AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಭಾರೀ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ
ಸಾಂದರ್ಭಿಕ ಚಿತ್ರ
Skanda
|

Updated on:Dec 03, 2020 | 12:51 PM

Share

ಪಾಟ್ನಾ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ಹಾಗೂ ವಿವಿಪ್ಯಾಟ್​ ಸ್ಲಿಪ್​​ಗಳನ್ನು ತುಲನೆ ಮಾಡಿ ನೋಡಲಾಗಿದ್ದು, ಇವು ಶೇಕಡಾ ನೂರರಷ್ಟು ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.  ಈ ಮೂಲಕ ಆಯೋಗವು ಇವಿಎಂ ಯಂತ್ರಕ್ಕೆ ಕ್ಲೀನ್​ ಚಿಟ್​ ನೀಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು. ಇದಾದ ನಂತರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಗೆ ಬೀರಲು ಆರಂಭಿಸಿತ್ತು. ಇದರಿಂದ ಅನುಮಾನಗೊಂಡ ವಿಪಕ್ಷಗಳು ಬಿಜೆಪಿ ಪಕ್ಷವು ಇವಿಎಂ EVM ತಿರುಚುವ ಕೆಲಸ ಮಾಡುತ್ತಿದೆ ಎನ್ನುವ ಅನುಮಾನ ಹೊರ ಹಾಕಿದ್ದವು.

ಈ ವಿಚಾರದ ಪ್ರಕರಣದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲು ಕೂಡ ಏರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ಹೊಸ ಆದೇಶ ಹೊರಡಿಸಿತ್ತು. ಮತ ಎಣಿಕೆ ಪೂರ್ಣಗೊಂಡ ನಂತರ  ಐದು ಮತದಾನ ಕೇಂದ್ರದಿಂದ ಒಂದಷ್ಟು ಇವಿಎಂ ಯಂತ್ರಗಳನ್ನು ತಂದು, ವಿವಿಪ್ಯಾಟ್​ ಜೊತೆ ತುಲನೆ ಮಾಡಿ ನೋಡುವುದು ಕಡ್ಡಾಯ ಎಂದಿತ್ತು.

ಸುಪ್ರೀಂಕೋರ್ಟ್​ ಆದೇಶದಂತೆ ಬಿಹಾರ ಚುನಾವಣೆಯಲ್ಲಿ ಬಳಕೆ ಮಾಡಿದ ಇವಿಎಂ ಮತಯಂತ್ರ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿದೆ. ಈ ವೇಳೆ ಶೇ. 100 ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು. ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿತ್ತು. ಈಗ ಚುನಾವಣಾ ಆಯೋಗ ಸಾಕ್ಷಿ ಸಮೇತ ಮತ್ತೊಮ್ಮೆ ಇದನ್ನು ಸಾಬೀತು ಮಾಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿತ್ತು. ಈ ವೇಳೆ 8 ಕಡೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳ ನಡುವೆ ತುಲನೆ ಆಗಿರಲಿಲ್ಲ.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

Published On - 12:47 pm, Thu, 3 December 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ