AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ […]

ಹೆಲ್ಮೆಟ್​ ಹಾಕಿಲ್ಲ ಅಂತಾ.. ಬೈಕ್​ ಸವಾರನ ಹಣೆಗೆ Key ಯಿಂದ ಇರಿದೇಬಿಟ್ಟ ಖಾಕಿ!
KUSHAL V
| Edited By: |

Updated on:Jul 29, 2020 | 1:45 PM

Share

ಡೆಹ್ರಾಡೂನ್​: ಹೆಲ್ಮೆಟ್​ ಧರಿಸದ ಬೈಕ್​ ಸವಾರನಿಗೆ ಪೊಲೀಸರು ವಾಹನದ ಬೀಗದ ಕೈಯಿಂದಲೇ ಇರಿದಿರುವ ಘಟನೆ ಉತ್ತರಾಖಂಡ್​ನ ಉಧಮ್​ ಸಿಂಗ್​ ಜಿಲ್ಲೆಯ ರುದ್ರಾಪುರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬೈಕ್​ಗೆ ಪೆಟ್ರೋಲ್​ ತುಂಬಿಸಲು ಸ್ನೇಹಿತನೊಟ್ಟಿಗೆ ತೆರಳಿದ ಯುವಕನನ್ನ ಉತ್ತರಾಖಂಡದ ನಗರ ಗಸ್ತು ಪಡೆಯ ಮೂವರು ಸಿಬ್ಬಂದಿ ತಡೆದಿದ್ದಾರೆ. ಚೆಕ್​ಪಾಯಿಂಟ್​ ಕರ್ತವ್ಯದಲ್ಲಿದ್ದ ಸಿಬ್ಬಂದಿ ನೀನು ಹೆಲ್ಮೆಟ್​ ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಪ್ರಕರಣ ವಿಕೋಪಕ್ಕೆ ತಿರುಗಿದೆ. ಗಲಾಟೆಯ ಭರದಲ್ಲಿ ಪೊಲೀಸರು ಯುವಕನ ಬೈಕ್​ ಬೀಗದ ಕೈಯನ್ನ ಕಸಿದು ಆತನ ಹಣೆಗೆ ಇರಿದುಬಿಟ್ಟರಂತೆ.

ಮೂವರು ಪೊಲೀಸರನ್ನ ಅಮಾನತು ಕೊನೆಗೆ, ಇರಿತದಿಂದ ತೀವ್ರ ರಕ್ತಸ್ರಾವವಾದ ಯುವಕನನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ, ಪೊಲೀಸರ ವಿರುದ್ಧ ಪ್ರತಿಭಟನೆಗೂ ಇಳಿದಿದ್ದಾರೆ. ಸ್ಥಳೀಯ ಶಾಸಕ ರಾಜ್​ಕುಮಾರ್​ ಠುಕ್ರಾಲ್​ ಮಧ್ಯ ಪ್ರವೇಶಿಸಿದ ಮೇಲೆ ಪ್ರತಿಭಟನೆಯನ್ನ ಕೈಬಿಡಲಾಯ್ತು.

ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೂವರು ಪೊಲೀಸರನ್ನ ಅಮಾನತ್ತು ಮಾಡಲಾಗಿದೆ. ಜೊತೆಗೆ, ತನಿಖೆಗೆ ಕೂಡ ಆದೇಶ ನೀಡಲಾಗಿದೆ.

Published On - 2:14 pm, Tue, 28 July 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು