AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಭಾರೀ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ
ಸಾಂದರ್ಭಿಕ ಚಿತ್ರ
Skanda
|

Updated on:Dec 03, 2020 | 12:51 PM

Share

ಪಾಟ್ನಾ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ಹಾಗೂ ವಿವಿಪ್ಯಾಟ್​ ಸ್ಲಿಪ್​​ಗಳನ್ನು ತುಲನೆ ಮಾಡಿ ನೋಡಲಾಗಿದ್ದು, ಇವು ಶೇಕಡಾ ನೂರರಷ್ಟು ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.  ಈ ಮೂಲಕ ಆಯೋಗವು ಇವಿಎಂ ಯಂತ್ರಕ್ಕೆ ಕ್ಲೀನ್​ ಚಿಟ್​ ನೀಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು. ಇದಾದ ನಂತರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಗೆ ಬೀರಲು ಆರಂಭಿಸಿತ್ತು. ಇದರಿಂದ ಅನುಮಾನಗೊಂಡ ವಿಪಕ್ಷಗಳು ಬಿಜೆಪಿ ಪಕ್ಷವು ಇವಿಎಂ EVM ತಿರುಚುವ ಕೆಲಸ ಮಾಡುತ್ತಿದೆ ಎನ್ನುವ ಅನುಮಾನ ಹೊರ ಹಾಕಿದ್ದವು.

ಈ ವಿಚಾರದ ಪ್ರಕರಣದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲು ಕೂಡ ಏರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ಹೊಸ ಆದೇಶ ಹೊರಡಿಸಿತ್ತು. ಮತ ಎಣಿಕೆ ಪೂರ್ಣಗೊಂಡ ನಂತರ  ಐದು ಮತದಾನ ಕೇಂದ್ರದಿಂದ ಒಂದಷ್ಟು ಇವಿಎಂ ಯಂತ್ರಗಳನ್ನು ತಂದು, ವಿವಿಪ್ಯಾಟ್​ ಜೊತೆ ತುಲನೆ ಮಾಡಿ ನೋಡುವುದು ಕಡ್ಡಾಯ ಎಂದಿತ್ತು.

ಸುಪ್ರೀಂಕೋರ್ಟ್​ ಆದೇಶದಂತೆ ಬಿಹಾರ ಚುನಾವಣೆಯಲ್ಲಿ ಬಳಕೆ ಮಾಡಿದ ಇವಿಎಂ ಮತಯಂತ್ರ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿದೆ. ಈ ವೇಳೆ ಶೇ. 100 ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು. ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿತ್ತು. ಈಗ ಚುನಾವಣಾ ಆಯೋಗ ಸಾಕ್ಷಿ ಸಮೇತ ಮತ್ತೊಮ್ಮೆ ಇದನ್ನು ಸಾಬೀತು ಮಾಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿತ್ತು. ಈ ವೇಳೆ 8 ಕಡೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳ ನಡುವೆ ತುಲನೆ ಆಗಿರಲಿಲ್ಲ.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

Published On - 12:47 pm, Thu, 3 December 20

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ