AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Rain: ಬಿಹಾರದಲ್ಲಿ ಬಿರುಗಾಳಿ ಹೊಡೆತಕ್ಕೆ 17 ಜನ ಸಾವು; 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದ ಸಾವನ್ನಪ್ಪಿದ 17 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Bihar Rain: ಬಿಹಾರದಲ್ಲಿ ಬಿರುಗಾಳಿ ಹೊಡೆತಕ್ಕೆ 17 ಜನ ಸಾವು; 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ನಿತೀಶ್ ಕುಮಾರ್
ಮಿಂಚುImage Credit source: DNA
TV9 Web
| Edited By: |

Updated on:Jun 20, 2022 | 9:27 AM

Share

ಬಿಹಾರ: ಬಿಹಾರದಲ್ಲಿ (Bihar Rain) ಭಾರೀ ಮಳೆಯಾಗುತ್ತಿದ್ದು, ಗುಡುಗು, ಮಿಂಚು, ಸಿಡಿಲಿಗೆ ಅಲ್ಲಿನ ಜನ ತತ್ತರಿಸಿದ್ದಾರೆ. ಭಾರೀ ಮಳೆ, ಬಿರುಗಾಳಿಯಿಂದ 17 ಜನರು ಸಾವನ್ನಪ್ಪಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (CM Nitish Kumar) ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದ ಸಾವನ್ನಪ್ಪಿದ 17 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

“ಬಿಹಾರದ ಭಾಗಲ್‌ಪುರದಲ್ಲಿ 6, ವೈಶಾಲಿಯಲ್ಲಿ 3, ಖಗಾರಿಯಾದಲ್ಲಿ 2, ಕತಿಹಾರ್‌ನಲ್ಲಿ 1, ಸಹರ್ಸಾದಲ್ಲಿ 1, ಮಾಧೇಪುರದಲ್ಲಿ 1, ಬಂಕಾದಲ್ಲಿ 2 ಮತ್ತು ಮುಂಗೇರ್‌ನಲ್ಲಿ ಒಬ್ಬರು ಬಿರುಗಾಳಿ ಮತ್ತು ಮಳೆಯ ಹೊಡೆತಕ್ಕೆ ಸಾವನ್ನಪ್ಪಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಮೃತರ ಸಂಬಂಧಿಕರಿಗೆ ತಕ್ಷಣವೇ 4 ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗುವುದು ಎಂದು ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಜನರು ಸಂಪೂರ್ಣ ಜಾಗರೂಕತೆ ವಹಿಸಬೇಕು. ಗುಡುಗು ಸಹಿತ ಮಳೆಯಾಗದಂತೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಬೇಕು ಎಂದು ಸಿಎಂ ನಿತೀಶ್ ಕುಮಾರ್ ಮನವಿ ಮಾಡಿದರು.

“ಪ್ರತಿಕೂಲ ಹವಾಮಾನದಲ್ಲಿ ಸಂಪೂರ್ಣ ಜಾಗರೂಕತೆ ವಹಿಸಲು ಮತ್ತು ಗುಡುಗು ಸಹಿತ ಮಳೆಯಾಗದಂತೆ ವಿಪತ್ತು ನಿರ್ವಹಣಾ ಇಲಾಖೆಯು ಕಾಲಕಾಲಕ್ಕೆ ನೀಡುವ ಸಲಹೆಗಳನ್ನು ಅನುಸರಿಸಲು ಜನರಲ್ಲಿ ಮನವಿ ಮಾಡುತ್ತಿದ್ದೇವೆ. ಮಳೆಯಲ್ಲಿ ಮನೆಯಲ್ಲಿಯೇ ಇರಿ ಮತ್ತು ಆಪತ್ತಿನ ವಾತಾವರಣದಿಂದ ಸುರಕ್ಷಿತವಾಗಿರಿ” ಎಂದು ಬಿಹಾರದ ಸಿಎಂ ಹೇಳಿದ್ದಾರೆ.

ನೈಋತ್ಯ ಮಾನ್ಸೂನ್ ಗುಜರಾತ್, ಮಧ್ಯಪ್ರದೇಶ, ವಿದರ್ಭದ ಉಳಿದ ಭಾಗಗಳು, ಛತ್ತೀಸ್‌ಗಢದ ಕೆಲವು ಭಾಗಗಳು, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಆರ್ಭಟಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಇದನ್ನೂ ಓದಿ: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಿಥಿನ್ ಮೃತದೇಹ ಕೆಆರ್ ಪುರಂ ರಾಜಕಾಲುವೆಯಲ್ಲಿ ಪತ್ತೆ

ಮುಂದಿನ ಎರಡು-ಮೂರು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ವಾರದಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ 22ರವರೆಗೆ ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶಿಸಲಿದೆ. ಅಸ್ಸಾಂ, ಮೇಘಾಲಯ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ.

ಮುಂದಿನ 2ರಿಂದ 3 ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಜೂನ್ 24 ಮತ್ತು 30ರ ನಡುವೆ ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 22ರಿಂದ ಪಶ್ಚಿಮ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುತ್ತದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 am, Mon, 20 June 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ