AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಕಿರುಕುಳ ಪ್ರಕರಣ: ಆರೋಪಿಗೆ ಗ್ರಾಮದ ಎಲ್ಲ ಮಹಿಳೆಯರ ಬಟ್ಟೆ ಒಗೆದು ಇಸ್ತ್ರಿ ಮಾಡಿ ಕೊಡುವಂತೆ ಶಿಕ್ಷೆ ನೀಡಿದ ನ್ಯಾಯಾಲಯ

ಪ್ರಕರಣದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಆರೋಪಿಗೆ ಯಾವ ಕೆಲಸ ಮಾಡುತ್ತಿದ್ದಿ? ಎಂದು ಕೇಳಿತು. ಈ ಪ್ರಶ್ನೆಗೆ ಆರೋಪಿ ಲಾಂಡ್ರಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ. ಆ ನಂತರ ಆತನಿಗೆ ಮಹಿಳೆಯರ ಬಟ್ಟೆ ಒಗೆಯುವಂತೆ ನ್ಯಾಯಾಲಯ ಆದೇಶಿಸಿತು.

ಮಹಿಳೆಗೆ ಕಿರುಕುಳ ಪ್ರಕರಣ: ಆರೋಪಿಗೆ ಗ್ರಾಮದ ಎಲ್ಲ ಮಹಿಳೆಯರ ಬಟ್ಟೆ ಒಗೆದು ಇಸ್ತ್ರಿ ಮಾಡಿ ಕೊಡುವಂತೆ ಶಿಕ್ಷೆ ನೀಡಿದ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 22, 2021 | 6:58 PM

Share

ಮಧುಬನಿ (ಬಿಹಾರ): ಮಹಿಳೆಗೆ ಕಿರುಕುಳ ಮತ್ತು ಅಸಭ್ಯವಾಗಿ ವರ್ತಿಸಿದ ಪ್ರಕರಣವೊಂದರ ಆರೋಪಿಗೆ ಬಿಹಾರದ ಮಧುಬನಿ ಜಿಲ್ಲೆಯ ಝಂಜರಪುರದ ಸ್ಥಳೀಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಗ್ರಾಮದಲ್ಲಿರುವ ಎಲ್ಲ ಮಹಿಳೆಯರ ಬಟ್ಟೆ ತೊಳೆಯುವಂತೆ ನ್ಯಾಯಾಲಯವು ಆರೋಪಿಗಳಿಗೆ ಆದೇಶಿಸಿದೆ. ನ್ಯಾಯಾಲಯವು ಅದೇ ಷರತ್ತಿನ ಮೇಲೆ ಆರೋಪಿಗಳಿಗೆ ಜಾಮೀನು ನೀಡಿದೆ. ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುವಾಗ, ಮುಂದಿನ ಆರು ತಿಂಗಳವರೆಗೆ ಆರೋಪಿ ತನ್ನ ಮನಸ್ಸಿನಲ್ಲಿ ಮಹಿಳೆಯರ ಬಗ್ಗೆ ಗೌರವವನ್ನು ಹೊಂದಲು ಹಳ್ಳಿಯ ಎಲ್ಲ ಮಹಿಳೆಯರ ಬಟ್ಟೆಗಳನ್ನು ತೊಳೆಯಬೇಕು ಎಂದು ಹೇಳಿದೆ. ಅಷ್ಟೇ ಅಲ್ಲ, ಆರೋಪಿ ಮಹಿಳೆಯರ ಬಟ್ಟೆಗಳನ್ನು ತೊಳೆದ ನಂತರ ಬಟ್ಟೆಗಳನ್ನು ಇಸ್ತ್ರಿ ಮಾಡಿ ಹಿಂದಿರುಗಿಸಬೇಕು ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಅವಿನಾಶ್ ಕುಮಾರ್, ಪ್ರಕರಣದ ವಿಚಾರಣೆ ವೇಳೆ 20 ವರ್ಷದ ಆರೋಪಿ ಲಾಲನ್ ಕುಮಾರ್ ಗೆ ಮಹಿಳೆಯರನ್ನು ಗೌರವಿಸುವಂತೆ ಹೇಳಿದರು.

ಪ್ರಕರಣದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಆರೋಪಿಗೆ ಯಾವ ಕೆಲಸ ಮಾಡುತ್ತಿದ್ದಿ? ಎಂದು ಕೇಳಿತು. ಈ ಪ್ರಶ್ನೆಗೆ ಆರೋಪಿ ಲಾಂಡ್ರಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ. ಆ ನಂತರ ಆತನಿಗೆ ಮಹಿಳೆಯರ ಬಟ್ಟೆ ಒಗೆಯುವಂತೆ ನ್ಯಾಯಾಲಯ ಆದೇಶಿಸಿತು. ಗ್ರಾಮದಲ್ಲಿ ಸುಮಾರು 2000 ಮಹಿಳೆಯರು ಇದ್ದಾರೆ. ಇದರರ್ಥ ಆರೋಪಿಯು ಮುಂದಿನ 6 ತಿಂಗಳುಗಳ ಕಾಲ 2000 ಮಹಿಳೆಯರ ಬಟ್ಟೆಗಳನ್ನು ಉಚಿತವಾಗಿ ತೊಳೆಯಬೇಕು. ನಂತರ ಆತ ಇಸ್ತ್ರಿ ಮಾಡಿ ಹಿಂದಿರುಗಿಸಬೇಕು. ಅಲ್ಲದೆ, ಆರೋಪಿ ಲಾಲನ್ ನ್ಯಾಯಾಲಯದ ಆದೇಶವನ್ನು ಸರಿಯಾಗಿ ಅನುಸರಿಸುತ್ತಿದ್ದಾನೆಯೇ ಎಂದು ನೋಡುವುದು ಗ್ರಾಮದ ಸರ್​​ಪಂಚ್ ಅಥವಾ ಗ್ರಾಮ ಸೇವಕರ ಜವಾಬ್ದಾರಿಯಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಆರೋಪಿ ಲಾಲನ್ ತನ್ನ ಉಚಿತ ಕೆಲಸಕ್ಕಾಗಿ ಸರ್​​ಪಂಚ್ ಅಥವಾ ಗ್ರಾಮ ಸೇವಕರಿಂದ ಪ್ರಮಾಣಪತ್ರವನ್ನು ತಂದು ನ್ಯಾಯಾಲಯಕ್ಕೆ ಸಲ್ಲಿಸಬೇಕು. ನ್ಯಾಯಾಲಯವು ಜಾಮೀನು ಅರ್ಜಿಯ ಪ್ರತಿಯನ್ನು ನಿಯಮಗಳು ಮತ್ತು ಷರತ್ತುಗಳೊಂದಿಗೆ ಸರಪಂಚ ಮತ್ತು ಹಳ್ಳಿಯ ಮುಖ್ಯಸ್ಥರಿಗೆ ಕಳುಹಿಸಿದೆ. ಮಹಿಳೆಯ ಮೇಲೆ ಕಿರುಕುಳ ಮತ್ತು ದೌರ್ಜನ್ಯದ ಆರೋಪದ ಮೇಲೆ ಲಾಲನ್ ಕುಮಾರ್ ವಿರುದ್ಧ ಏಪ್ರಿಲ್ 19 ರಂದು ಲೋಖಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.

ನಂತರ ಆತನನ್ನು ಪೊಲೀಸರು ಬಂಧಿಸಿದರು. ಲೋಖಾ ಪೊಲೀಸ್ ಠಾಣೆಯ ಸಂತೋಷ್ ಕುಮಾರ್ ಮಂಡಲ್, ಆರೋಪಿ ಲಾಲನ್ ಕುಮಾರ್ ಏಪ್ರಿಲ್ 17 ರ ರಾತ್ರಿ ಗ್ರಾಮದಲ್ಲಿ ಮಹಿಳೆಯನ್ನು ಕಿರುಕುಳ ಮತ್ತು ನಿಂದನೆ ಮಾಡಲು ಯತ್ನಿಸಿದ್ದಾನೆ ಎಂದು ಹೇಳಿದರು. ಏಪ್ರಿಲ್ 18 ರಂದು ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ನಂತರ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಇದನ್ನೂ ಓದಿ: Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

(Bihar’s local court sentences a man accused of molesting women to wash clothes of all women in village as punishment)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!