ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್

ಬಿಹಾರದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಿ ಒಂದು ದಿನವೂ ಆಗಿಲ್ಲ. ಅಷ್ಟರಲ್ಲಾಗಲೇ ರಾಜ್ಯ ರಾಜಧಾನಿ ಪಾಟ್ನಾದ ಬೀದಿಗಳು ಶಿಕ್ಷಕರ ನೇಮಕಾತಿಗಾಗಿ ಬೇಡಿಕೆಗಳಿಂದ ಭುಗಿಲೆದ್ದವು. ಶಿಕ್ಷಕರ ನೇಮಕಾತಿ ಪರೀಕ್ಷೆ ಜಾಹೀರಾತಿಗಾಗಿ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳ ತಾಳ್ಮೆ ಅಂತಿಮವಾಗಿ ಇಂದು ಮುರಿದುಹೋಯಿತು. ಅವರು ಇಂದು ಪಾಟ್ನಾದ ಜೆಪಿ ಗೋಲಾಂಬರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ಸಂಭವಿಸಿತು. ಇದು ಲಾಠಿ ಚಾರ್ಜ್‌ಗೆ ಕಾರಣವಾಯಿತು.

ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್
Bihar Protest

Updated on: May 08, 2026 | 4:31 PM

ಪಾಟ್ನಾ, ಮೇ 8: ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ (TRE) ಬರೆದ ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಬಿಹಾರದಲ್ಲಿ (Bihar) ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಶಿಕ್ಷಕರ ನೇಮಕಾತಿ ಪರೀಕ್ಷೆ 4.0 ರ ಅಧಿಸೂಚನೆ ವಿಳಂಬವಾದ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರ ಪರಿಣಾಮವಾಗಿ, ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ಆಕಾಂಕ್ಷಿಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದ್ದರು.

ಏಪ್ರಿಲ್ ಕಳೆದು ಮೇ ಎರಡನೇ ವಾರ ಪ್ರಾರಂಭವಾದರೂ ಪೋರ್ಟಲ್‌ನಲ್ಲಿ ಯಾವುದೇ ಅಧಿಕೃತ ನೇಮಕಾತಿ ಅಧಿಸೂಚನೆ ಇಲ್ಲ. ಇದರಿಂದ ಸಾವಿರಾರು ಅಭ್ಯರ್ಥಿಗಳು ಸೇರಿದ್ದ ಪಾಟ್ನಾ ಕಾಲೇಜು ಆವರಣದಲ್ಲಿ ಪ್ರತಿಭಟನೆ ಆರಂಭವಾಯಿತು. ಅಲ್ಲಿಂದ ಬಕರ್‌ಗಂಜ್ ಮತ್ತು ಮಚುವಾ ಟೋಲಿ ಮೂಲಕ ಪ್ರತಿಭಟನಾ ಮೆರವಣಿಗೆ ನಡೆದು, ನಂತರ ಜೆಪಿ ಗೋಲಂಬರ್ ಕಡೆಗೆ ಸಾಗಿತು.

ಇದನ್ನೂ ಓದಿ: ಬಿಹಾರ ರಾಜಕೀಯದಲ್ಲಿ ಹೊಸ ಪರ್ವ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ

ಶಿಕ್ಷಕರ ನೇಮಕಾತಿ ಪರೀಕ್ಷೆ (TRE) 4.0ರ ಅಧಿಕೃತ ಅಧಿಸೂಚನೆ ಪ್ರಕಟಣೆಯಲ್ಲಿ ವಿಳಂಬದ ನಂತರ ಶುಕ್ರವಾರ ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಮಾಹಿತಿಯನ್ನು ಸಕಾಲಿಕವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಭ್ಯರ್ಥಿಗಳು ಒಟ್ಟುಗೂಡಿದರು. ಇದರಿಂದ ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಬಳಸಿದರು. ಈ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಮಧ್ಯಪ್ರವೇಶಿಸಿದರು. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸ್ ಸಿಬ್ಬಂದಿ ಲಾಠಿಚಾರ್ಜ್ ಮಾಡಿದಾಗ, ಅನೇಕ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಓಡಿಹೋಗಲು ಪ್ರಾರಂಭಿಸಿದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿಗೆ ಟಿಎಂಸಿಗೆ ಬೆಂಬಲಿಗರಿಂದ ಮುತ್ತಿಗೆ; ಮತಗಟ್ಟೆ ಬಳಿ ಲಾಠಿ ಚಾರ್ಜ್

ಬಿಹಾರ ಸಾರ್ವಜನಿಕ ಸೇವಾ ಆಯೋಗದ (ಬಿಪಿಎಸ್‌ಸಿ) ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us