AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುವನಂತಪುರಂನಲ್ಲಿರುವ ಸಿಪಿಎಂ ಕಚೇರಿ ಮೇಲೆ ಬಾಂಬ್​​ ದಾಳಿ; ಸ್ಕೂಟರ್​​ನಲ್ಲಿ ಬಂದು ಬಾಂಬ್ ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜನರನ್ನು ಪ್ರಚೋದಿಸುತ್ತಿದೆ. ಈ ಸಂಚಿಗೆ ಬೀಳಬೇಡಿ. ಕಾರ್ಯಕರ್ತರು ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ.

ತಿರುವನಂತಪುರಂನಲ್ಲಿರುವ ಸಿಪಿಎಂ ಕಚೇರಿ ಮೇಲೆ ಬಾಂಬ್​​ ದಾಳಿ; ಸ್ಕೂಟರ್​​ನಲ್ಲಿ ಬಂದು ಬಾಂಬ್ ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಾಂಬ್ ದಾಳಿ ಬಳಿಕ ಎಕೆಜಿ ಸೆಂಟರ್ ಬಳಿ ಜನರು ಸೇರಿರುವುದು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 01, 2022 | 2:16 PM

Share

ತಿರುವನಂತಪುರಂ:ಕೇರಳದ ರಾಜಧಾನಿ ತಿರುವನಂತಪುರಂನಲ್ಲಿರುವ(Thiruvananthapuram) ಸಿಪಿಐ(ಎಂ) (CPI(M)) ಪ್ರಧಾನ ಕಚೇರಿ ಎಕೆಜಿ ಸೆಂಟರ್ ಮೇಲೆ ಗುರುವಾರ ರಾತ್ರಿ ದುಷ್ಕರ್ಮಿಯೊಬ್ಬ ಬಾಂಬ್(Bomb) ಎಸೆದಿದ್ದಾನೆ. ಸ್ಕೂಟರ್​​ನಲ್ಲಿ ಬಂದ ವ್ಯಕ್ತಿ ಎಕೆಜಿ ಸೆಂಟರ್ ಮುಂದೆ ಬಾಂಬ್ ಬಿಸಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿಸೆರೆಯಾಗಿದೆ. ಬಾಂಬ್ ಬಿಸಾಡಿರುವ ಈ ಘಟನೆ ರಾಜ್ಯದಲ್ಲಿ ಆಡಳಿತಾರೂಢ ಸಿಪಿಎಂ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಕಳೆದ ವಾರ ವಯನಾಡ್​​​ನಲ್ಲಿ(Wayanad) ರಾಹುಲ್ ಗಾಂಧಿಯವರ (Rahul Gandhi) ಕಚೇರಿಗೆ ನುಗ್ಗಿ ಎಸ್ಎಫ್ಐ ಕಾರ್ಯಕರ್ತರು  ದಾಂಧಲೆ ನಡೆಸಿದ್ದರು. ರಾಹುಲ್ ಗಾಂಧಿಯವರು ಇಂದು(ಶುಕ್ರವಾರ) ಕೇರಳಕ್ಕೆ ಭೇಟಿ ನೀಡುತ್ತಿದ್ದು ಈ ಹೊತ್ತಲ್ಲೇ ಸಿಪಿಎಂ ಕಚೇರಿ ಮೇಲೆ ದಾಳಿ ನಡೆದಿರುವುದು ಎರಡೂ ಪಕ್ಷಗಳ ನಡುವಿನ ಜಟಾಪಟಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಗುರುವಾರ ರಾತ್ರಿ 11.30ರ ವೇಳೆಗೆ ಈ ಘಟನೆ ನಡೆದಿದೆ.ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿರುವ ಸಿಸಿಟಿವಿ ದೃಶ್ಯದಲ್ಲಿ ಸ್ಕೂಟರ್ ನಲ್ಲಿ ಬಂದ ವ್ಯಕ್ತಿಯೊಬ್ಬರು ಎಕೆಜಿ ಸೆಂಟರ್ ಬಳಿ ಸ್ಕೂಟರ್ ನಿಲ್ಲಿಸಿ ಬಾಂಬ್ ಎಸೆಯುತ್ತಿರುವುದು ಕಾಣುತ್ತದೆ . ಘಟನಾ ಸ್ಥಳಕ್ಕೆ ಆಗಮಿಸಿದ ಸಿಪಿಎಂ ನಾಯಕರು ಇದು ಬಾಂಬ್ ದಾಳಿ ಎಂದು ಆರೋಪಿಸಿದ್ದಾರೆ. ಎಕೆಜಿ ಸೆಂಟರ್ ನಲ್ಲಿದ್ದ ಕೆಲವು ನಾಯಕರು ರಾತ್ರಿ ಹೊತ್ತು ಭಾರೀ ಸ್ಫೋಟ ಸದ್ದು ಕೇಳಿದೆ ಎಂದು ಹೇಳಿದ್ದಾರೆ. ಆದಾಗ್ಯೂ ಈ ಸ್ಫೋಟಕ ಎಕೆಜಿ ಸೆಂಟರ್​​ನ ಆವರಣ ಗೋಡೆ ಮೇಲೆ ಬಿದ್ದಿದೆ.

ಪೊಲೀಸರು ತನಿಖೆ ಆರಂಭಿಸಿದ್ದು ಬಾಂಬ್ ಸ್ಕ್ವಾಡ್ ಕೂಡಾ ಸ್ಥಳಕ್ಕೆ ಆಗಮಿಸಿದೆ.

ಇದನ್ನೂ ಓದಿ
Image
DK Shivakumar: ಅಕ್ರಮ ಹಣ ವರ್ಗಾವಣೆ ಕೇಸ್; ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ
Image
ಕಾಂಗ್ರೆಸ್ ಆಡಳಿತದಲ್ಲಿ ಇದೇ‌ನು ಹೊಸದಲ್ಲ: ರಾಜಸ್ಥಾನದಲ್ಲಿ ಹತ್ಯೆ ಖಂಡಿಸಿ ‘ಭಯೋತ್ಪಾದಕ ಕಾಂಗ್ರೆಸ್‘ ಎಂದು ವಾಗ್ದಾಳಿ ನಡೆಸಿದ ಕರ್ನಾಟಕ ಬಿಜೆಪಿ
Image
Breaking: ವಯನಾಡ್​​ನಲ್ಲಿ ರಾಹುಲ್​​ ಗಾಂಧಿಯ ಕಾಂಗ್ರೆಸ್ ಕಚೇರಿ ಧ್ವಂಸಗೊಳಿಸಿದ ಎಸ್​ಎಫ್​ಐ ಕಾರ್ಯಕರ್ತರು, 8 ಮಂದಿ ವಶಕ್ಕೆ

ಈ ಕೃತ್ಯದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ ಸಿಪಿಎಂನ ಹಿರಿಯನಾಯಕ ಮತ್ತು ಎಲ್​​ಡಿಎಫ್ ಕನ್ವೀನರ್ ಇಪಿ ಜಯರಾಜನ್, ಸಿಪಿಎಂ ಕಾರ್ಯಕರ್ತರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ . ಆದಾಗ್ಯೂ ಕಾಂಗ್ರೆಸ್ ಈ ಆರೋಪ ನಿರಾಕರಿಸಿದೆ.

ಸಿಪಿಎಂ ಕಾರ್ಯಕರ್ತರು ತಿರುವನಂತಪುರಂ, ಪತ್ತನಂತಟ್ಟ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದೀಗ ಕಾಂಗ್ರೆಸ್ ಕಚೇರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜನರನ್ನು ಪ್ರಚೋದಿಸುತ್ತಿದೆ. ಈ ಸಂಚಿಗೆ ಬೀಳಬೇಡಿ. ಕಾರ್ಯಕರ್ತರು ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ.

Published On - 2:14 pm, Fri, 1 July 22

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!