AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೋಳು ತಲೆಗೆ ಕೂದಲು ಅಂಟಿಸಿಕೊಂಡು ಯಾಮಾರಿಸಿ ಮದುವೆಯಾಗಲು ಯತ್ನ, ವರನಿಗೆ ಥಳಿತ

ತಮ್ಮ ಮಗಳಿಗೆ ಸುಂದರವಾದ ವರನನ್ನು ಹುಡುಕಿದ್ದೇನೆ ಎನ್ನುವ ಭ್ರಮೆಯಲ್ಲಿ ಕುಟುಂಬಸ್ಥರಿದ್ದರು. ಆದರೆ ತಲೆಯಲ್ಲಿ ಒಂದೂ ಕೂದಲಿಲ್ಲದಿದ್ದರೂ ಕೂದಲನ್ನು ಅಂಟಿಸಿಕೊಂಡು ಯಾಮಾರಿಸಿದ್ದ ವರ.

Video: ಬೋಳು ತಲೆಗೆ ಕೂದಲು ಅಂಟಿಸಿಕೊಂಡು ಯಾಮಾರಿಸಿ ಮದುವೆಯಾಗಲು ಯತ್ನ, ವರನಿಗೆ ಥಳಿತ
ವರ
ನಯನಾ ರಾಜೀವ್
|

Updated on: Jul 14, 2023 | 8:48 AM

Share

ತಮ್ಮ ಮಗಳಿಗೆ ಸುಂದರವಾದ ವರನನ್ನು ಹುಡುಕಿದ್ದೇನೆ ಎನ್ನುವ ಭ್ರಮೆಯಲ್ಲಿ ಕುಟುಂಬಸ್ಥರಿದ್ದರು. ಆದರೆ ತಲೆಯಲ್ಲಿ ಒಂದೂ ಕೂದಲಿಲ್ಲದಿದ್ದರೂ ಕೂದಲನ್ನು ಅಂಟಿಸಿಕೊಂಡು ಯಾಮಾರಿಸಿದ್ದ ವರ. ಈ ವಿಷಯ ತಿಳಿದ ಹುಡುಗಿಯ ಮನೆಯವರು ಆತನನ್ನು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ವರ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು. ಆದರೂ ಕರುಣೆ ತೋರದೆ ಥಳಿಸುತ್ತಲೇ ಇದ್ದರು. ವರದಿ ಪ್ರಕಾರ, ಬಿಹಾರದ ಗಯಾದ ಇಕ್ಬಾಲ್​ಪುರ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿ ದೋಭಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜೌರಾ ಗ್ರಾಮದ ಹುಡುಗಿಯನ್ನು ಮದುವೆಯಾಗಬೇಕಿತ್ತು.

ವರದಿಗಳ ಪ್ರಕಾರ, ಇದು ಆತನ ಎರಡನೇ ಮದುವೆಯಾಗಿತ್ತು. ವಧುಗಾಗಲಿ ಆಕೆಯ ಮನೆಯವರಿಗಾಗಲಿ ಆತನ ತಲೆಯಲ್ಲಿ ಕೂದಲಿಲ್ಲ ಎನ್ನುವ ಸತ್ಯ ಗೊತ್ತಿರಲಿಲ್ಲ. ಮದುವೆ ಮನೆಯಲ್ಲಿ ಸೆಹ್ರಾ ಅಡಿಯಲ್ಲಿ ವಿಗ್ ಬಳಸಿ ತಮ್ಮ ಬೋಳು ತಲೆಯನ್ನು ಮರೆಮಾಚಲು ಯತ್ನಿಸಿದ್ದ.

ಮದುಮಗನ ದಿಬ್ಬಣ ಬಂದಿತ್ತು, ಬಳಿಕ ವಿಷಯ ತಿಳಿದು ವಧುವಿನ ಕುಟುಂಬದವರು ಬೇಸರಗೊಂಡರು. ಬಳಿಕ ಆತ ಮೊದಲ ಪತ್ನಿ ಬದುಕಿದ್ದರೂ ಎರಡನೇ ಮದುವೆಯಾಗಲು ಹೊರಟಿದ್ದಾನೆ ಎನ್ನುವ ಸತ್ಯ ತಿಳಿಯುತ್ತಿದ್ದಂತೆ ಕೋಪಗೊಂಡ ಕುಟುಂಬಸ್ಥರು ಆತನನ್ನು ಥಳಿಸಿದ್ದಾರೆ.

ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನಲ್ಲಿ ಜನರು ಮದುವೆಯಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ಮಹತ್ವವನ್ನು ಚರ್ಚಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ