AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೋಳು ತಲೆಗೆ ಕೂದಲು ಅಂಟಿಸಿಕೊಂಡು ಯಾಮಾರಿಸಿ ಮದುವೆಯಾಗಲು ಯತ್ನ, ವರನಿಗೆ ಥಳಿತ

ತಮ್ಮ ಮಗಳಿಗೆ ಸುಂದರವಾದ ವರನನ್ನು ಹುಡುಕಿದ್ದೇನೆ ಎನ್ನುವ ಭ್ರಮೆಯಲ್ಲಿ ಕುಟುಂಬಸ್ಥರಿದ್ದರು. ಆದರೆ ತಲೆಯಲ್ಲಿ ಒಂದೂ ಕೂದಲಿಲ್ಲದಿದ್ದರೂ ಕೂದಲನ್ನು ಅಂಟಿಸಿಕೊಂಡು ಯಾಮಾರಿಸಿದ್ದ ವರ.

Video: ಬೋಳು ತಲೆಗೆ ಕೂದಲು ಅಂಟಿಸಿಕೊಂಡು ಯಾಮಾರಿಸಿ ಮದುವೆಯಾಗಲು ಯತ್ನ, ವರನಿಗೆ ಥಳಿತ
ವರ
Follow us
ನಯನಾ ರಾಜೀವ್
|

Updated on: Jul 14, 2023 | 8:48 AM

ತಮ್ಮ ಮಗಳಿಗೆ ಸುಂದರವಾದ ವರನನ್ನು ಹುಡುಕಿದ್ದೇನೆ ಎನ್ನುವ ಭ್ರಮೆಯಲ್ಲಿ ಕುಟುಂಬಸ್ಥರಿದ್ದರು. ಆದರೆ ತಲೆಯಲ್ಲಿ ಒಂದೂ ಕೂದಲಿಲ್ಲದಿದ್ದರೂ ಕೂದಲನ್ನು ಅಂಟಿಸಿಕೊಂಡು ಯಾಮಾರಿಸಿದ್ದ ವರ. ಈ ವಿಷಯ ತಿಳಿದ ಹುಡುಗಿಯ ಮನೆಯವರು ಆತನನ್ನು ಥಳಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ವಿಡಿಯೋದಲ್ಲಿ ವರ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು. ಆದರೂ ಕರುಣೆ ತೋರದೆ ಥಳಿಸುತ್ತಲೇ ಇದ್ದರು. ವರದಿ ಪ್ರಕಾರ, ಬಿಹಾರದ ಗಯಾದ ಇಕ್ಬಾಲ್​ಪುರ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿ ದೋಭಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜೌರಾ ಗ್ರಾಮದ ಹುಡುಗಿಯನ್ನು ಮದುವೆಯಾಗಬೇಕಿತ್ತು.

ವರದಿಗಳ ಪ್ರಕಾರ, ಇದು ಆತನ ಎರಡನೇ ಮದುವೆಯಾಗಿತ್ತು. ವಧುಗಾಗಲಿ ಆಕೆಯ ಮನೆಯವರಿಗಾಗಲಿ ಆತನ ತಲೆಯಲ್ಲಿ ಕೂದಲಿಲ್ಲ ಎನ್ನುವ ಸತ್ಯ ಗೊತ್ತಿರಲಿಲ್ಲ. ಮದುವೆ ಮನೆಯಲ್ಲಿ ಸೆಹ್ರಾ ಅಡಿಯಲ್ಲಿ ವಿಗ್ ಬಳಸಿ ತಮ್ಮ ಬೋಳು ತಲೆಯನ್ನು ಮರೆಮಾಚಲು ಯತ್ನಿಸಿದ್ದ.

ಮದುಮಗನ ದಿಬ್ಬಣ ಬಂದಿತ್ತು, ಬಳಿಕ ವಿಷಯ ತಿಳಿದು ವಧುವಿನ ಕುಟುಂಬದವರು ಬೇಸರಗೊಂಡರು. ಬಳಿಕ ಆತ ಮೊದಲ ಪತ್ನಿ ಬದುಕಿದ್ದರೂ ಎರಡನೇ ಮದುವೆಯಾಗಲು ಹೊರಟಿದ್ದಾನೆ ಎನ್ನುವ ಸತ್ಯ ತಿಳಿಯುತ್ತಿದ್ದಂತೆ ಕೋಪಗೊಂಡ ಕುಟುಂಬಸ್ಥರು ಆತನನ್ನು ಥಳಿಸಿದ್ದಾರೆ.

ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನಲ್ಲಿ ಜನರು ಮದುವೆಯಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ಮಹತ್ವವನ್ನು ಚರ್ಚಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ