AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ, ಕಲ್ಲು ತೂರಾಟ, ಹಲವರಿಗೆ ಗಾಯ

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಬಿಹಾರದ ದರ್ಭಾಂಗಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದರ್ಭಾಂಗದಲ್ಲಿ ಇಂಟರ್​ನೆಟ್ ಸೇವೆಯನ್ನು ಫೆಬ್ರವರಿ 19 ರಂದು ಮಧ್ಯಾಹ್ನ 2 ರವರೆಗೆ ಸ್ಥಗಿತಗೊಳಿಸಲಾಗಿದೆ.

ಬಿಹಾರ: ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ, ಕಲ್ಲು ತೂರಾಟ, ಹಲವರಿಗೆ ಗಾಯ
ಭದ್ರತೆ
ನಯನಾ ರಾಜೀವ್
|

Updated on: Feb 18, 2024 | 9:12 AM

Share

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಬಿಹಾರದ ದರ್ಭಂಗಾದಲ್ಲಿ ನಡೆದಿದೆ. ಮೂರ್ತಿ ಹಾಗೂ ಅಲ್ಲಿ ಸೇರಿದ್ದ ಜನರ ಮೇಲೆ ಕಲ್ಲು ತೂರಾಟ ನಡೆದಿದೆ. ಮೂರ್ತಿ ವಿಸರ್ಜನೆಯು ಇದೀಗ ಶಾಂತಿಯುತವಾಗಿ ಪೂರ್ಣಗೊಂಡಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ರಾಜ್ ತಿಳಿಸಿದ್ದಾರೆ.

ಎರಡೂ ಕಡೆಯ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಇದುವರೆಗೆ 40 ಮಂದಿಯನ್ನು ಬಂಧಿಸಲಾಗಿದೆ. ದರ್ಭಂಗಾದ ಬಿಶನ್‌ಪುರ ಮತ್ತು ಹಯಾಘಾಟ್ ಪೊಲೀಸ್ ಠಾಣೆಗಳ ಪ್ರದೇಶಗಳಲ್ಲಿ ಶುಕ್ರವಾರ ಎರಡು ಸಮುದಾಯಗಳ ನಡುವೆ ಸಣ್ಣ ಘರ್ಷಣೆಗಳು ನಡೆದಿವೆ. ಭಾಗಲ್ಪುರ್ ಜಿಲ್ಲೆಯ ಲೋದಿಪುರ ಪ್ರದೇಶದಲ್ಲಿ ಶುಕ್ರವಾರ ಇದೇ ರೀತಿಯ ಘಟನೆ ವರದಿಯಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ಪರಿಸ್ಥಿತಿಯನ್ನು ತಕ್ಷಣ ನಿಯಂತ್ರಣಕ್ಕೆ ತರಲಾಯಿತು.

ಮತ್ತಷ್ಟು ಓದಿ: ತ್ರಿಪುರಾ: ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ, ಭುಗಿಲೆದ್ದ ಆಕ್ರೋಶ

ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ(Saraswati) ವಿಗ್ರಹಕ್ಕೆ ಪೂಜೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತ್ರಿಪುರಾ ಹತ್ತಿರದ ಲಿಚುಬಗಾನ್​ನ ಕಾಲೇಜಿನಲ್ಲಿ ಪೂಜೆ ಆಚರಣೆಯಲ್ಲಿ ಸರಸ್ವತಿ ವಿಗ್ರಹಕ್ಕೆ ಪೂಜೆ ಮಾಡಲಾಗಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿಗೆ ನುಗ್ಗಿ ಸರಸ್ವತಿ ದೇವಿಯ ವಿಗ್ರಹಕ್ಕೆ ಸೀರೆ ಹೊದಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಶಿಕ್ಷಣ ಹಾಗೂ ಜ್ಞಾನದ ಅಧಿದೇವತೆ ಶಾರದೆಯ ಜನ್ಮದಿನದಂದು ಆಕೆಯನ್ನು ಸ್ಮರಿಸಿದರೆ ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ ಎಂಬುದು ನಂಬಿಕೆ.

ಜೀವನದಲ್ಲಿ ಕೆಲವೊಮ್ಮೆ ಹಣ ಬರುತ್ತದೆ ಮತ್ತು ಹೋಗುತ್ತದೆ. ಅದಕ್ಕಾಗಿಯೇ ಲಕ್ಷ್ಮಿ ದೇವಿಯನ್ನು ಚಂಚಲೆ ಎಂದೂ ಕರೆಯುತ್ತಾರೆ. ಆದರೆ ನಾವು ಕಲಿತ ವಿದ್ಯೆ ಮತ್ತು ಕಷ್ಟಪಟ್ಟು ಸಂಪಾದಿಸಿದ ಜ್ಞಾನ ಎಲ್ಲೂ ಹೋಗುವುದಿಲ್ಲ. ಅದಕ್ಕಾಗಿಯೇ ಅನೇಕ ಜನರು ಶಾರದಾ ದೇವಿಯನ್ನು ಆಕೆಯ ಆಶೀರ್ವಾದಕ್ಕಾಗಿ ಪೂಜಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!