AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !

ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಈವರೆಗೆ ಯಾವುದೆ ಸಾವು-ನೋವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !
ಈಶಾನ್ಯ ಎಕ್ಸಪ್ರೆಸ್​ ರೈಲು ಅಪಘಾತ
ವಿವೇಕ ಬಿರಾದಾರ
|

Updated on:Oct 12, 2023 | 12:33 AM

Share

ಪಾಟ್ನಾ ಅ.12: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಯಾವುದೇ ಸಾವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  ದೆಹಲಿಯ ಆನಂದ್ ವಿಹಾರ್‌ನಿಂದ ಬರುತ್ತಿದ್ದ ರೈಲು ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‌ಗೆ ತೆರಳುತ್ತಿರುವ ಅವಘಡ ಸಂಭವಿಸಿದೆ. ಎರಡರಿಂದ ಮೂರು ಎಸಿ ಬೋಗಿಗಳು ಪಲ್ಟಿಯಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ ಎಂದು ವರದಿಯಾಗಿದೆ.

ರೈಲ್ವೆ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಆ ಪ್ರದೇಶದಲ್ಲಿನ ಇತರ ವೈದ್ಯಕೀಯ ಆಸ್ಪತ್ರೆಗಳಿಗೆ ಅಲರ್ಟ್ ಮಾಡಲಾಗಿದೆ.

ಬಕ್ಸರ್ ಸಂಸದರೂ ಆಗಿರುವ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ರೈಲು ಹಳಿತಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದು, ರಘುನಾಥಪುರಕ್ಕೆ ತೆರಳುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಅವರು ಮಾತನಾಡಿದ್ದಾರೆ ಎಂದು ANI ವರದಿ ಮಾಡಿದೆ.

ರೈಲ್ವೆ ಸಹಾಯವಾಣಿ ಸಂಖ್ಯೆ

ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆಯ ಬಗ್ಗೆ ಜನರಿಗೆ ಮಾಹಿತಿ ನೀಡಲು ಭಾರತೀಯ ರೈಲ್ವೇ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಪಾಟ್ನಾ ಸಹಾಯವಾಣಿ: 9771449971

ಡಣಾಪುರ ಸಹಾಯವಾಣಿ: 8905697493

ವಾಣಿಜ್ಯ ನಿಯಂತ್ರಣ: 7759070004

ARA: 8306182542

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್: 97948 49461, 8081206628

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ವಾಣಿಜ್ಯ ನಿಯಂತ್ರಣ: 8081212134

Published On - 12:26 am, Thu, 12 October 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ