AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !

ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಈವರೆಗೆ ಯಾವುದೆ ಸಾವು-ನೋವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !
ಈಶಾನ್ಯ ಎಕ್ಸಪ್ರೆಸ್​ ರೈಲು ಅಪಘಾತ
ವಿವೇಕ ಬಿರಾದಾರ
|

Updated on:Oct 12, 2023 | 12:33 AM

Share

ಪಾಟ್ನಾ ಅ.12: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಯಾವುದೇ ಸಾವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  ದೆಹಲಿಯ ಆನಂದ್ ವಿಹಾರ್‌ನಿಂದ ಬರುತ್ತಿದ್ದ ರೈಲು ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‌ಗೆ ತೆರಳುತ್ತಿರುವ ಅವಘಡ ಸಂಭವಿಸಿದೆ. ಎರಡರಿಂದ ಮೂರು ಎಸಿ ಬೋಗಿಗಳು ಪಲ್ಟಿಯಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ ಎಂದು ವರದಿಯಾಗಿದೆ.

ರೈಲ್ವೆ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಆ ಪ್ರದೇಶದಲ್ಲಿನ ಇತರ ವೈದ್ಯಕೀಯ ಆಸ್ಪತ್ರೆಗಳಿಗೆ ಅಲರ್ಟ್ ಮಾಡಲಾಗಿದೆ.

ಬಕ್ಸರ್ ಸಂಸದರೂ ಆಗಿರುವ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ರೈಲು ಹಳಿತಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದು, ರಘುನಾಥಪುರಕ್ಕೆ ತೆರಳುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಅವರು ಮಾತನಾಡಿದ್ದಾರೆ ಎಂದು ANI ವರದಿ ಮಾಡಿದೆ.

ರೈಲ್ವೆ ಸಹಾಯವಾಣಿ ಸಂಖ್ಯೆ

ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆಯ ಬಗ್ಗೆ ಜನರಿಗೆ ಮಾಹಿತಿ ನೀಡಲು ಭಾರತೀಯ ರೈಲ್ವೇ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಪಾಟ್ನಾ ಸಹಾಯವಾಣಿ: 9771449971

ಡಣಾಪುರ ಸಹಾಯವಾಣಿ: 8905697493

ವಾಣಿಜ್ಯ ನಿಯಂತ್ರಣ: 7759070004

ARA: 8306182542

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್: 97948 49461, 8081206628

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ವಾಣಿಜ್ಯ ನಿಯಂತ್ರಣ: 8081212134

Published On - 12:26 am, Thu, 12 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ