AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಭಾರೀ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ
ಸಾಂದರ್ಭಿಕ ಚಿತ್ರ
Skanda
|

Updated on:Dec 03, 2020 | 12:51 PM

Share

ಪಾಟ್ನಾ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ಹಾಗೂ ವಿವಿಪ್ಯಾಟ್​ ಸ್ಲಿಪ್​​ಗಳನ್ನು ತುಲನೆ ಮಾಡಿ ನೋಡಲಾಗಿದ್ದು, ಇವು ಶೇಕಡಾ ನೂರರಷ್ಟು ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.  ಈ ಮೂಲಕ ಆಯೋಗವು ಇವಿಎಂ ಯಂತ್ರಕ್ಕೆ ಕ್ಲೀನ್​ ಚಿಟ್​ ನೀಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು. ಇದಾದ ನಂತರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಗೆ ಬೀರಲು ಆರಂಭಿಸಿತ್ತು. ಇದರಿಂದ ಅನುಮಾನಗೊಂಡ ವಿಪಕ್ಷಗಳು ಬಿಜೆಪಿ ಪಕ್ಷವು ಇವಿಎಂ EVM ತಿರುಚುವ ಕೆಲಸ ಮಾಡುತ್ತಿದೆ ಎನ್ನುವ ಅನುಮಾನ ಹೊರ ಹಾಕಿದ್ದವು.

ಈ ವಿಚಾರದ ಪ್ರಕರಣದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲು ಕೂಡ ಏರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ಹೊಸ ಆದೇಶ ಹೊರಡಿಸಿತ್ತು. ಮತ ಎಣಿಕೆ ಪೂರ್ಣಗೊಂಡ ನಂತರ  ಐದು ಮತದಾನ ಕೇಂದ್ರದಿಂದ ಒಂದಷ್ಟು ಇವಿಎಂ ಯಂತ್ರಗಳನ್ನು ತಂದು, ವಿವಿಪ್ಯಾಟ್​ ಜೊತೆ ತುಲನೆ ಮಾಡಿ ನೋಡುವುದು ಕಡ್ಡಾಯ ಎಂದಿತ್ತು.

ಸುಪ್ರೀಂಕೋರ್ಟ್​ ಆದೇಶದಂತೆ ಬಿಹಾರ ಚುನಾವಣೆಯಲ್ಲಿ ಬಳಕೆ ಮಾಡಿದ ಇವಿಎಂ ಮತಯಂತ್ರ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿದೆ. ಈ ವೇಳೆ ಶೇ. 100 ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು. ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿತ್ತು. ಈಗ ಚುನಾವಣಾ ಆಯೋಗ ಸಾಕ್ಷಿ ಸಮೇತ ಮತ್ತೊಮ್ಮೆ ಇದನ್ನು ಸಾಬೀತು ಮಾಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿತ್ತು. ಈ ವೇಳೆ 8 ಕಡೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳ ನಡುವೆ ತುಲನೆ ಆಗಿರಲಿಲ್ಲ.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

Published On - 12:47 pm, Thu, 3 December 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?