ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾಲುವೆಗೆ ಎಸೆದಿದ್ದ ಮೂವರು ಪೊಲೀಸರ ಅಮಾನತು

ಮಾನವೀಯತೆ ತೋರಬೇಕಾದ ಪೊಲೀಸರೇ ಹೀಗೆ ಅಮಾನವೀಯವಾಗಿ ನಡೆದುಕೊಂಡರೆ ಹೇಗೆ, ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು, ಅಂತಿಮವಾಗಿ ಅವರ ಕುಟುಂಬದವರಿಗೆ ವ್ಯಕ್ತಿಯ ಮುಖವನ್ನು ನೋಡಲು ಅವಕಾಶಮಾಡಿಕೊಡದೆ ಪೊಲೀಸರು ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾಲುವೆಗೆ ಎಸೆದಿದ್ದ ಮೂವರು ಪೊಲೀಸರ ಅಮಾನತು
ಪೊಲೀಸ್-ಸಾಂದರ್ಭಿಕ ಚಿತ್ರ
Image Credit source: India Today

Updated on: Oct 09, 2023 | 8:46 AM

ಮಾನವೀಯತೆ ತೋರಬೇಕಾದ ಪೊಲೀಸರೇ ಹೀಗೆ ಅಮಾನವೀಯವಾಗಿ ನಡೆದುಕೊಂಡರೆ ಹೇಗೆ, ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು, ಅಂತಿಮವಾಗಿ ಅವರ ಕುಟುಂಬದವರಿಗೆ ವ್ಯಕ್ತಿಯ ಮುಖವನ್ನು ನೋಡಲು ಅವಕಾಶಮಾಡಿಕೊಡದೆ ಪೊಲೀಸರು ಮೃತದೇಹವನ್ನು ಕಾಲುವೆಗೆ ಎಸೆದಿದ್ದರು.

ಬಿಹಾರದ  ಮುಜಾಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತಕ್ಕೀಡಾದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆಯುವಾಗ ಕ್ಯಾಮೆರಾದಲ್ಲಿ ಸೆರೆಯಾದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವಿಡಿಯೋವೊಂದು ಮುಂಜಾನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮುಜಾಫರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿಯ ಹೇಳಿಕೆಯ ಪ್ರಕಾರ, ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿದೆ ಮತ್ತು ಅದು ನಿಜವೆಂದು ತಿಳಿದುಬಂದಿದೆ. ಇದು ದುರದೃಷ್ಟಕರ ಘಟನೆ ಮತ್ತು ಅಲ್ಲಿದ್ದ ಪೊಲೀಸರು ಅದನ್ನು ನಿರ್ವಹಿಸಲು ವಿಫಲರಾಗಿದ್ದಾರೆ. ಸರಿಯಾಗಿ ಕರ್ತವ್ಯ ಮಾಡಲಿಲ್ಲ ಎಂದಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಚಾಲಕ ಕಾನ್ಸ್‌ಟೇಬಲ್‌ನನ್ನು ಅಮಾನತುಗೊಳಿಸಲಾಗಿದ್ದು, ಇಬ್ಬರು ಗೃಹ ರಕ್ಷಕ ಯೋಧರ ಗುತ್ತಿಗೆಯನ್ನು ರದ್ದುಗೊಳಿಸಲಾಗಿದೆ.

ಮತ್ತಷ್ಟು ಓದಿ: ಉತ್ತರಾಖಂಡ: ನೈನಿತಾಲ್​ನಲ್ಲಿ ಕಂದಕಕ್ಕೆ ಬಿದ್ದ ಬಸ್, 6 ಮಂದಿ ಸಾವು, 27 ಜನರಿಗೆ ಗಾಯ

ರಕ್ಷಿಸಬಹುದಾದ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಮೃತರ ಗುರುತನ್ನು ಇಲ್ಲಿಯವರೆಗೆ ಪತ್ತೆಹಚ್ಚಲು ಸಾಧ್ಯವಾಗಿಲ್ಲ.

ದಾರಿಹೋಕರಿಂದ ಸೆರೆಹಿಡಿಯಲಾದ ದೃಶ್ಯಗಳು, ಇಬ್ಬರು ಪೊಲೀಸ್ ಅಧಿಕಾರಿಗಳು ವ್ಯಕ್ತಿಯ ರಕ್ತದಿಂದ ತೊಯ್ದ ದೇಹವನ್ನು ಎಳೆದುಕೊಂಡು ಹೋಗುವುದನ್ನು ಕಂಡಿದ್ದಾರೆ. ದೇಹವನ್ನು ಕಾಲುವೆಗೆ ತಳ್ಳಲು ಅವರು ತಮ್ಮ ಲಾಠಿಗಳನ್ನು ಬಳಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us