AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಟಪದಿಂದ ವರನನ್ನೇ ಅಪಹರಿಸಿದ ನೃತ್ಯಗಾರ್ತಿಯರು

ಮದುವೆಯಲ್ಲಿ ಮನರಂಜನೆ ನೀಡಲೆಂದು ಕರೆಸಲಾಗಿದ್ದ ನೃತ್ಯಗಾತರ್ತಯರೇ, ವರನನ್ನೇ ಮಂಟಪದಿಂದ ಅಪಹರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತನ ಮದುವೆಗೆಂದು ಡ್ಯಾನ್ಸರ್​ಗಳನ್ನು ನೇಮಿಸಲಾಗಿತ್ತು. ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಜನರ ಪ್ರಕಾರ, ಮದುವೆಗಾಗಿ ನೇಮಿಸಿಕೊಳ್ಳುವ ನೃತ್ಯ ತಂಡವಾದ ಲೌಂಡಾ ನಾಚ್ ಪಾರ್ಟಿಯ ಪ್ರದರ್ಶಕರ ಗುಂಪೊಂದು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ವರನನ್ನು ಅಪಹರಿಸಿದೆ ಎಂದು ಆರೋಪಿಸಲಾಗಿದೆ.

ಮಂಟಪದಿಂದ ವರನನ್ನೇ ಅಪಹರಿಸಿದ ನೃತ್ಯಗಾರ್ತಿಯರು
ಅಪಹರಣ
ನಯನಾ ರಾಜೀವ್
|

Updated on: May 25, 2025 | 3:10 PM

Share

ಬಿಹಾರ, ಮೇ 25: ಮದುವೆ(Marriage)ಯಲ್ಲಿ ಮನರಂಜನೆ ನೀಡಲೆಂದು ಕರೆಸಲಾಗಿದ್ದ ನೃತ್ಯಗಾತರ್ತಯರೇ, ವರನನ್ನೇ ಮಂಟಪದಿಂದ ಅಪಹರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಆತನ ಮದುವೆಗೆಂದು ಡ್ಯಾನ್ಸರ್​ಗಳನ್ನು ನೇಮಿಸಲಾಗಿತ್ತು. ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಜನರ ಪ್ರಕಾರ, ಮದುವೆಗಾಗಿ ನೇಮಿಸಿಕೊಳ್ಳುವ ನೃತ್ಯ ತಂಡವಾದ ಲೌಂಡಾ ನಾಚ್​ನ ಸದಸ್ಯರು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ವರನನ್ನು ಅಪಹರಿಸಿದೆ ಎಂದು ಆರೋಪಿಸಲಾಗಿದೆ.

ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಯಾವುದೋ ವಿಚಾರಕ್ಕೆ ವಿವಾದ ಶುರುವಾಗಿತ್ತು, ಅದು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿತ್ತು. ಪರಿಸ್ಥಿತಿ ನಿಯಂತ್ರಣ ತಪ್ಪಿ, ಆ ತಂಡದವರು ಮದುವೆ ಮಂಟಪದೊಳಗೆ ನುಗ್ಗಿ, ವಧು ಮತ್ತು ಆಕೆಯ ಕುಟುಂಬ ಸೇರಿದಂತೆ ಅತಿಥಿಗಳ ಮೇಲೆ ದಾಳಿ ಮಾಡಿದರು.ನಾವು ಮದುವೆ ಸಮಾರಂಭದಲ್ಲಿ ನಿರತರಾಗಿದ್ದಾಗ, ಇದ್ದಕ್ಕಿದ್ದಂತೆ ಅವರು ಮನೆಗೆ ನುಗ್ಗಿ ವರನನ್ನು ಹೊಡೆಯಲು ಪ್ರಾರಂಭಿಸಿದರು. ಅವರು ವರನನ್ನು ಅಪಹರಿಸಿದರು.

ಮನೆಯೊಳಗಿನಿಂದ ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ಸಹ ದೋಚಿದರು ಎಂದು ವಧುವಿನ ತಾಯಿ ವಿದ್ಯಾವತಿ ದೇವಿ ಹೇಳಿದ್ದಾರೆ. ಹೊರಗಿನ ಕುರ್ಚಿಗಳನ್ನು ತುಂಡರಿಸಿ, ವರನನ್ನು ಥಳಿಸಿ ವಾಹನದಲ್ಲಿ ಕರೆದೊಯ್ದರು ಎಂದು ಸ್ಥಳೀಯ ಸುನಿಲ್ ಕುಮಾರ್ ಹೇಳಿದರು. ದಾಳಿಕೋರರು ಇಡೀ ಕುಟುಂಬವನ್ನು ಭಯಭೀತರನ್ನಾಗಿ ಮಾಡಿದ್ದಾರೆ ಎಂದು ಕುಟುಂಬದ ಮತ್ತೊಬ್ಬ ಸದಸ್ಯೆ  ಹೇಳಿದ್ದಾರೆ.

ಮತ್ತಷ್ಟು ಓದಿ: ಊಟ ಮಾಡ್ಕೊಂಡು ಬರ್ತೇವೆ, ವಧುವಿನ ಕೈಗೆ ಮಗು ಕೊಟ್ಟು ಹೋದ ಕಿಲಾಡಿ ಜೋಡಿ

ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಬಂದರು ಆದರೆ ಅಪಹರಣಕಾರರು ಆ ವೇಳೆಗೆ ಪರಾರಿಯಾಗಿದ್ದರು. ಆದಾಗ್ಯೂ, ಪೊಲೀಸರು ತೀವ್ರ ಹುಡುಕಾಟ ನಡೆಸಿ 7 ಗಂಟೆಗಳಲ್ಲಿ ವರನನ್ನು ಪತ್ತೆಹಚ್ಚಿದರು. ಅಪಹರಣಕಾರರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಯಿತು. ಪೊಲೀಸ್ ವರಿಷ್ಠಾಧಿಕಾರಿ ಅವಧೇಶ್ ದೀಕ್ಷಿತ್ ಮಾತನಾಡಿ, ಹಣಕಾಸಿನ ವಿವಾದವೇ ಈ ಕೃತ್ಯಕ್ಕೆ ಕಾರಣವೆಂದು ಮೇಲ್ನೋಟಕ್ಕೆ ತೋರುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!