AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಸೇತುವೆ ಕೆಳಗೆ ರುಂಡವಿಲ್ಲದ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆ

ಬಿಹಾರದಲ್ಲಿ ಅಪರಿಚಿತ ಮಹಿಳೆಯ ಶವ ಸೇತುವೆ ಕೆಳಗೆ ಪತ್ತೆಯಾಗಿದೆ. ಮಹಿಳೆ ಹಳದಿ ಲೆಗ್ಗಿಂಗ್ ಧರಿಸಿದ್ದಳು. ಮೃತದೇಹವನ್ನು ಸೀರೆಯಿಂದ ಮುಚ್ಚಲಾಗಿತ್ತು. ಆಕೆಯ ತಲೆ ಇನ್ನೂ ನಾಪತ್ತೆಯಾಗಿದ್ದು, ಪೊಲೀಸರು ಆಕೆಯ ತಲೆ ಹಾಗೂ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಬಿಹಾರದ ಸೇತುವೆ ಕೆಳಗೆ ರುಂಡವಿಲ್ಲದ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆ
ಮಹಿಳೆ ಶವImage Credit source: Amarujala.com
ನಯನಾ ರಾಜೀವ್
|

Updated on: May 08, 2024 | 10:11 AM

Share

ಬಿಹಾರ(Bihar)ದ ಜಮುಯಿ ಅಂಬಾ ಹಳ್ಳಿಯ ಪುಲಿಯಾ ಪ್ರದೇಶದ ಸೇತುವೆಯ ಕೆಳಗೆ ರುಂಡವಿಲ್ಲದ ಮಹಿಳೆ(Woman)ಯ ಶವ(Dead Body) ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಮತ್ತು ಸ್ಥಳದಿಂದ ಮದ್ಯ, ಸ್ಪ್ರೈಟ್ ಮತ್ತು ನೀರಿನ ಬಾಟಲಿಗಳು ಸಹ ಪತ್ತೆಯಾಗಿವೆ. ಮಹಿಳೆಯ ಶವ ಪತ್ತೆಯಾದ ನಂತರ ಸ್ಥಳದಲ್ಲಿ ಸಂಚಲನ ಉಂಟಾಗಿದೆ. ಮೃತದೇಹದಿಂದ ದುರ್ವಾಸನೆಯೂ ಬರುತ್ತಿತ್ತು.

ಸದ್ಯ ತಲೆ ಪತ್ತೆಯಾಗದ ಕಾರಣ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆಗೆ ಕಾರಣಗಳು ಕೂಡ ತಿಳಿದುಬಂದಿಲ್ಲ. ಪೊಲೀಸರು ಮೃತದೇಹವನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ. ದುರ್ವಾಸನೆ ಬರುತ್ತಿದ್ದ ಕಾರಣ ಸ್ಥಳೀಯರು ಮಹಿಳೆಯ ಅರೆನಗ್ನ ಶವವನ್ನು ಮೋರಿಯೊಳಗೆ ಇರುವುದು ಪತ್ತೆ ಮಾಡಿದ್ದಾರೆ. ಬಳಿಕ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು.

ಮೃತದೇಹವನ್ನು ನೋಡಿದರೆ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವಂತೆ ಕಂಡು ಬರುತ್ತಿದೆ. ಮಹಿಳೆಯ ಗುರುತು ಮತ್ತು ಕತ್ತರಿಸಿದ ತಲೆಯ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.

ಮೃತ ಮಹಿಳೆಯನ್ನು ಗುರುತಿಸಲು ಪೊಲೀಸರು ಮೃತ ಮಹಿಳೆಯ ಫೋಟೋವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ಕಳುಹಿಸಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ಮೃತ ಮಹಿಳೆಯ ವಯಸ್ಸು ಸುಮಾರು 30 ವರ್ಷ ಎಂದು ತೋರುತ್ತದೆ. ಮೃತ ಮಹಿಳೆ ಹಳದಿ ಬಣ್ಣದ ಲೆಗ್ಗಿಂಗ್ಸ್ ಧರಿಸಿದ್ದರು. ಮೃತದೇಹವನ್ನು ಸೀರೆಯಿಂದ ಮುಚ್ಚಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ