AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !

ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಈವರೆಗೆ ಯಾವುದೆ ಸಾವು-ನೋವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  

Bihar Train Accident: ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್‌ ರೈಲು ಅಪಘಾತ !
ಈಶಾನ್ಯ ಎಕ್ಸಪ್ರೆಸ್​ ರೈಲು ಅಪಘಾತ
Follow us
ವಿವೇಕ ಬಿರಾದಾರ
|

Updated on:Oct 12, 2023 | 12:33 AM

ಪಾಟ್ನಾ ಅ.12: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ಬುಧವಾರ ರಾತ್ರಿ 9:35ರ ಸುಮಾರಿಗೆ  ಈಶಾನ್ಯ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿತಪ್ಪಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಯಾವುದೇ ಸಾವು ಸಂಭವಿಸಿಲ್ಲವೆಂದು ರೈಲ್ವೆ ಇಲಾಖೆ ತಿಳಿಸಿದೆ.  ದೆಹಲಿಯ ಆನಂದ್ ವಿಹಾರ್‌ನಿಂದ ಬರುತ್ತಿದ್ದ ರೈಲು ಅಸ್ಸಾಂನ ಗುವಾಹಟಿಯ ಕಾಮಾಖ್ಯ ಜಂಕ್ಷನ್‌ಗೆ ತೆರಳುತ್ತಿರುವ ಅವಘಡ ಸಂಭವಿಸಿದೆ. ಎರಡರಿಂದ ಮೂರು ಎಸಿ ಬೋಗಿಗಳು ಪಲ್ಟಿಯಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ ಎಂದು ವರದಿಯಾಗಿದೆ.

ರೈಲ್ವೆ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳೊಂದಿಗೆ ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಆ ಪ್ರದೇಶದಲ್ಲಿನ ಇತರ ವೈದ್ಯಕೀಯ ಆಸ್ಪತ್ರೆಗಳಿಗೆ ಅಲರ್ಟ್ ಮಾಡಲಾಗಿದೆ.

ಬಕ್ಸರ್ ಸಂಸದರೂ ಆಗಿರುವ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ರೈಲು ಹಳಿತಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದು, ರಘುನಾಥಪುರಕ್ಕೆ ತೆರಳುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಅವರು ಮಾತನಾಡಿದ್ದಾರೆ ಎಂದು ANI ವರದಿ ಮಾಡಿದೆ.

ರೈಲ್ವೆ ಸಹಾಯವಾಣಿ ಸಂಖ್ಯೆ

ಬಿಹಾರದಲ್ಲಿ ಈಶಾನ್ಯ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆಯ ಬಗ್ಗೆ ಜನರಿಗೆ ಮಾಹಿತಿ ನೀಡಲು ಭಾರತೀಯ ರೈಲ್ವೇ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ.

ಪಾಟ್ನಾ ಸಹಾಯವಾಣಿ: 9771449971

ಡಣಾಪುರ ಸಹಾಯವಾಣಿ: 8905697493

ವಾಣಿಜ್ಯ ನಿಯಂತ್ರಣ: 7759070004

ARA: 8306182542

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್: 97948 49461, 8081206628

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ವಾಣಿಜ್ಯ ನಿಯಂತ್ರಣ: 8081212134

Published On - 12:26 am, Thu, 12 October 23

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?