AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಯಾದವ್-ರೋಹಿಣಿ ಆಚಾರ್ಯ ನಡುವಿನ ಕಲಹ, ಲಾಲು ಪ್ರಸಾದ್ ಯಾದವ್ ಹೇಳಿದ್ದೇನು?

ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬ ಕಲಹ ಮುನ್ನೆಲೆಗೆ ಬಂದಿದೆ. ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ತಮ್ಮನ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ನನ್ನನ್ನು ತೇಜಸ್ವಿ ಕುಟುಂಬದಿಂದ ಹಾಗೂ ಪಕ್ಷದಿಂದ ಹೊರಹಾಕಿದ್ದಾನೆ, ನನ್ನ ಮೇಲೆ ಚಪ್ಪಲಿ ಎತ್ತಿದ್ದಾನೆ. ಕುಟುಂಬದವರು ಕೊಳಕು ಕಿಡ್ನಿ ಬದಲಾಗಿ ಚುನಾವಣಾ ಟಿಕೆಟ್ ಪಡೆದಿದ್ದಾಳೆ ಎಂದು ಹೀಯಾಳಿಸಿದ್ದಾಗಿ ರೋಹಿಣಿ ಮಾಧ್ಯಮದ ಬಳಿ ಹೇಳಿಕೊಂಡಿದ್ದರು.

ತೇಜಸ್ವಿ ಯಾದವ್-ರೋಹಿಣಿ ಆಚಾರ್ಯ ನಡುವಿನ ಕಲಹ, ಲಾಲು ಪ್ರಸಾದ್ ಯಾದವ್ ಹೇಳಿದ್ದೇನು?
ಲಾಲು ಪ್ರಸಾದ್ ಯಾದವ್
ನಯನಾ ರಾಜೀವ್
|

Updated on: Nov 18, 2025 | 9:10 AM

Share

ಪಾಟ್ನಾ, ನವೆಂಬರ್ 18: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ(Assembly Election)ಯಲ್ಲಿ ಆರ್​ಜೆಡಿ ಹೀನಾಯ ಸೋಲು ಅನುಭವಿಸಿತ್ತು. ಇದರ ಬೆನ್ನಲ್ಲೇ ಕುಟುಂಬ ಕಲಹ ಕೂಡ ಮುನ್ನೆಲೆಗೆ ಬಂದಿತ್ತು. ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ತಮ್ಮನ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ನನ್ನನ್ನು ತೇಜಸ್ವಿ ಕುಟುಂಬದಿಂದ ಹಾಗೂ ಪಕ್ಷದಿಂದ ಹೊರಹಾಕಿದ್ದಾನೆ, ನನ್ನ ಮೇಲೆ ಚಪ್ಪಲಿ ಎತ್ತಿದ್ದಾನೆ. ಕುಟುಂಬದವರು ಕೊಳಕು ಕಿಡ್ನಿ ಬದಲಾಗಿ ಚುನಾವಣಾ ಟಿಕೆಟ್ ಪಡೆದಿದ್ದಾಳೆ ಎಂದು ಹೀಯಾಳಿಸಿದ್ದಾಗಿ ರೋಹಿಣಿ ಅಳಲು ತೋಡಿಕೊಂಡಿದ್ದರು.

ಇಷ್ಟೆಲ್ಲಾ ಘಟನೆಗಳು ನಡೆದ ಬಳಿಕ ಇದೀಗ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಇದು ನಮ್ಮ ಕುಟುಂಬದ ವಿಷಯ, ತೇಜಸ್ವಿ ಹಾಗೂ ರೋಹಿಣಿ ನಡುವೆ ಇರುವ ಮನಸ್ತಾಪ ಶೀಘ್ರವೇ ಬಗೆಹರಿಯಲಿದೆ ಎಂದು ಹೇಳಿದ್ದಾರೆ.ಸೋಮವಾರ, 1 ಪೋಲೊ ರಸ್ತೆಯಲ್ಲಿರುವ ತೇಜಸ್ವಿ ಯಾದವ್ ಅವರ ಅಧಿಕೃತ ನಿವಾಸದಲ್ಲಿ ಆರ್‌ಜೆಡಿ ಶಾಸಕರು ಮತ್ತು ನಾಯಕರ ಸಭೆ ನಡೆಯಿತು. ಲಾಲು ಪ್ರಸಾದ್ ಯಾದವ್ ಕೂಡ ಸಭೆಯಲ್ಲಿ ಹಾಜರಿದ್ದರು.

ಸಿದ್ಧಾಂತದ ಬಗ್ಗೆ ಯಾವುದೇ ರಾಜಿ ಇರುವುದಿಲ್ಲ ಎಂದು ಲಾಲು ಶಾಸಕರು ಮತ್ತು ಪಕ್ಷದ ನಾಯಕರಿಗೆ ಹೇಳಿದರು. ನಾವು ಬಡವರ ಪರವಾಗಿ ಧ್ವನಿ ಎತ್ತುವುದನ್ನು ಮುಂದುವರಿಸಬೇಕು. ಬಿಹಾರದಲ್ಲಿ ಇಂಡಿ ಮೈತ್ರಿಕೂಟವನ್ನು ಎನ್‌ಡಿಎ ಸೋಲಿಸಿದೆ.243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ, ಎನ್‌ಡಿಎ 202 ಸ್ಥಾನಗಳನ್ನು ಗೆದ್ದರೆ, ಆರ್‌ಜೆಡಿ 143 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 25 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ಚುನಾವಣಾ ಸೋಲಿನ ಜೊತೆಗೆ, ಸ್ಥಾಪಕ ಲಾಲು ಪ್ರಸಾದ್ ಅವರ ಕುಟುಂಬದಲ್ಲಿ ಬೆಳೆಯುತ್ತಿರುವ ಭಿನ್ನಾಭಿಪ್ರಾಯದಿಂದ ಪಕ್ಷವು ಎರಡು ಸವಾಲುಗಳನ್ನು ಎದುರಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿರುವ ರೋಹಿಣಿ, ತನ್ನನ್ನು ಅನಾಥಳನ್ನಾಗಿ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಮತ್ತಷ್ಟು ಓದಿ: Nitish Kumar Resigns: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ

ರೋಹಿಣಿ ಪೋಸ್ಟ್​​ನಲ್ಲಿ ಹರಿಯಾಣದ ಆರ್‌ಜೆಡಿ ಸಂಸದ ಸಂಜಯ್ ಯಾದವ್ ಮತ್ತು ಉತ್ತರ ಪ್ರದೇಶದ ರಾಜಕೀಯ ಕುಟುಂಬದಿಂದ ಬಂದ ರಮೀಜ್ ಅವರು ಆರ್‌ಜೆಡಿಯ ಚುನಾವಣಾ ಸೋಲಿಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ.

ಆರ್‌ಜೆಡಿಯೊಳಗಿನ ಈ ಕೌಟುಂಬಿಕ ಕಲಹಕ್ಕೆ ತೇಜಸ್ವಿ ಯಾದವ್ ಅವರನ್ನು ಸೋಮವಾರ ಎನ್‌ಡಿಎ ನಾಯಕರು ತೀವ್ರವಾಗಿ ಟೀಕಿಸಿದರು. ತನ್ನ ಮನೆಯ ಮಹಿಳೆಯರನ್ನು ಗೌರವಿಸದ ವ್ಯಕ್ತಿ ಬಿಹಾರದ ಭವಿಷ್ಯದ ಬಗ್ಗೆ ಹೇಗೆ ಮಾತನಾಡಲು ಸಾಧ್ಯ? ಎಂದು ಅವರು ಕೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ