AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ, ಕಲ್ಲು ತೂರಾಟ, ಹಲವರಿಗೆ ಗಾಯ

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಬಿಹಾರದ ದರ್ಭಾಂಗಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದರ್ಭಾಂಗದಲ್ಲಿ ಇಂಟರ್​ನೆಟ್ ಸೇವೆಯನ್ನು ಫೆಬ್ರವರಿ 19 ರಂದು ಮಧ್ಯಾಹ್ನ 2 ರವರೆಗೆ ಸ್ಥಗಿತಗೊಳಿಸಲಾಗಿದೆ.

ಬಿಹಾರ: ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಘರ್ಷಣೆ, ಕಲ್ಲು ತೂರಾಟ, ಹಲವರಿಗೆ ಗಾಯ
ಭದ್ರತೆ
ನಯನಾ ರಾಜೀವ್
|

Updated on: Feb 18, 2024 | 9:12 AM

Share

ಸರಸ್ವತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಬಿಹಾರದ ದರ್ಭಂಗಾದಲ್ಲಿ ನಡೆದಿದೆ. ಮೂರ್ತಿ ಹಾಗೂ ಅಲ್ಲಿ ಸೇರಿದ್ದ ಜನರ ಮೇಲೆ ಕಲ್ಲು ತೂರಾಟ ನಡೆದಿದೆ. ಮೂರ್ತಿ ವಿಸರ್ಜನೆಯು ಇದೀಗ ಶಾಂತಿಯುತವಾಗಿ ಪೂರ್ಣಗೊಂಡಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ರಾಜ್ ತಿಳಿಸಿದ್ದಾರೆ.

ಎರಡೂ ಕಡೆಯ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಎರಡೂ ಕಡೆಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಇದುವರೆಗೆ 40 ಮಂದಿಯನ್ನು ಬಂಧಿಸಲಾಗಿದೆ. ದರ್ಭಂಗಾದ ಬಿಶನ್‌ಪುರ ಮತ್ತು ಹಯಾಘಾಟ್ ಪೊಲೀಸ್ ಠಾಣೆಗಳ ಪ್ರದೇಶಗಳಲ್ಲಿ ಶುಕ್ರವಾರ ಎರಡು ಸಮುದಾಯಗಳ ನಡುವೆ ಸಣ್ಣ ಘರ್ಷಣೆಗಳು ನಡೆದಿವೆ. ಭಾಗಲ್ಪುರ್ ಜಿಲ್ಲೆಯ ಲೋದಿಪುರ ಪ್ರದೇಶದಲ್ಲಿ ಶುಕ್ರವಾರ ಇದೇ ರೀತಿಯ ಘಟನೆ ವರದಿಯಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ಪರಿಸ್ಥಿತಿಯನ್ನು ತಕ್ಷಣ ನಿಯಂತ್ರಣಕ್ಕೆ ತರಲಾಯಿತು.

ಮತ್ತಷ್ಟು ಓದಿ: ತ್ರಿಪುರಾ: ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ, ಭುಗಿಲೆದ್ದ ಆಕ್ರೋಶ

ಸೀರೆ ಇಲ್ಲದ ಸರಸ್ವತಿ ವಿಗ್ರಹಕ್ಕೆ ಪೂಜೆ ವಸಂತ ಪಂಚಮಿಯಂದು ಕಾಲೇಜಿನಲ್ಲಿ ಸೀರೆ ಇಲ್ಲದ ಸರಸ್ವತಿ(Saraswati) ವಿಗ್ರಹಕ್ಕೆ ಪೂಜೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತ್ರಿಪುರಾ ಹತ್ತಿರದ ಲಿಚುಬಗಾನ್​ನ ಕಾಲೇಜಿನಲ್ಲಿ ಪೂಜೆ ಆಚರಣೆಯಲ್ಲಿ ಸರಸ್ವತಿ ವಿಗ್ರಹಕ್ಕೆ ಪೂಜೆ ಮಾಡಲಾಗಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸರ್ಕಾರಿ ಕಲಾ ಮತ್ತು ಕರಕುಶಲ ಕಾಲೇಜಿಗೆ ನುಗ್ಗಿ ಸರಸ್ವತಿ ದೇವಿಯ ವಿಗ್ರಹಕ್ಕೆ ಸೀರೆ ಹೊದಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಶಿಕ್ಷಣ ಹಾಗೂ ಜ್ಞಾನದ ಅಧಿದೇವತೆ ಶಾರದೆಯ ಜನ್ಮದಿನದಂದು ಆಕೆಯನ್ನು ಸ್ಮರಿಸಿದರೆ ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ ಎಂಬುದು ನಂಬಿಕೆ.

ಜೀವನದಲ್ಲಿ ಕೆಲವೊಮ್ಮೆ ಹಣ ಬರುತ್ತದೆ ಮತ್ತು ಹೋಗುತ್ತದೆ. ಅದಕ್ಕಾಗಿಯೇ ಲಕ್ಷ್ಮಿ ದೇವಿಯನ್ನು ಚಂಚಲೆ ಎಂದೂ ಕರೆಯುತ್ತಾರೆ. ಆದರೆ ನಾವು ಕಲಿತ ವಿದ್ಯೆ ಮತ್ತು ಕಷ್ಟಪಟ್ಟು ಸಂಪಾದಿಸಿದ ಜ್ಞಾನ ಎಲ್ಲೂ ಹೋಗುವುದಿಲ್ಲ. ಅದಕ್ಕಾಗಿಯೇ ಅನೇಕ ಜನರು ಶಾರದಾ ದೇವಿಯನ್ನು ಆಕೆಯ ಆಶೀರ್ವಾದಕ್ಕಾಗಿ ಪೂಜಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!