ಬಿಹಾರದ ಸೇತುವೆ ಕೆಳಗೆ ರುಂಡವಿಲ್ಲದ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆ

ಬಿಹಾರದಲ್ಲಿ ಅಪರಿಚಿತ ಮಹಿಳೆಯ ಶವ ಸೇತುವೆ ಕೆಳಗೆ ಪತ್ತೆಯಾಗಿದೆ. ಮಹಿಳೆ ಹಳದಿ ಲೆಗ್ಗಿಂಗ್ ಧರಿಸಿದ್ದಳು. ಮೃತದೇಹವನ್ನು ಸೀರೆಯಿಂದ ಮುಚ್ಚಲಾಗಿತ್ತು. ಆಕೆಯ ತಲೆ ಇನ್ನೂ ನಾಪತ್ತೆಯಾಗಿದ್ದು, ಪೊಲೀಸರು ಆಕೆಯ ತಲೆ ಹಾಗೂ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಬಿಹಾರದ ಸೇತುವೆ ಕೆಳಗೆ ರುಂಡವಿಲ್ಲದ ಮಹಿಳೆ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆ
ಮಹಿಳೆ ಶವImage Credit source: Amarujala.com
Follow us
|

Updated on: May 08, 2024 | 10:11 AM

ಬಿಹಾರ(Bihar)ದ ಜಮುಯಿ ಅಂಬಾ ಹಳ್ಳಿಯ ಪುಲಿಯಾ ಪ್ರದೇಶದ ಸೇತುವೆಯ ಕೆಳಗೆ ರುಂಡವಿಲ್ಲದ ಮಹಿಳೆ(Woman)ಯ ಶವ(Dead Body) ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಮತ್ತು ಸ್ಥಳದಿಂದ ಮದ್ಯ, ಸ್ಪ್ರೈಟ್ ಮತ್ತು ನೀರಿನ ಬಾಟಲಿಗಳು ಸಹ ಪತ್ತೆಯಾಗಿವೆ. ಮಹಿಳೆಯ ಶವ ಪತ್ತೆಯಾದ ನಂತರ ಸ್ಥಳದಲ್ಲಿ ಸಂಚಲನ ಉಂಟಾಗಿದೆ. ಮೃತದೇಹದಿಂದ ದುರ್ವಾಸನೆಯೂ ಬರುತ್ತಿತ್ತು.

ಸದ್ಯ ತಲೆ ಪತ್ತೆಯಾಗದ ಕಾರಣ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆಗೆ ಕಾರಣಗಳು ಕೂಡ ತಿಳಿದುಬಂದಿಲ್ಲ. ಪೊಲೀಸರು ಮೃತದೇಹವನ್ನು ಗುರುತಿಸುವಲ್ಲಿ ನಿರತರಾಗಿದ್ದಾರೆ. ದುರ್ವಾಸನೆ ಬರುತ್ತಿದ್ದ ಕಾರಣ ಸ್ಥಳೀಯರು ಮಹಿಳೆಯ ಅರೆನಗ್ನ ಶವವನ್ನು ಮೋರಿಯೊಳಗೆ ಇರುವುದು ಪತ್ತೆ ಮಾಡಿದ್ದಾರೆ. ಬಳಿಕ ನಗರ ಠಾಣೆಗೆ ಮಾಹಿತಿ ನೀಡಲಾಗಿತ್ತು.

ಮೃತದೇಹವನ್ನು ನೋಡಿದರೆ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವಂತೆ ಕಂಡು ಬರುತ್ತಿದೆ. ಮಹಿಳೆಯ ಗುರುತು ಮತ್ತು ಕತ್ತರಿಸಿದ ತಲೆಯ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.

ಮೃತ ಮಹಿಳೆಯನ್ನು ಗುರುತಿಸಲು ಪೊಲೀಸರು ಮೃತ ಮಹಿಳೆಯ ಫೋಟೋವನ್ನು ಸಮೀಪದ ಪೊಲೀಸ್ ಠಾಣೆಗಳಿಗೆ ಕಳುಹಿಸಿದ್ದಾರೆ. ಪೊಲೀಸರು ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಡಬಲ್ ಮರ್ಡರ್; ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರ

ಮೃತ ಮಹಿಳೆಯ ವಯಸ್ಸು ಸುಮಾರು 30 ವರ್ಷ ಎಂದು ತೋರುತ್ತದೆ. ಮೃತ ಮಹಿಳೆ ಹಳದಿ ಬಣ್ಣದ ಲೆಗ್ಗಿಂಗ್ಸ್ ಧರಿಸಿದ್ದರು. ಮೃತದೇಹವನ್ನು ಸೀರೆಯಿಂದ ಮುಚ್ಚಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?