AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಂಗ್​ ಸೈಡ್​ನಿಂದ ಬಂದು ಬೈಕ್​ಗೆ​ ಡಿಕ್ಕಿ ಹೊಡೆದ ಕಾರು, ಭೀಕರ ಅಪಘಾತದ ವಿಡಿಯೋ

ಕಾರೊಂದು ರಾಂಗ್ ಸೈಡ್​ನಲ್ಲಿ ಬಂದು ಬೈಕ್ ಸವಾರನ ಪ್ರಾಣ ತೆಗೆದಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸ್ನೇಹಿತರ ಭೇಟಿಗೆಂದು ಹೊರಟಿದ್ದ ಯುವಕ ತಿರುವಿನಲ್ಲಿ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ.

ರಾಂಗ್​ ಸೈಡ್​ನಿಂದ ಬಂದು ಬೈಕ್​ಗೆ​ ಡಿಕ್ಕಿ ಹೊಡೆದ ಕಾರು, ಭೀಕರ ಅಪಘಾತದ ವಿಡಿಯೋ
ಕಾರು
ನಯನಾ ರಾಜೀವ್
|

Updated on: Sep 20, 2024 | 10:04 AM

Share

ಕಾರು ಚಾಲಕನೊಬ್ಬ ರಾಂಗ್ ಸೈಡ್​ನಲ್ಲಿ ಬಂದು ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಡಿಎಲ್​ಎಫ್ 2ನೇ ಹಂತದ ಗಾಲ್ಫ್​ ಕೋರ್ಸ್​ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನವದೆಹಲಿಯ ದ್ವಾರಕಾದ ಪೋಚನ್‌ಪುರದ ಅಕ್ಷತ್ ಗಾರ್ಗ್ ಎಂದು ಗುರುತಿಸಲಾದ ಬೈಕ್ ಸವಾರ ತನ್ನ ಬೈಕ್​ನಲ್ಲಿ ಹೆಲ್ಮೆಟ್ ಮತ್ತು ಕೈಗವಸು ಸೇರಿದಂತೆ ಎಲ್ಲವನ್ನೂ ಧರಿಸಿದ್ದ.

ಆತನ ಸ್ನೇಹಿತ ಪ್ರದ್ಯುಮನ್ ಕುಮಾರ್ ಆತನ ಹಿಂದೆ ಮತ್ತೊಂದು ಮೋಟಾರ್ ಸೈಕಲ್​ನಲ್ಲಿ ಹೋಗುತ್ತಿದ್ದ. ಕುಮಾರ್ ತೆಗೆದ ಗೋಪ್ರೊ ಕ್ಯಾಮೆರಾದಲ್ಲಿ ಈ ಅಪಘಾತ ಸೆರೆಯಾಗಿದೆ.

17 ಸೆಕೆಂಡ್‌ಗಳ ವೀಡಿಯೊದಲ್ಲಿ ಗಾರ್ಗ್ ಅವರು ತಿರುವಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಕಾರೊಂದು ಬಂದು ಡಿಕ್ಕಿ ಹೊಡೆದಿದೆ. ಕೂಡಲೇ ಗಾರ್ಗ್​ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳದಲ್ಲಿ ಪ್ರಯಾಣಿಕರು ಜಮಾಯಿಸಿದರು ಕೂಡಲೇ ಆಂಬ್ಯುಲೆನ್ಸ್​ಗೆ ಕರೆ ಮಾಡಿದರು, ಐದು ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಆಗಮಿಸಿತು ಮತ್ತು ಗಾರ್ಗ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಗಾರ್ಗ್ ಮತ್ತು ಕುಮಾರ್ ಅವರು ಡಿಎಲ್‌ಎಫ್ ಡೌನ್‌ಟೌನ್‌ನಿಂದ ಹೊರಟು ನಂತರ ಆಂಬಿಯೆನ್ಸ್ ಮಾಲ್‌ನಲ್ಲಿ ಸ್ನೇಹಿತರ ಭೇಟಿ ಮಾಡುವ ಉದ್ದೇಶದಿಂದ ದ್ವಾರಕಾದಿಂದ ಗರ್ಗ್ ಮತ್ತು ನ್ಯೂ ಪಾಲಂ ವಿಹಾರ್‌ನಿಂದ ಕುಮಾರ್ ಬೇರೆ ಬೇರೆ ಸ್ಥಳಗಳಿಂದ ಹೊರಟಿದ್ದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಸಿಕಂದರ್‌ಪುರ-ಸೈಬರ್‌ಹಬ್ ಮೇಲ್ಸೇತುವೆಯನ್ನು ದಾಟಿದ ನಂತರ, ಅವರು ಒಂದು ತಿರುವಿನ ಬಳಿಗೆ ಬಂದಾಗ ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ತಪ್ಪು ದಿಕ್ಕಿನಿಂದ ಬಂದಿತು. ಕಾರು ಗಾರ್ಗ್ ಅವರ ಮೋಟಾರ್ ಸೈಕಲ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪೊಲೀಸ್​ ಅಧಿಕಾರಿ ಮಾತನಾಡಿ, ಅಪಘಾತವನ್ನು ತಪ್ಪಿಸಲು ಕಾರು ಚಾಲಕನಿಗೆ ಅಥವಾ ಬೈಕ್​ ಸವಾರನಿಗೆ ಯಾವುದೇ ದಾರಿ ಇರಲಿಲ್ಲ, ಏಕಾಏಕಿ ಎದುರಿಗೆ ಬಂದ ಕಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್​ ಗುರುತಿಸಲಾಗದಷ್ಟು ನುಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ