AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಟವಾಡುತ್ತಾ ನಾಗರಹಾವನ್ನು ಕಚ್ಚಿ ಸಾಯಿಸಿದ 1 ವರ್ಷದ ಮಗು!

ಬಿಹಾರದಲ್ಲಿ ಪವಾಡವೊಂದು ನಡೆದಿದೆ. ಮಕ್ಕಳು ಹೊರಗೆ ಆಟವಾಡುತ್ತಿದ್ದಾಗ ಅವರಿಗೆ ಹಾವು ಕಚ್ಚಿದ ಉದಾಹರಣೆಗಳು ಸಾಕಷ್ಟಿವೆ. ಆದರೆ, ಬಿಹಾರದಲ್ಲಿ 1 ವರ್ಷದ ಮಗುವೊಂದು ತಾನೇ ಆಟವಾಡುತ್ತಾ ಆಕಸ್ಮಿಕವಾಗಿ ನಾಗರಹಾವನ್ನು ಕಚ್ಚಿ ಕಚ್ಚಿ ಕೊಂದ ಆಘಾತಕಾರಿ ಘಟನೆ ನಡೆದಿದೆ. ವಿಷಸರ್ಪವನ್ನು ಕಚ್ಚಿದರೂ ಆ ಮಗು ಪವಾಡಸದೃಶವಾಗಿ ಬದುಕುಳಿದಿದೆ!

Shocking News: ಆಟವಾಡುತ್ತಾ ನಾಗರಹಾವನ್ನು ಕಚ್ಚಿ ಸಾಯಿಸಿದ 1 ವರ್ಷದ ಮಗು!
Baby
ಸುಷ್ಮಾ ಚಕ್ರೆ
|

Updated on: Jul 26, 2025 | 7:35 PM

Share

ಪಾಟ್ನಾ, ಜುಲೈ 26: ಬಿಹಾರದ (Bihar) ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು (Shocking News) ಬೆಳಕಿಗೆ ಬಂದಿದೆ. ಶುಕ್ರವಾರ ಒಂದು ವರ್ಷದ ಗಂಡು ಮಗು ಮನೆಯ ಹೊರಗೆ ಆಟವಾಡುತ್ತಿದ್ದಾಗ ಅಲ್ಲಿಗೆ ನಾಗರಹಾವು (Cobra) ಬಂದಿತು. ಆ ನಾಗರಹಾವನ್ನು ಹಿಡಿದ ಮಗು ಅದಕ್ಕೆ ಕಚ್ಚಿದೆ. ಆಟದ ವಸ್ತುವೆಂದುಕೊಂಡ ಮಗು ಹಾವಿಗೆ ಸಾಕಷ್ಟು ಬಾರಿ ಕಚ್ಚಿದೆ. ಇದರ ಪರಿಣಾಮವಾಗಿ ಗಾಯಗಳಾಗಿ ನಾಗರಹಾವು ಸಾವನ್ನಪ್ಪಿದ! ಆದರೆ, ಮಗು ಏನೂ ತೊಂದರೆಯಿಲ್ಲದೆ ಬದುಕುಳಿದಿದೆ.

ಮಜೌಲಿಯಾ ಬ್ಲಾಕ್‌ನಲ್ಲಿರುವ ಮೊಹ್ಚಿ ಬಂಕತ್ವಾ ಗ್ರಾಮದಲ್ಲಿ ಒಂದು ವರ್ಷದ ಗೋವಿಂದ ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದ. ಈ ಸಮಯದಲ್ಲಿ, ಗೋವಿಂದನಿಗೆ ನಾಗರಹಾವು ಕಂಡಿತು. ಅದು ಆಟದ ವಸ್ತು ಎಂದುಕೊಂಡ ಆತ ಕೈಯಲ್ಲಿದ್ದ ಆಟದ ಸಾಮಾನಿನಿಂದ ಆ ಹಾವಿಗೆ ಮೊದಲು ಹೊಡೆದಿದ್ದಾನೆ. ನಂತರ ಅದನ್ನು ಎತ್ತಿಕೊಂಡು ಕಚ್ಚಿದ್ದಾನೆ. ಆ ಹಾವು ತಕ್ಷಣವೇ ಸತ್ತುಹೋಯಿತು. ವಿಷಕಾರಿ ಹಾವನ್ನು ಕಚ್ಚಿದರೂ ಮಗುವಿಗೆ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ: ಗೃಹರಕ್ಷಕ ನೇಮಕಾತಿ ವೇಳೆ ಪ್ರಜ್ಞೆ ತಪ್ಪಿದ ಬಿಹಾರದ ಮಹಿಳೆ ಮೇಲೆ ಆ್ಯಂಬುಲೆನ್ಸ್‌ನಲ್ಲಿ ಸಾಮೂಹಿಕ ಅತ್ಯಾಚಾರ!

ಆದರೆ, ಸ್ವಲ್ಪ ಪ್ರಮಾಣದ ವಿಷ ದೇಹ ಸೇರಿದ್ದರಿಂದ ಅದೆಲ್ಲ ಆಗಿ ಸ್ವಲ್ಪ ಸಮಯದ ನಂತರ ಮಗು ಪ್ರಜ್ಞೆ ತಪ್ಪಿತು. ದಿಗ್ಭ್ರಮೆಗೊಂಡು ಭಯಭೀತರಾದ ಅವರ ಕುಟುಂಬಸ್ಥರು ಆ ಮಗುವನ್ನು ಆಸ್ಪತ್ರೆಗೆ ಸಾಗಿಸಿದರು. ಗೋವಿಂದ ಈಗ ಅಪಾಯದಿಂದ ಪಾರಾಗಿದ್ದು, ಇನ್ನೂ ನಿಗಾ ಘಟಕದಲ್ಲಿದ್ದಾರೆ.

ಕಳೆದ ವರ್ಷ ಬಿಹಾರದ ಗಯಾದಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಅಲ್ಲಿ ಒಂದು ಸಣ್ಣ ಮಗು ಹಾವನ್ನು ಕಚ್ಚಿ ಕೊಂದಿತ್ತು. ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಹಾವನ್ನು ಕಚ್ಚಿದ್ದರೂ ಸಹ ಮಗು ಸಂಪೂರ್ಣವಾಗಿ ಆರೋಗ್ಯವಾಗಿರುವುದಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ