Bihar Assembly Elections: ಚುನಾವಣಾ ಅಖಾಡಕ್ಕೆ ಬಿಹಾರ ಸಜ್ಜು; ಇಂದು ಮೊದಲ ಹಂತದ ಮತದಾನ

ಇಂದು (ನವೆಂಬರ್ 6) ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿರುಸಿನ ಪ್ರಚಾರದ ಹೋರಾಟದ ನಂತರ ಬಿಹಾರ ಮೊದಲ ಹಂತದ ಮತದಾನಕ್ಕೆ ಸಿದ್ಧವಾಗಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಎನ್​ಡಿಎಯ ಬಿಜೆಪಿ ಮತ್ತು ಜೆಡಿಯು, ಮಹಾಘಟಬಂಧನ್​ನ ಕಾಂಗ್ರೆಸ್ ಮತ್ತು ಆರ್​ಜೆಡಿ ಪಕ್ಷಗಳು ಸಾಲು-ಸಾಲು ಸಾರ್ವಜನಿಕ ರ್ಯಾಲಿಗಳನ್ನು ನಡೆಸಿವೆ.

Bihar Assembly Elections: ಚುನಾವಣಾ ಅಖಾಡಕ್ಕೆ ಬಿಹಾರ ಸಜ್ಜು; ಇಂದು ಮೊದಲ ಹಂತದ ಮತದಾನ
Bihar Elections Preperation
Updated By: ನಯನಾ ರಾಜೀವ್

Updated on: Nov 06, 2025 | 6:56 AM

ನವದೆಹಲಿ, ನವೆಂಬರ್ 5: ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣಾ (Bihar Assembly Elections) ಪ್ರಚಾರ ಮುಕ್ತಾಯವಾಗಿದೆ. ಇಂದು (ನವೆಂಬರ್ 6) ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 11ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಗುರುವಾರ ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಬಿಹಾರ ಸಜ್ಜಾಗಿದ್ದು, 3.75 ಕೋಟಿ ಮತದಾರರು 1,314 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಚುನಾವಣಾ ಫಲಿತಾಂಶಗಳು ನವೆಂಬರ್ 14ರಂದು ಪ್ರಕಟವಾಗುತ್ತವೆ.

ಈಗಾಗಲೇ ಚುನಾವಣಾ ಪ್ರಚಾರ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆರ್​ಜೆಡಿ ನಾಯಕ ತೇಜಸ್ವಿ ಯಾದವ್, ಜೆಡಿಯು ನಾಯಕ ನಿತೀಶ್ ಕುಮಾರ್ ಮುಂತಾದವರು ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಮೊದಲ ಹಂತದ ಮತದಾನದಲ್ಲಿ 121 ಕ್ಷೇತ್ರಗಳಲ್ಲಿ 45,341 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ರ‍್ಯಾಲಿಗಳು ಮತ್ತು ವೈಯಕ್ತಿಕ ದಾಳಿಗಳಿಂದ ತುಂಬಿದ ವಾರಗಳ ತೀವ್ರ ಪ್ರಚಾರದ ನಂತರ ಚುನಾವಣಾ ಪ್ರಚಾರವು ಮಂಗಳವಾರ ಸಂಜೆ ಅಧಿಕೃತವಾಗಿ ಮುಕ್ತಾಯಗೊಂಡಿತು. ಮೊದಲ ಹಂತದಲ್ಲಿ ಹಲವಾರು ಪ್ರಮುಖ ರಾಜಕೀಯ ವ್ಯಕ್ತಿಗಳು ನಿರ್ಣಾಯಕ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

2 ಹಂತಗಳಲ್ಲಿ ನಡೆಯುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ. ಈ ಚುನಾವಣೆಯು ಎರಡು ಪ್ರಮುಖ ಮೈತ್ರಿಕೂಟ ಬಣಗಳಾದ ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವೆ ಪ್ರಮುಖ ಯುದ್ಧವನ್ನು ಕಾಣಲಿದೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಡಿಎಂಕೆ

ಅದರ ಜೊತೆ ಈ ಚುನಾವಣೆಯಲ್ಲಿ ಎರಡು ಹೊಸ ಪಕ್ಷಗಳು ಹೊರಹೊಮ್ಮಿದ್ದು, ಸ್ಥಳೀಯ ಮತ್ತು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಸವಾಲನ್ನು ಒಡ್ಡಿವೆ. ಅವುಗಳಲ್ಲಿ ಒಂದು ಆರ್​ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಹೊಸ ಪಕ್ಷ ಜನಶಕ್ತಿ ಜನತಾದಳ. ಇದು ಸೆಪ್ಟೆಂಬರ್ 13, 2025ರಂದು ಪ್ರಾರಂಭಿಸಲಾಯಿತು. ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೂಡ ಜನ ಸೂರಜ್ ಪಕ್ಷವನ್ನು ಪ್ರಾರಂಭಿಸಿದ್ದಾರೆ. ಇದು ರಾಜ್ಯದ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಎನ್‌ಡಿಎಯಲ್ಲಿ ಭಾರತೀಯ ಜನತಾ ಪಕ್ಷ, ಜನತಾದಳ (ಯುನೈಟೆಡ್), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಸೇರಿವೆ.

ಇದನ್ನೂ ಓದಿ: ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ; ರಾಹುಲ್ ಗಾಂಧಿ ಹೊಸ ಬಾಂಬ್

ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ್‌ನಲ್ಲಿ ಕಾಂಗ್ರೆಸ್ ಪಕ್ಷ, ದೀಪಂಕರ್ ಭಟ್ಟಾಚಾರ್ಯ ನೇತೃತ್ವದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) (ಸಿಪಿಐ-ಎಂಎಲ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) (ಸಿಪಿಎಂ) ಮತ್ತು ಮುಖೇಶ್ ಸಹಾನಿ ಅವರ ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಸೇರಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Wed, 5 November 25