AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದ ಗೋರಕ್ಷಕರು; ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್

ಗೋಹತ್ಯೆ ಮಾಡುವ ಸ್ಥಳಗಳನ್ನು ಬಹಿರಂಗಪಡಿಸಲು ಮತ್ತು ಗೋಮಾಂಸ ಮಾರಾಟದಲ್ಲಿ ತೊಡಗಿರುವ ಜನರನ್ನು ಹೆಸರಿಸಲು ಆಲಂ ಅವರನ್ನು ಒತ್ತಾಯಿಸುವುದನ್ನು ವಿಡಿಯೊದಲ್ಲಿ ಕೇಳಬಹುದು.

ಬಿಹಾರದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದ ಗೋರಕ್ಷಕರು; ಕಿರುಕುಳ ನೀಡುತ್ತಿರುವ ವಿಡಿಯೊ ವೈರಲ್
ವಿಡಿಯೊ ದೃಶ್ಯ
TV9 Web
| Edited By: |

Updated on: Feb 23, 2022 | 4:41 PM

Share

ಪಟನಾ: ಬಿಹಾರದಲ್ಲಿ(Bihar) ಮುಸ್ಲಿಂ ಯುವಕನಿಗೆ ಸ್ವಯಂಘೋಷಿತ ಗೋರಕ್ಷಕರು (cow vigilantes) ಕಿರುಕುಳ ನೀಡುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಆತನನ್ನು ಹೊಡೆದು ಕೊಂದು ಆತನ ದೇಹವನ್ನು ನಾಲೆಯಲ್ಲಿ ಹೂಳಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕೆಲವು ವರದಿಗಳ ಪ್ರಕಾರ ದಾಳಿಕೋರರು ದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾರೆ. ನಂತರ ಅವರು ಅವನ ದೇಹಕ್ಕೆ ಉಪ್ಪನ್ನು ಎರಚಿ ಅದು ವೇಗವಾಗಿ ಕೊಳೆಯುವಂತೆ ಹೂತುಹಾಕಿದರು. ವಿಡಿಯೊದಲ್ಲಿ, ಸಮಸ್ತಿಪುರ ಜಿಲ್ಲೆಯ ಜನತಾ ದಳ (ಯುನೈಟೆಡ್) ಪಕ್ಷದ ಸದಸ್ಯ ಮೊಹಮ್ಮದ್ ಖಲೀಲ್ ಆಲಂ ತನ್ನ ದಾಳಿಕೋರರಿಗೆ ತನ್ನನ್ನು ಉಳಿಸುವಂತೆ ಕೈ ಜೋಡಿಸಿ ಮನವಿ ಮಾಡುವುದನ್ನು ಕಾಣಬಹುದು. ಹಲ್ಲೆಕೋರರು ವಿಡಿಯೊದಲ್ಲಿ ಕಾಣಿಸುತ್ತಿಲ್ಲ. ಗೋಹತ್ಯೆ ಮಾಡುವ ಸ್ಥಳಗಳನ್ನು ಬಹಿರಂಗಪಡಿಸಲು ಮತ್ತು ಗೋಮಾಂಸ ಮಾರಾಟದಲ್ಲಿ ತೊಡಗಿರುವ ಜನರನ್ನು ಹೆಸರಿಸಲು ಆಲಂ ಅವರನ್ನು ಒತ್ತಾಯಿಸುವುದನ್ನು ವಿಡಿಯೊದಲ್ಲಿ ಕೇಳಬಹುದು.  ಅವನು ತನ್ನ ಜೀವನದಲ್ಲಿ ಎಷ್ಟು ಗೋಮಾಂಸವನ್ನು ಸೇವಿಸಿದ್ದಾನೆ? ಅವನು ಅದನ್ನು ತನ್ನ ಮಕ್ಕಳಿಗೂ ತಿನ್ನಿಸಿದನೇ ಎಂದು ಅವರು ಅವನನ್ನು ಕೇಳುತ್ತಾರೆ. ಕುರಾನ್ ಗೋಮಾಂಸವನ್ನು ಸೇವಿಸುವಂತೆ ಸೂಚಿಸಿದೆಯೇ ಎಂದು ಅವರು ಅವರನ್ನು ಪ್ರಶ್ನಿಸಿದರು, ಅದಕ್ಕೆ ಆಲಂ ಇಲ್ಲ ಎಂದು ಉತ್ತರಿಸುತ್ತಾರೆ. ದ್ವೇಷಪೂರಿತ ಮಾತು ಮತ್ತು ಅಪವಾದಗಳಿಂದ ಕೂಡಿದ ಈ ವಿಡಿಯೊವನ್ನು ಮುಸ್ಲಿಮರ ವಿರುದ್ಧದ ದ್ವೇಷದ ಅಪರಾಧದ ಮತ್ತೊಂದು ಘಟನೆಯಾಗಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ. ಆದಾಗ್ಯೂ, ಸ್ಥಳೀಯ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದು ಇದು ಕೊಲೆಯನ್ನು ಮುಚ್ಚಿಹಾಕಲು ದಿಕ್ಕು ತಪ್ಪಿಸುವ ತಂತ್ರ ಎಂದು ಹೇಳುತ್ತಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ನಿನ್ನೆ ತಡರಾತ್ರಿ ಘಟನೆಯ ಹಿಂದಿ ಸುದ್ದಿ ಕ್ಲಿಪ್ಪಿಂಗ್ ಅನ್ನು ಟ್ವೀಟ್ ಮಾಡಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಬಿಹಾರದ ಎನ್‌ಡಿಎ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕಣ್ಮರೆಯಾಗಿದೆ, ಸ್ವತಃ ಜೆಡಿಯು ನಾಯಕನಾಗಿದ್ದ ಮುಸ್ಲಿಂ ಯುವಕನನ್ನು ಹೊಡೆದು ಜೀವಂತ ಸುಟ್ಟು ಸಮಾಧಿ ಮಾಡಲಾಗಿದೆ. ಬಿಹಾರದಲ್ಲಿ ಇಂತಹ ಘಟನೆಗಳು ಏಕೆ ನಡೆಯುತ್ತಿವೆ ಎಂದು ನಿತೀಶ್ ಕುಮಾರ್ ನಮಗೆ ಹೇಳಬೇಕು. ಜನರುಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವುದೇಕೇ?” ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.’

ಖಲೀಲ್ ಅವರ ಮೃತ ದೇಹವು ಶುಕ್ರವಾರ ಸಂಜೆ ಬುರ್ಹಿ ಗಂಡಕ್ ನದಿಯ ದಡದಿಂದ ಪತ್ತೆಯಾಗಿದೆ, ಅವರ ಕುಟುಂಬವು ಖಲೀಲ್ ಕಾಣೆಯಾಗಿದ್ದಾರೆ ಎಂದು ನಾಲ್ಕು ದಿನಗ ಹಿಂದೆ ದೂರು ನೀಡಿತ್ತು.

ಸ್ಥಳೀಯ ಪೊಲೀಸರ ಪ್ರಕಾರ, ಸಂತ್ರಸ್ತ ವ್ಯಕ್ತಿಯ ಕುಟುಂಬ ಸದಸ್ಯರು ಫೆಬ್ರವರಿ 16 ರಂದು ವರದಿಯನ್ನು ಸಲ್ಲಿಸಿದರು. ನಂತರದ ಕೆಲವು ದಿನಗಳವರೆಗೆ, ಅವರು ಸಂತ್ರಸ್ತರ ಮೊಬೈಲ್ ಸಂಖ್ಯೆಯಿಂದ ಹಣಕ್ಕಾಗಿ ಕರೆಗಳನ್ನು ಪಡೆಯುತ್ತಿದ್ದರು. ಕರೆ ಮಾಡಿದ ವ್ಯಕ್ತಿ ತಾನು ₹ 5 ಲಕ್ಷ ಸಾಲ ಪಡೆದಿರುವುದಾಗಿ ಹೇಳಿಕೊಂಡಿದ್ದು, ಕುಟುಂಬ ಪಾವತಿಸಲು ವಿಳಂಬ ಮಾಡಿದರೆ ತನ್ನ ಕಿಡ್ನಿ ಮಾರಾಟ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಫೆಬ್ರವರಿ 19 ರಂದು, ಅವರ ದೇಹವನ್ನು ನದಿಯ ದಡದಿಂದ ಮರಳಿನಲ್ಲಿ ಹೂತಿರುವ ಸ್ಥಿತಿಯಲ್ಲಿ ಪತ್ತೆಯಾಯಿತು. ಆದರೆ, ಮಂಗಳವಾರ ಸ್ಥಳೀಯ ಪೊಲೀಸರಿಗೆ ವಿಡಿಯೊ ಸಿಕ್ಕಿದ್ದು, ಜಾನುವಾರು ಕಳ್ಳಸಾಗಣೆಯಲ್ಲಿ ಆತನ ಪಾತ್ರದ ಕುರಿತು ಕೇಳಲಾಗುತ್ತಿದೆ.

ಕೊಲೆಗೆ ಕೋಮು ಬಣ್ಣ ನೀಡಲು ಹಾಗೂ ಗಮನ ಬೇರೆಡೆ ಸೆಳೆಯಲು ಈ ವಿಡಿಯೊ ರೆಕಾರ್ಡ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Big Breaking: ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನವಾಬ್​​ ಮಲಿಕ್​​ರನ್ನು ಬಂಧಿಸಿದ ಇ.ಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ