AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಭಾರೀ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು.

ಬಿಹಾರ ಚುನಾವಣೆಯಲ್ಲಿ ಬಳಕೆಯಾದ EVMಗೆ ಕ್ಲೀನ್​​ ಚಿಟ್​ ನೀಡಿದ ಚುನಾವಣಾ ಆಯೋಗ
ಸಾಂದರ್ಭಿಕ ಚಿತ್ರ
Skanda
|

Updated on:Dec 03, 2020 | 12:51 PM

Share

ಪಾಟ್ನಾ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ಹಾಗೂ ವಿವಿಪ್ಯಾಟ್​ ಸ್ಲಿಪ್​​ಗಳನ್ನು ತುಲನೆ ಮಾಡಿ ನೋಡಲಾಗಿದ್ದು, ಇವು ಶೇಕಡಾ ನೂರರಷ್ಟು ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.  ಈ ಮೂಲಕ ಆಯೋಗವು ಇವಿಎಂ ಯಂತ್ರಕ್ಕೆ ಕ್ಲೀನ್​ ಚಿಟ್​ ನೀಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು. ಇದಾದ ನಂತರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಗೆ ಬೀರಲು ಆರಂಭಿಸಿತ್ತು. ಇದರಿಂದ ಅನುಮಾನಗೊಂಡ ವಿಪಕ್ಷಗಳು ಬಿಜೆಪಿ ಪಕ್ಷವು ಇವಿಎಂ EVM ತಿರುಚುವ ಕೆಲಸ ಮಾಡುತ್ತಿದೆ ಎನ್ನುವ ಅನುಮಾನ ಹೊರ ಹಾಕಿದ್ದವು.

ಈ ವಿಚಾರದ ಪ್ರಕರಣದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲು ಕೂಡ ಏರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​ ಹೊಸ ಆದೇಶ ಹೊರಡಿಸಿತ್ತು. ಮತ ಎಣಿಕೆ ಪೂರ್ಣಗೊಂಡ ನಂತರ  ಐದು ಮತದಾನ ಕೇಂದ್ರದಿಂದ ಒಂದಷ್ಟು ಇವಿಎಂ ಯಂತ್ರಗಳನ್ನು ತಂದು, ವಿವಿಪ್ಯಾಟ್​ ಜೊತೆ ತುಲನೆ ಮಾಡಿ ನೋಡುವುದು ಕಡ್ಡಾಯ ಎಂದಿತ್ತು.

ಸುಪ್ರೀಂಕೋರ್ಟ್​ ಆದೇಶದಂತೆ ಬಿಹಾರ ಚುನಾವಣೆಯಲ್ಲಿ ಬಳಕೆ ಮಾಡಿದ ಇವಿಎಂ ಮತಯಂತ್ರ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿದೆ. ಈ ವೇಳೆ ಶೇ. 100 ಹೊಂದಾಣಿಕೆ ಆಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಬಿಹಾರ ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ದೊಡ್ಡ ಗೆಲುವು ದಾಖಲಿಸಿತ್ತು. ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಅಕ್ರಮ ಎಸಗಿದೆ ಎಂದು ಆರ್​ಜೆಡಿ ಹಾಗೂ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದರು. ಈ ಆರೋಪ ಸುಳ್ಳು ಎಂದು ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿತ್ತು. ಈಗ ಚುನಾವಣಾ ಆಯೋಗ ಸಾಕ್ಷಿ ಸಮೇತ ಮತ್ತೊಮ್ಮೆ ಇದನ್ನು ಸಾಬೀತು ಮಾಡಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳನ್ನು ತಾಳೆ ಮಾಡಿ ನೋಡಲಾಗಿತ್ತು. ಈ ವೇಳೆ 8 ಕಡೆಗಳಲ್ಲಿ ಇವಿಎಂ ಹಾಗೂ ವಿವಿಪ್ಯಾಟ್​ಗಳ ನಡುವೆ ತುಲನೆ ಆಗಿರಲಿಲ್ಲ.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

Published On - 12:47 pm, Thu, 3 December 20

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್