕಾಗಿ ಭೂಮಿ ಹಗರಣ; ನಿತೀಶ್ ವಿಶ್ವಾಸಮತ ಯಾಚನೆ ದಿನವೇ ಸಿಬಿಐ ದಾಳಿ
ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್
TV9 Web
| Edited By: |

Updated on:Aug 24, 2022 | 10:12 AM

Share

ಪಾಟ್ನಾ: ಕೇಂದ್ರೀಯ ತನಿಖಾ ದಳವು (Central Bureau of Investigation – CBI) ಬುಧವಾರ ರಾಷ್ಟ್ರೀಯ ಜನತಾ ದಳದ (Rashtriya Janatha Dal – RJD) ವಿಧಾನ ಪರಿಷತ್ ಸದಸ್ಯ ಸುನಿಲ್ ಸಿಂಗ್ ಅವರ ಮನೆಯ ಮೇಲೆ ದಾಳಿ ನಡೆಸಿದೆ. ‘ಉದ್ಯೋಗಕ್ಕಾಗಿ ಭೂಮಿ ಹಗರಣ’ ಆರೋಪಕ್ಕೆ ಸಂಬಂಧಿಸಿದಂತೆ ನಡೆದಿರುವ ದಾಳಿಯಿದು ಎಂದು ಹೇಳಲಾಗುತ್ತಿದೆ. ‘ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸಲಾಗಿದೆ. ಯಾವುದೇ ಆಧಾರವಿಲ್ಲದ ಆರೋಪವನ್ನು ಆಧರಿಸಿ ಸಿಬಿಐ ದಾಳಿ ನಡೆಸಿದೆ. ಒತ್ತಡದಿಂದ ಸಿಬಿಐ ಹೀಗೆ ವರ್ತಿಸುತ್ತಿದೆ’ ಎಂದು ಆರ್​ಜೆಡಿ ನಾಯಕರು ಹೇಳಿದರು.

ನಿತೀಶ್ ಕುಮಾರ್ ನೇತೃತ್ವದ ಮಹಾ ಘಟಬಂಧನ ಸರ್ಕಾರವು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕಾದ ದಿನವೇ ಈ ದಾಳಿ ನಡೆದಿದೆ. ಇಂದಿನಿಂದ ಬಿಹಾರ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ಕಳೆದ ಮೇ ತಿಂಗಳಲ್ಲಿ ಸಿಬಿಐ ಮಾಜಿ ರೈಲ್ವೆ ಸಚಿವ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದಲ್ಲಿ ಲಾಲು ಅವರ ಇಬ್ಬರು ಹೆಣ್ಣುಮಕ್ಕಳು ಮತ್ತು 12 ಇತರರನ್ನು ಹಗರಣದಲ್ಲಿ ಆರೋಪಿಗಳನ್ನಾಗಿ ಸಿಬಿಐ ಹೆಸರಿಸಿದೆ. ಉದ್ಯೋಗ ಪಡೆಯಲು ಭೂಮಿಯನ್ನು ಕೊಡಬೇಕು ಅಥವಾ ಆರ್​ಜೆಡಿ ನಾಯಕರ ಹೆಸರಿನಲ್ಲಿರುವ ಭೂಮಿಯನ್ನು ದುಬಾರಿ ಬೆಲೆಗೆ ಖರೀದಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಸಿಬಿಐ ಪ್ರಾಥಮಿಕ ತನಿಖೆ ಆರಂಭಿಸಿತ್ತು. ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ 2004ರಿಂದ 09ರ ಅವಧಿಯಲ್ಲಿ ಗ್ರೂಪ್​ ಡಿ ನೌಕರರಾಗಿ ನೇಮಕಗೊಂಡಿದ್ದವರಿಂದ ಭೂಮಿಯನ್ನು ಪಡೆಯಲಾಗಿತ್ತು. ನಂತರದ ದಿನಗಳಲ್ಲಿ ಅವನ್ನು ಮಾರಲಾಗಿತ್ತು ಎಂದು ಸಿಬಿಐ ಹೇಳಿದೆ. ಆರ್​ಜೆಡಿ ಸಂಸದ ಅಶ್ಫಾಖ್ ಕರೀಮ್ ಮತ್ತು ವಿಧಾನ ಪರಿಷತ್ ಸದಸ್ಯ ಸುನಿಲ್ ಸಿಂಗ್ ಅವರ ಮನೆಗಳ ಮೇಲೆ ಕಳೆದ ಬುಧವಾರ ಸಿಬಿಐ ದಾಳಿ ನಡೆಸಿತ್ತು.

ಇದನ್ನೂ ಓದಿ: ಬಿಹಾರದಲ್ಲಿ ಇಂದು ವಿಶ್ವಾಸಮತಯಾಚನೆ; 165 ಶಾಸಕರ ಬೆಂಬಲದಿಂದ ನಿತೀಶ್ ಕುಮಾರ್ ಸರ್ಕಾರಕ್ಕೆ ಗೆಲುವು ಖಚಿತ

Published On - 10:10 am, Wed, 24 August 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ